Bengaluru To Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಯಾಣಿಕರಿಗೆ ಖುಷಿ ಸುದ್ದಿ

ಹೆದ್ದಾರಿಯ ಚಿತ್ರ (ಚಿತ್ರಕೃಪೆ: ಡ್ರೋನ್​ಮ್ಯಾನ್)

ಹೆದ್ದಾರಿಯ ಚಿತ್ರ (ಚಿತ್ರಕೃಪೆ: ಡ್ರೋನ್​ಮ್ಯಾನ್)

bengaluru to mysuru expressway latest news: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ.

  • News18 Kannada
  • 3-MIN READ
  • Last Updated :
  • Bangalore [Bangalore], India
  • Share this:

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ (Bengaluru To Mysuru Expressway) ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಅತ್ಯಂತ ನಿರೀಕ್ಷೆ ಹುಟ್ಟಿಸಿದ್ದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ (Mandya Bypass) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ (MP Pratap Simha) ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.


    ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ. ಖುಷಿಯಿಂದ ಪ್ರಯಾಣಿಸಿ, ಆದರೆ ವೇಗವಾಗಿ ಚಲಿಸದೇ ಸುರಕ್ಷಿತವಾಗಿ ಚಲಿಸಿ ಎಂದು ಮನವಿ ಮಾಡಿದ್ದಾರೆ.



    ಇದೇ ವೇಳೆ ಡ್ರೋನ್‌ಮ್ಯಾನ್ ಎಂಬ ಪೇಜ್​ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.


    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಧಾನಿ ನರೇಂದ್ರ ಮೋದಿಯವರೇ ಘೋಷಣೆ ಮಾಡಿದ್ದರು. ಹೀಗಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ 10 ಪಥದ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗಿದೆ.


    ಗ್ರೀನ್‌ಫೀಲ್ಡ್ ಕಾರಿಡಾರ್​ನ ಭಾಗ ಈ ಹೆದ್ದಾರಿ
    ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.


    ಬೈಕ್-ಆಟೋಗಳಿಗಿಲ್ಲ ಅವಕಾಶ
    ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಸದ್ಯದಲ್ಲೇ ಸಾರ್ವಜನಿಕರ ಓಡಾಟಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಹೆದ್ದಾರಿಯಲ್ಲಿ ಬೈಕ್​ ಮತ್ತು ಆಟೋಗಳ ಓಡಾಟಕ್ಕೆ ಅವಕಾಶವಿಲ್ಲ ಎಂದು ಈಗಾಗಲೇ ಮಾಹಿತಿ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 


    ಇದನ್ನೂ ಓದಿ: Lalbagh Flower Show: ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ, 3 ದಿನಕ್ಕೇ ಲಕ್ಷಾಂತರ ಆದಾಯ


    ಹೆದ್ದಾರಿಯಲ್ಲಿರಲಿದೆ ಹಲವು ಸೌಲಭ್ಯ
    ಈ ಹೆದ್ದಾರಿಯು ಒಟ್ಟು 44 ಸಣ್ಣ ಸೇತುವೆಗಳನ್ನು ಹೊಂದಿದ್ದು 4 ರೈಲು ಮೇಲ್ಸೇತುವೆಗಳನ್ನು ಹೊಂದಿರಲಿದೆ. ಈ ಹೆದ್ದಾರಿಯಲ್ಲಿ ಅಲ್ಲಲ್ಲಿ ಫುಡ್​ ಕೋರ್ಟ್​ಗಳು, ವಿಶ್ರಾಂತಿಗೆ ಕೊಠಡಿಗಳು ಸಹ ನಿರ್ಮಾಣವಾಗಲಿವೆ. 


    ಅತೀ ಕಡಿಮೆ ಸಮಯದಲ್ಲಿ ಬೆಂಗಳೂರು-ಮೈಸೂರು ಸಂಚಾರ
    ಅಲ್ಲದೇ ಈ ಹೆದ್ದಾರಿ ಓಡಾಟಕ್ಕೆ ಮುಕ್ತವಾದ ನಂತರ 75ರಿಂದ 80 ನಿಮಿಷಗಳಲ್ಲಿ ಬೆಂಗಳೂರು ಮೈಸೂರು ನಗರಗಳ ನಡುವೆ ಸಂಚರಿಸಬಹುದು ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ. 


    ಇದನ್ನೂ ಓದಿ: Bengaluru Roads: ಗುಲಾಬಿ ಬಣ್ಣಕ್ಕೆ ತಿರುಗಿದ ಬೆಂಗಳೂರಿನ ರಸ್ತೆಗಳು!


    ಈ ಮೂಲಕ ಬೆಂಗಳೂರು ಟು ಮೈಸೂರು ಪ್ರಯಾಣಿಕರು ಹೊಸ ಎಕ್ಸ್​ಪ್ರೆಸ್ ಕಾರಿಡಾರ್​ನಲ್ಲಿ ಓಡಾಡುವ ದಿನಗಳು ಹತ್ತಿರ ಬರಲಿದೆ.

    Published by:ಗುರುಗಣೇಶ ಡಬ್ಗುಳಿ
    First published: