Bengaluru Mysuru Expresswayಯಲ್ಲಿ ಇದೆ ಇಷ್ಟು ಮುಖ್ಯ ಪಥ!

ನಿತಿನ್ ಗಡ್ಕರಿ

ನಿತಿನ್ ಗಡ್ಕರಿ

ಇದೀಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ರಸ್ತೆಗಳ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದಾರೆ.

  • Share this:

    ಬೆಂಗಳೂರು: ಕುತೂಹಲ ಹೆಚ್ಚಿಸಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ (Bengaluru Mysuru Expressway) ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಟೋಲ್ (Bengaluru Mysuru Expressway Toll) ಕುರಿತು ಸಹ ಈಗಾಗಲೇ ಚರ್ಚೆಗಳು ನಡೆದಿವೆ. ದೇಶದ ಗಮನವನ್ನೇ ಸೆಳೆದ ಈ ಹೊಸ ಹೆದ್ದಾರಿಯಲ್ಲಿ ಈಗಾಗಲೇ ಆಕರ್ಷಣೆಯ ಕೇಂದ್ರಬಿಂದುವೂ ಆಗಿದೆ. ಸದ್ಯ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಎಷ್ಟು ಲೇನ್​ಗಳಿಗೆ ಎಂಬ ಕುರಿತು ಚರ್ಚೆಗಳು ನಡೆದಿದ್ದವು. ಇದೀಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು (Nitin Gadkari) ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ರಸ್ತೆಗಳ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದಾರೆ.


    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ 6 ಮುಖ್ಯ ಪಥಗಳು ಹಾಗೂ ಎರಡು ಸರ್ವೀಸ್ ರಸ್ತೆಗಳು ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.


    ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ನಿರ್ಬಂಧ
    ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ.


    ವಾಹನ ಪ್ರಯಾಣಿಕರೇ ಗಮನಿಸಿ
    ಅತ್ಯಂತ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ (Bengaluru Mysuru Expressway) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 12 ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ (PM Narendra Modi) ಈ ದಶಪಥವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು (Bengaluru To Mysuru Road)ಮಾರ್ಗದಲ್ಲಿಯೇ ಈ ಕಾರ್ಯಕ್ರಮ ಜರುಗಲಿರುವ ಕಾರಣ ಬೆಳಗ್ಗೆಯಿಂದ ಸಂಜೆಯವರೆಗೆ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ.


    ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ. ಈ ಕುರಿತು ಮಂಡ್ಯದ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅಧಿಕೃತ ಮಾಹಿತಿ ನೀಡಿದ್ದಾರೆ.





    ಇದನ್ನೂ ಓದಿ: Bengaluru Airport: ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೆ ಲಗ್ಗೆ, ಇದು ಕನ್ನಡಿಗರಿಗೂ ಹೆಮ್ಮೆಯ ವಿಷ್ಯ ಕಣ್ರೀ!


    ಈ ಮಾಹಿತಿಯನ್ನು ಮರೆಯಲೇಬೇಡಿ
    ಮೈಸೂರು ನಗರದಿಂದ ಬೆಂಗಳೂರಿಗೆ ಹೋಗುವ ಮುನ್ನ ಈ ಮಾಹಿತಿಯನ್ನು ಮರೆಯಬೇಡಿ. ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮುಖಾಂತರ ಸಂಚರಿಸಬೇಕಿದೆ.


    ಇದನ್ನೂ ಓದಿ: Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ


    ಮೈಸೂರು ನಗರದಿಂದ ತುಮಕೂರಿಗೆ ಪ್ರಯಾಣಿಸುವವರು ಗಮನಿಸಿ
    ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳ ಪ್ರಯಾಣಿಕರು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರಿನ ಮೂಲಕ ಪ್ರಯಾಣಿಬಹುದಾಗಿದೆ.


    Published by:ಗುರುಗಣೇಶ ಡಬ್ಗುಳಿ
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು