ಬೆಂಗಳೂರು (ಮೇ 19): ನಿರಂತರವಾಗಿ ಸುರಿದ ಮಳೆಯಿಂದ ಅನೇಕ ಅನಾಹುತಗಳು (Disasters) ಸಂಭವಿಸಿದೆ. ಈ ಸಂಬಂಧ ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಸುದ್ದಿಗೋಷ್ಠಿ ನಡೆಸಿದ್ರು. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ದಾಖಲೆ ಮಳೆ (Rain) ಸುರಿಯುತ್ತಿದೆ. ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಸಿಎಂ ನಗರ ಪ್ರದಕ್ಷಿಣೆ ವಿರುದ್ಧ ಕಿಡಿಕಾರಿದ ಸಿಎಂ, ಕೇವಲ ಫೋಟೋ ತೆಗೆಸಿಕೊಳ್ಳಲು ನಗರ ಪ್ರದಕ್ಷಿಣೆ ಮಾಡ್ಬೇಡಿ, ಬೆಂಗಳೂರು ನಗರಾಭಿವೃದ್ಧಿ (Urban Development) ಖಾತೆಯನ್ನ ಸಚಿವರಿಗೆ (Minister) ಕೊಡದೆ ಸಿಎಂ ಬಳಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿನ ಜನ ನೀರಲ್ಲಿ ಮುಳುಗಿ ಸಾಯ್ತಿದ್ದಾರೆ ಎಂದ್ರು ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ರು. ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ (Department of Meteorology) ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸೌಜನ್ಯಕ್ಕಾದ್ರು ಸಭೆ ಮಾಡಿದ್ದಾರಾ?
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಕುಮಾರಸ್ವಾಮಿ ಇಷ್ಟೊಂದು ದೊಡ್ಡ ಮಟ್ಟದ ಮಳೆ ಆದರೂ, ಶಾಸಕರು ಅಧಿಕಾರಿಗಳ ಸಭೆ ಕರೆದ್ರು ಏನಾದರೂ ಸೂಚನೆ ಕೊಟ್ಟಿದ್ದೀರಾ? ಸೌಜನ್ಯಕ್ಕಾದ್ರು ಒಂದು ಸಭೆ ಮಾಡಿದ್ದಾರಾ? ಬೆಂಗಳೂರು ಮಹಾನಗರದಲ್ಲಿ ಸಪ್ತಸಚಿವರಂತೆ ಏಳು ಸಚಿವರು ಇದ್ದಾರೆ. ಇಷ್ಟು ಜನ ಇಟ್ಟುಕೊಂಡು ನಗರದ ಜನತೆಗೆ ಏನು ಸಂದೇಶ ಕೊಡ್ತಿದ್ದಾರೆ. ಯಾವ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ತಗೊಂಡು ಹೋದ್ರಿ. ಆ ಹಣವನ್ನು ಯಾರಿಗೆ ಕೊಟ್ರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ರು.
ರಾಜ್ಯದಲ್ಲಿ ದಾಖಲೆಯ ಮಳೆಯಾಗ್ತಿದೆ
1906-07 ರಲ್ಲಿ ಬಂದಂತಹ ರೀತಿಯ ದಾಖಲೆ ಮಳೆ ಆಗುತ್ತಿದೆ. ಈ ಹಿನ್ನೆಲೆ ನಮ್ಮ ಪಕ್ಷದ ಬೆಂಗಳೂರು ಮುಖಂಡರ ಸಭೆ ಕರೆದಿದ್ದೇನೆ. ದೊಡ್ಡ ದೊಡ್ಡ ಮುಖಂಡರು ಇಲ್ಲದೇ ಇದ್ದರೂ ಮಾನವೀಯತೆಯ ಉಳಿಸಿಕೊಂಡ ಮುಖಂಡರು ನಮ್ಮ ಪಕ್ಷದಲ್ಲಿ ಇದ್ದಾರೆ. ಶಾಸಕ ಮಂಜುನಾಥ್ ಅವರು ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಾ ಇದ್ದಾರೆ ಎಂದರು.
ಇದನ್ನೂ ಓದಿ: Basavaraj Bommai: ಸಿಟಿ ರೌಂಡ್ಸ್ ಬಳಿಕ ಅಧಿಕಾರಿಗಳ ಮೇಲೆ ಸಿಎಂ ಫುಲ್ ಗರಂ; ರಾಜಕಾಲುವೆ ಅಭಿವೃದ್ಧಿಗೆ 1,600 ಕೋಟಿ ಡಿಪಿಆರ್
ಮೈತ್ರಿ ಸರ್ಕಾರದಲ್ಲಿ ಕೊಟ್ಟ ಅನುದಾನದಲ್ಲಿ ಒಂದಿಷ್ಟು ಡೈವರ್ಟ್ ಮಾಡುವ ಕೆಲಸ ಮಾಡಿದ್ದರು. ಈ ಸರ್ಕಾರಕ್ಕೆ ಕ್ಷೇತ್ರದ ಜನರಿಗೆ ಅನುದಾನ ಕೊಡುವ ಪ್ರಾಮಾಣಿಕತೆ ಇಲ್ಲದೇ ಹೋಯ್ತು. ಸದ್ಯ ಆಗಿರುವ ಡ್ಯಾಮೇಜ್ ಅನ್ನು ಮುಂದೆ ಹೇಗೆ ಸರಿ ಮಾಡುವುದು ಎಂಬುದನ್ನು ನೋಡಬೇಕು. ಎರಡು ವರ್ಷದಿಂದ ಪಾಲಿಕೆ ಚುನಾವಣೆ ನಡೆಸಿಲ್ಲ.
ಹವಾಮಾನ ಇಲಾಖೆ ಮುನ್ಸೂಚನೆ ಇದ್ರೂ ಕೇರ್ ಮಾಡಿಲ್ಲ
ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ. ಬೆಂಗಳೂರು ನಗರದ ಉಸ್ತುವಾರಿ ಸಚಿವರೂ ಸಿಎಂ ಆಗಿದ್ದಾರೆ. ಉಸ್ತುವಾರಿಗಾಗಿ ಇಬ್ಬರು ಸಚಿವರು ಪರಸ್ಪರ ಪೈಪೋಟಿಗಿಳಿದಿದ್ದೂ ನೋಡಿದ್ದೇವೆ ಎಂದರು.
ಸಿಎಂ ಸಿಟಿ ರೌಂಡ್ಸ್ಗೆ HDK ಕಿಡಿ
ಚಿಕ್ಕಮಗಳೂರಿಗೆ ಹೊಗೊಳಿ ಸರ್ಟಿಫಿಕೇಟ್ ಕೊಡಲು ಹೋಗಿದ್ದಾರೆ. ಒಂದಿಷ್ಟು ಕಡೆ ಕಾಟಾಚಾರಕ್ಕೆ, ಜನರ ಮಾತಿಗೆ ಭಯದಿಂದ ಹೋಗಿ ಬಂದಿದ್ದಾರೆ. ಕಾಲಮಿತಿಯೊಳಗೆ ಬಜೆಟ್ ಅನುಷ್ಠಾನ ಮಾಡಲು ಸಭೆ ಮಾಡಿದ್ದೀರಾ? ಪಕ್ಷದ ದೇಣಿಗೆಗಾಗಿ ಸಭೆಯಾ ಇದು ನನಗೆ ಗೊತ್ತಿಲ್ಲ. ಏಳು ಜನ ಮಂತ್ರಿಗಳು ಇರುವ ಮಹಾನಗರ ಇದು. ನಿನ್ನೆಯಿಂದ ಏನಾದ್ರೂ ಶಾಸಕರು, ಅಧಿಕಾರಿಗಳ ಸಭೆ ಕರೆದಿದ್ದಾರಾ? ಸಭೆ ನಡೆಸುವ ಕನಿಷ್ಟ ಸೌಜನ್ಯವೂ ಇವರಿಗೆ ಇಲ್ವಾ? ಎಂದು ಪ್ರಶ್ನಿಸಿದ್ದಾರೆ.
ನಾಡಿನ ಜನತೆಗೆ ಏನು ಸಂದೇಶ ಕೊಡುತ್ತಾ ಇದ್ದೀರಾ? ಹೇಳುವವರು ಕೇಳುವವರು ಯಾರೂ ಇಲ್ವಾ ನಿಮಗೆ? ಹೊರಮಾವುಗೆ ಸಚಿವರು ಹೋಗಿ ಸಮಸ್ಯೆಗಳನ್ನು ಫೆಬ್ರವರಿಗೆ ಸರಿ ಮಾಡುತ್ತೇವೆ ಅಂತಾರೆ. ಹಾಗಾದರೆ 800 ಕೋಟಿ ದುಡ್ಡು ಏನಾಯ್ತು? ಅನುದಾನ ತೆಗೆದುಕೊಂಡು ಹೋಗಿ ಏನು ಮಾಡಿದ್ದೀರಿ? ರಾಜಕಾಲುವೆ ಕಥೆ ಏನಾಯಿತು? ಎಂದು ಪ್ರಶ್ನಿಸಿದರು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ