ಅರವಿಂದ್ ಕೇಜ್ರಿವಾಲ್ ಪೊಲೀಸರ ವಿರುದ್ಧ ಸಿಟ್ಟಿಗೆದ್ದ ಕಾರಣಗಳಿಂದ ದೇಶಾದ್ಯಂತ ಮತ್ತೆ ಸುದ್ದಿಯಲ್ಲಿದ್ದಾರೆ. ಪೊಲೀಸರಿಗೂ ಅರವಿಂದ್ ಕೇಜ್ರಿವಾಲ್ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ. ಈ ಹಿಂದೆ ಆಟೋಚಾಲಕರೋರ್ವರು (Auto Driver) ದೆಹಲಿ ಸಿಎಂ ಕೇಜ್ರಿವಾಲ್ರನ್ನು (Delhi CM Arvind Kejriwal) ತಮ್ಮ ಮನೆಗೆ ಊಟಕ್ಕೆ ಕರೆದಿದ್ದರು. ಸೋಮವಾರ ತಡರಾತ್ರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಊಟಕ್ಕೆ ಕರೆದಿದ್ದ ಆಟೋ ಚಾಲಕನ ಮನೆಗೆ ಹೋಗುತ್ತಿದ್ದಾಗ ಅವರನ್ನು ಪೊಲೀಸರು ಭದ್ರತಾ ಕಾರಣಗಳಿಗಾಗಿ ತಡೆದು ನಿಲ್ಲಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 'ಜನತಾ ಕಾ ಆದ್ಮಿ ಹೂ' ಎಂದು ಪೊಲೀಸ್ (Arvind Kejriwal Warns Police) ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.
ગુજરાતની જનતા એટલે જ દુઃખી છે કેમ કે ભાજપના નેતાઓ જનતાની વચ્ચે નથી જતા અને અમે જનતાની વચ્ચે જઈએ છે તો તમે રોકો છો - CM @ArvindKejriwal
પ્રોટોકોલ તો એક બહાનું છે... હકીકતમાં કેજરીવાલને સામાન્ય જનતાની વચ્ચે જતા રોકવાનું છે pic.twitter.com/CqFXbWGlf0
— AAP Gujarat । Mission2022 (@AAPGujarat) September 12, 2022
ಎಎಪಿ ಟ್ವೀಟ್ ಮಾಡಿದ ವೀಡಿಯೊದಲ್ಲಿ ಇಬ್ಬರು ಆಮ್ ಆದ್ಮಿ ಕಾರ್ಯಕರ್ತರ ಪಕ್ಕದಲ್ಲಿ ಕುಳಿತಿರುವ ಅರವಿಂದ್ ಕೇಜ್ರಿವಾಲ್, ಕರ್ತವ್ಯದಲ್ಲಿರುವ ಅಧಿಕಾರಿ ವಿರುದ್ದ ಸಿಟ್ಟಿಗೆದ್ದಿರುವ ಕಂಡುಬರುತ್ತದೆ. "ಇದಕ್ಕಾಗಿಯೇ ಗುಜರಾತ್ನ ಜನರು ಅತೃಪ್ತರಾಗಿದ್ದಾರೆ. ಪ್ರೋಟೋಕಾಲ್ ಅನ್ನು ಉಲ್ಲೇಖಿಸಿ ನೀವು ಜನರ ಬಳಿಗೆ ಹೋಗುವುದನ್ನು ತಡೆಯುತ್ತಿದ್ದೀರಿ. ರಾಜ್ಯದ ನಾಯಕರು ಅವರ ಬಳಿಗೆ ಹೋಗುವುದಿಲ್ಲ. ಪ್ರೋಟೋಕಾಲ್ ಅನ್ನು ಮುರಿದು ಜನರನ್ನು ಭೇಟಿ ಮಾಡಲು ನಿಮ್ಮ ನಾಯಕರನ್ನು ಆಗ್ರಹಿಸಿ" ಎಂದು ಅರವಿಂದ್ ಕೇಜ್ರಿವಾಲ್ ಹೇಳುತ್ತಿರುವುದು ಸಹ ವಿಡಿಯೊದಲ್ಲಿ ಕೇಳಿಸುತ್ತದೆ.
ಇದನ್ನೂ ಓದಿ: Kohinoor Diamond: ಕೊಹಿನೂರ್ ವಜ್ರ ಭಾರತದ ಈ ದೇವರಿಗೆ ಸೇರಿದ್ದು, ತಕ್ಷಣ ಮರಳಿಸಲು ಆಗ್ರಹ
ನಮಗೆ ನಿಮ್ಮ ಭದ್ರತೆ ಬೇಡ
“ನಿಮ್ಮ ಭದ್ರತೆ ನಮಗೆ ಬೇಡ. ನಿಮ್ಮ ಭದ್ರತೆಯನ್ನು ನೀವು ತೆಗೆದುಕೊಳ್ಳಬಹುದು ಅಥವಾ ತೆಗೆದುಕೊಳ್ಳದೆಯೂ ಇರಬಹುದು. ನೀವು ನಮ್ಮನ್ನು ಭದ್ರತೆ ತೆಗೆದುಕೊಳ್ಳುವಂತೆ ಏಕೆ ಒತ್ತಾಯಿಸುತ್ತಿದ್ದೀರಿ? ನೀವು ನಮ್ಮನ್ನು ಒತ್ತೆಯಾಳಾಗಿ ಇರಿಸಿದ್ದೀರಿ ”ಎಂದು ಕೇಜ್ರಿವಾಲ್ ಅಧಿಕಾರಿಗೆ ಹೇಳಿದ್ದಾರೆ.
अहमदाबाद में ऑटो चालक विक्रमभाई दंताणी बड़े प्यार से अपने घर खाने पर लेकर गए, पूरे परिवार से मिलवाया, स्वादिष्ट खाने के साथ बहुत आदर-सत्कार दिया। इस अपार स्नेह के लिए विक्रमभाई और गुजरात के सभी ऑटो चालक भाइयों का ह्रदय से धन्यवाद। pic.twitter.com/SiFCZOizaW
— Arvind Kejriwal (@ArvindKejriwal) September 12, 2022
ಇದನ್ನೂ ಓದಿ: Electric Highway: ಭಾರತದಲ್ಲೂ ಎಲೆಕ್ಟ್ರಿಕ್ ಹೈವೇ ನಿರ್ಮಾಣ, ಗಾಡಿ ಓಡಿದ್ರೆ ಚಾರ್ಜ್ ಆಗುತ್ತೆ!
ಇತ್ತೀಚಿಗಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಗ್ನಿಪರೀಕ್ಷೆಯಲ್ಲಿ ಗೆದ್ದಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಗೆದ್ದಿದ್ದಾರೆ. 70 ಸದಸ್ಯರ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದ್ದರೆ, ಬಿಜೆಪಿ ಎಂಟು ಶಾಸಕರನ್ನು ಹೊಂದಿದೆ. ಈ ಪೈಕಿ 58 ಶಾಸಕರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (AAP) ಪರವಾಗಿ ಮತ ಚಲಾಯಿಸಿದ್ದಾರೆ. ತಮ್ಮ ಸರ್ಕಾರವನ್ನು ಉರುಳಿಸಲು ಪ್ರತಿಪಕ್ಷ ಬಿಜೆಪಿಯ 'ಆಪರೇಷನ್ ಕಮಲ' ವಿಫಲವಾಗಿದೆ ಎಂದು ಆರೋಪಿಸಿ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯವನ್ನು ಪ್ರಸ್ತಾಪಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ