ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ (Middle Class) ಬಂಪರ್ ನ್ಯೂಸ್ (Bumper News) ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
5-7 ಲಕ್ಷಕ್ಕೆ ಟ್ಯಾಕ್ಸ್ ಇಲ್ಲ!
7 ಲಕ್ಷ ರೂ ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.
ವರ್ಷಕ್ಕೆ ₹ 3 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. 15 ಲಕ್ಷ ರೂ. ಆದಾಯಕ್ಕಿಂತೆ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.
₹ 0-3 ಲಕ್ಷ | ಯಾವುದೇ ತೆರಿಗೆ ಇಲ್ಲ |
₹ 3-6 ಲಕ್ಷ | 5 % |
₹ 6-9 ಲಕ್ಷ | 10 % |
₹ 9-12 ಲಕ್ಷ | 15 % |
₹ 12-15 ಲಕ್ಷ | 20 % |
₹ 15 ಲಕ್ಷಕ್ಕಿಂತ ಹೆಚ್ಚು | 30 % |
ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 5 ಮಹತ್ವದ ಕ್ರಮಗಳನ್ನು ಘೋಷಿಸಿದ್ದಾರೆ.
1) ₹ 7 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ.
2) ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್ ಸ್ಲ್ಯಾಬ್ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದೆ.
3) ₹ 15.5 ಲಕ್ಷ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ ₹ 52,500 ಸ್ಟಾಂಡರ್ಡ್ ಡಿಡಕ್ಷನ್ ಸೌಲಭ್ಯ ಸಿಗಲಿದೆ.
4) ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ
5) ನಿವೃತ್ತರಾದಾಗ ಸಿಗುವ ರಜೆ ನಗದೀಕರಣ ಸೌಲಭ್ಯದ ಮೇಲೆ ಈವರೆಗೆ ₹ 3 ಲಕ್ಷಕ್ಕೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು ₹ 25 ಲಕ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಸಂಸದರು!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.
ಕಳೆದ ಹಲವು ವರ್ಷಗಳಿಂದ ತೆರಿಗೆ ಸ್ಲ್ಯಾಬ್ನಲ್ಲಿ ಬದಲಾವಣೆ ಮಾಡಬೇಕೆಂಬ ಬೇಡಿಕೆ ಇತ್ತು. ಅಂತಿಮವಾಗಿ ಇಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. 3 ಲಕ್ಷದವರೆಗೆ ತೆರಿಗೆ ಮನ್ನಾ ಆಗಲಿದೆ.
ಒಂದು ವರ್ಷ ಉಚಿತ ಆಹಾರ!
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಅಂತ್ಯೋದಯ ಯೋಜನೆಯಡಿ ಬಡವರಿಗೆ ಉಚಿತ ಧಾನ್ಯ ಪೂರೈಕೆಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ತಲಾ ಆದಾಯ ದ್ವಿಗುಣಗೊಂಡು 1.97 ಲಕ್ಷ ರೂ. ಈ 9 ವರ್ಷಗಳಲ್ಲಿ ಭಾರತದ ಆರ್ಥಿಕತೆ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ