Bengaluru Mysuru Expressway: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಲೋಕಾರ್ಪಣೆಗೆ ದಿನ ನಿಗದಿ!

ಹೊಸ ಹೆದ್ದಾರಿ

ಹೊಸ ಹೆದ್ದಾರಿ

ಮೈಸೂರು-ಕುಶಾಲನಗರ ಹೆದ್ದಾರಿಗೂ ಅದೇ ದಿನ ಭೂಮಿಪೂಜೆ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಖಚಿತಪಡಿಸಿದ್ದಾರೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

    ಬೆಂಗಳೂರು:  ಅತ್ಯಂತ ಹೆಚ್ಚಿನ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ (Bengaluru Mysuru Expressway) ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸಂಸದ ಪ್ರತಾಪ್ ಸಿಂಹ (MP Pratap Simha) ಈ ನೂತನ ದಶಪಥದ ಅಧಿಕೃತ ಲೋಕಾರ್ಪಣೆಯ ದಿನಾಂಕದ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ (Bengaluru Mysuru Expressway Latest News) ಮಾರ್ಚ್‌ 11ರಂದು ಉದ್ಘಾಟನೆ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಮಾರ್ಚ್ 11ರಂದೇ ಮೈಸೂರು-ಕುಶಾಲನಗರ ಹೆದ್ದಾರಿಗೂ ಭೂಮಿಪೂಜೆ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಖಚಿತಪಡಿಸಿದ್ದಾರೆ.


    ಈಗಾಗಲೇ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಸಾರ್ವಜನಿಕರಿಗೆ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸಾರ್ವಜನಿಕರು ಬೆಂಗಳೂರು-ಮೈಸೂರಿಗೆ ಇದೇ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ.


    3 ಗಂಟೆಯಿಂದ ಒಂದೂವರೆ ಗಂಟೆಗೆ ಇಳಿದ ಪ್ರಯಾಣದ ಅವಧಿ
    ಈ ದಶಪಥ ಹೆದ್ದಾರಿಯಿಂದ ಬೆಂಗಳೂರು-ಮೈಸೂರು ಪ್ರಯಾಣದ ಅವಧಿ ಈ ಮುನ್ನ ಇದ್ದ 3 ಗಂಟೆಯಿಂದ ಒಂದೂವರೆ ಗಂಟೆಗೆ ಇಳಿದಿದೆ! ಇದರಿಂದ ಪ್ರಯಾಣಿಕರಿಗೆ ಲಾಭವೇನೋ ಆಗಿದೆ. ಆದರೂ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ.


    ಎಲ್ಲಿ ಟ್ರಾಫಿಕ್ ಸಮಸ್ಯೆ ಆಗ್ತಿದೆ?
    ಮೈಸೂರು ಕಡೆಯಿಂದ ವೇಗವಾಗಿ ಬಂದು ಬೆಂಗಳೂರು ಸೇರುವ ಉತ್ಸಾಹದಲ್ಲಿರುವ ಪ್ರಯಾಣಿಕರು ಬೆಂಗಳೂರು ನಗರ ಪ್ರವೇಶ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಕಂಗೆಡುವಂತಾಗಿದೆ.


    ಗ್ರೀನ್‌ಫೀಲ್ಡ್ ಕಾರಿಡಾರ್​ನ ಭಾಗ ಈ ಹೆದ್ದಾರಿ
    ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.


    ಇದನ್ನೂ ಓದಿ: Ramadevara Betta: ದಕ್ಷಿಣ ಭಾರತದ ಅಯೋಧ್ಯೆ! ರಾಮದೇವರ ಬೆಟ್ಟ ಹೀಗಿದೆ ನೋಡಿ




    ಮಾರ್ಚ್ 2014 ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತ್ತು. ಈ ಪೈಕಿ ಬೆಂಗಳೂರು-ಮೈಸೂರು ಮಾರ್ಗವು ಸಹ ಒಂದಾಗಿತ್ತು. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.


    ಇದನ್ನೂ ಓದಿ: Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!


    ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿಯು ಎರಡು ಹಂತಗಳಲ್ಲಿ ನಡೆದಿತ್ತು. ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸುಮಾರು 56 ಕಿ.ಮೀ ಕಾಮಗಾರಿ ಮೊದಲ ಹಂತದಲ್ಲಿ ನಡೆದರೆ, 61 ಕಿ. ಮೀ ಉದ್ದದ ಎರಡನೇ ಪ್ಯಾಕೇಜ್, ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸಿದೆ.

    Published by:ಗುರುಗಣೇಶ ಡಬ್ಗುಳಿ
    First published: