Budget 2023: ಮಧ್ಯಮ ವರ್ಗಕ್ಕೆ ಬಿಗ್​ ರಿಲೀಫ್, 5ರಿಂದ 7 ಲಕ್ಷದವರೆಗೆ ಟ್ಯಾಕ್ಸ್​​ ಇಲ್ಲ!

ಕೇಂದ್ರ ಬಜೆಟ್​ 2023

ಕೇಂದ್ರ ಬಜೆಟ್​ 2023

ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​ ನೀಡಿದೆ. 5 ರಿಂದ 7  ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. 

ಮುಂದೆ ಓದಿ ...
  • News18 Kannada
  • 3-MIN READ
  • Last Updated :
  • Delhi, India
  • Share this:

ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ (Middle Class) ಬಂಪರ್​ ನ್ಯೂಸ್​ (Bumper News) ನೀಡಿದೆ. 5 ರಿಂದ 7  ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. 


5-7 ಲಕ್ಷಕ್ಕೆ ಟ್ಯಾಕ್ಸ್​ ಇಲ್ಲ!


7 ಲಕ್ಷ ರೂ ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.


ವರ್ಷಕ್ಕೆ ₹ 3 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. 15 ಲಕ್ಷ ರೂ. ಆದಾಯಕ್ಕಿಂತೆ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.

₹ 0-3 ಲಕ್ಷಯಾವುದೇ ತೆರಿಗೆ ಇಲ್ಲ
₹ 3-6 ಲಕ್ಷ5 %
₹ 6-9 ಲಕ್ಷ10 %
₹ 9-12 ಲಕ್ಷ15 %
₹ 12-15 ಲಕ್ಷ20 %
₹ 15 ಲಕ್ಷಕ್ಕಿಂತ ಹೆಚ್ಚು30 %

ಇದನ್ನೂ ಓದಿ: ದೇಶದ ಚಿನ್ನಪ್ರಿಯರಿಗೆ ಬಿಗ್​ ಶಾಕ್, ಬೆಳ್ಳಿ-ಬಂಗಾರ ಇನ್ಮುಂದೆ ಬಲು ದುಬಾರಿ!


ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5 ಮಹತ್ವದ ಕ್ರಮಗಳನ್ನು ಘೋಷಿಸಿದ್ದಾರೆ.


1) ₹ 7 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ.
2) ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್​ ಸ್ಲ್ಯಾಬ್​ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದೆ.
3) ₹ 15.5 ಲಕ್ಷ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ ₹ 52,500 ಸ್ಟಾಂಡರ್ಡ್​ ಡಿಡಕ್ಷನ್ ಸೌಲಭ್ಯ ಸಿಗಲಿದೆ.
4) ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್​ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ
5) ನಿವೃತ್ತರಾದಾಗ ಸಿಗುವ ರಜೆ ನಗದೀಕರಣ ಸೌಲಭ್ಯದ ಮೇಲೆ ಈವರೆಗೆ ₹ 3 ಲಕ್ಷಕ್ಕೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು ₹ 25 ಲಕ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.


ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಸಂಸದರು!


ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.


ಕಳೆದ ಹಲವು ವರ್ಷಗಳಿಂದ ತೆರಿಗೆ ಸ್ಲ್ಯಾಬ್‌ನಲ್ಲಿ ಬದಲಾವಣೆ ಮಾಡಬೇಕೆಂಬ ಬೇಡಿಕೆ ಇತ್ತು. ಅಂತಿಮವಾಗಿ ಇಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. 3 ಲಕ್ಷದವರೆಗೆ ತೆರಿಗೆ ಮನ್ನಾ ಆಗಲಿದೆ.


ಒಂದು ವರ್ಷ ಉಚಿತ ಆಹಾರ!


ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಅಂತ್ಯೋದಯ ಯೋಜನೆಯಡಿ ಬಡವರಿಗೆ ಉಚಿತ ಧಾನ್ಯ ಪೂರೈಕೆಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ತಲಾ ಆದಾಯ ದ್ವಿಗುಣಗೊಂಡು 1.97 ಲಕ್ಷ ರೂ. ಈ 9 ವರ್ಷಗಳಲ್ಲಿ ಭಾರತದ ಆರ್ಥಿಕತೆ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ.

Published by:ವಾಸುದೇವ್ ಎಂ
First published: