Budget 2023: ಅಳೆದು ತೂಗಿ ಲೆಕ್ಕಾಚಾರ, ಬಜೆಟ್​ನಲ್ಲಿ ಹಣಕಾಸು ಸಚಿವೆ ಮಾಡಿದ ಪ್ರಮುಖ ಘೋಷಣೆಗಳಿವು!

ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್

Union Budget 2023: ಬಜೆಟ್​ನಲ್ಲಿ ಮೂಲಸೌಕರ್ಯ ಮತ್ತು ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಯಂತಹ ಪ್ರಮುಖ ಕ್ಷೇತ್ರಗಳನ್ನು ಉತ್ತೇಜಿಸುವತ್ತ ಗಮನಹರಿಸುವುದಾಗಿ ಹೇಳಿದರು. ಇದೇ ವೇಳೆ ಆದಾಯ ತೆರಿಗೆ ಮಿತಿಯನ್ನು ಏಳು ಲಕ್ಷಕ್ಕೆ ಏರಿಸುವ ಘೋಷಣೆಯನ್ನೂ ಮಾಡಿದ್ದಾರೆ. ಹಾಗಾದ್ರೆ ಇಂದಿನ ಬಜೆಟ್​ನಲ್ಲಿ ಮಾಡಲಾದ ಪ್ರಮುಖ ಘೋಷಣೆಗಳು ಯಾವುದು? ಇಲ್ಲಿದೆ ನೋಡಿ ವಿವರ

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • New Delhi, India
  • Share this:

ಬಹುನಿರೀಕ್ಷಿತ ಕೇಂದ್ರ ಬಜೆಟ್ (Budget 2023) ಮಂಡನೆಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ್ದು, ಇದು ಮಧ್ಯಮ ವರ್ಗದ ಜನರ ಹೊರೆಯನ್ನು ಬಹಳಷ್ಟು ಮಟ್ಟಿಗೆ ಇಳಿಸಿದೆ. ನಿರ್ಮಲಾ ಸೀತಾರಾಮನ್ ಬಜೆಟ್​ ಭಾಷಣದಲ್ಲಿ ಆರ್ಥಿಕ ಬೆಳವಣಿಗೆಯ ವ್ಯಾಪ್ತಿ ವಿಸ್ತರಣೆ, ಮೂಲಸೌಕರ್ಯ ಮತ್ತು ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಯಂತಹ ಪ್ರಮುಖ ಕ್ಷೇತ್ರಗಳನ್ನು ಉತ್ತೇಜಿಸುವತ್ತ ಗಮನಹರಿಸುವುದಾಗಿ ಹೇಳಿದರು. ಇದೇ ವೇಳೆ ಆದಾಯ ತೆರಿಗೆ ಮಿತಿಯನ್ನು ಏಳು ಲಕ್ಷಕ್ಕೆ ಏರಿಸುವ ಘೋಷಣೆಯನ್ನೂ ಮಾಡಿದ್ದಾರೆ. 


ಹಾಗಾದ್ರೆ ಇಂದಿನ ಬಜೆಟ್​ನಲ್ಲಿ ಮಾಡಲಾದ ಪ್ರಮುಖ ಘೋಷಣೆಗಳು ಯಾವುದು? ಇಲ್ಲಿದೆ ನೋಡಿ ವಿವರ


-ರೈಲ್ವೆಗೆ 2.4 ಲಕ್ಷ ಕೋಟಿ ರೂಪಾಯಿಗಳು ಅನುದಾನ, ಇದು ಇದುವರೆಗಿನ ಅತಿ ಹೆಚ್ಚು ಹಂಚಿಕೆಯಾಗಿದೆ


-ಕೃಷಿ ಸಾಲದ ಗುರಿ 20 ಲಕ್ಷ ಕೋಟಿಗೆ ಏರಿಕೆ


-ಮೊಬಿಲಿಟಿ ಇನ್ಫ್ರಾದಡಿ 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಹೆಲಿಪೋರ್ಟ್‌ಗಳ ನಿರ್ಮಾಣ


-ಪ್ರವಾಸೋದ್ಯಮಕ್ಕಾಗಿ ಚಾಲೆಂಜ್ ಮೋಡ್ ಮೂಲಕ 50 ಸ್ಥಳಗಳನ್ನು ಆಯ್ಕೆ ಮಾಡಿ ಅಭಿವೃದ್ಧಿ.


ಬಜೆಟ್​ ಸಂಬಂಧಿತ ಕ್ಷಣ ಕ್ಷಣದ ಮಾಹಿತಿಯ ಲೈವ್​ ಬ್ಲಾಗ್​: ನಿರ್ಮಲಾ ಆಯವ್ಯಯದ ಮೇಲೆ ಎಲ್ಲರ ಕಣ್ಣು


-ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ಎರಡು ವರ್ಷಗಳವರೆಗೆ ಲಭ್ಯವಾಗುವಂತೆ ಮಾಡಲಾಗುತ್ತದೆ, 2 ಲಕ್ಷದವರೆಗಿನ ಠೇವಣಿಗಳನ್ನು ಶೇಕಡಾ 7.5 ಬಡ್ಡಿ.


-ಹಿರಿಯ ನಾಗರಿಕರ ಉಳಿತಾಯ ಯೋಜನೆ ಠೇವಣಿ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಏರಿಕೆ


-ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಿಸಲಾಗಿದೆ.


-ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ.


-ಪ್ರಧಾನಿ ಆವಾಸ್ ಯೋಜನೆಗೆ ಶೇ 66ರಷ್ಟು ಹೆಚ್ಚಳವಾಗಿದ್ದು, 79,000 ಕೋಟಿ ರೂ. ಮಾಡಲಾಗಿದೆ.


-ಬಂಡವಾಳ ಹೂಡಿಕೆ ವೆಚ್ಚವನ್ನು 33 ಪ್ರತಿಶತದಿಂದ 10 ಲಕ್ಷ ಕೋಟಿಗೆ ಹೆಚ್ಚಿಳ, ಇದು 2024 ರ ಆರ್ಥಿಕ ವರ್ಷದಲ್ಲಿ GDP ಶೇಕಡಾ 3.3 ಆಗಿದೆ.


-ಕೇಂದ್ರದ ಪರಿಣಾಮಕಾರಿ ಬಂಡವಾಳ ವೆಚ್ಚ - 13.7 ಲಕ್ಷ ಕೋಟಿ ರೂ


-ಪ್ರಮುಖ ಸ್ಥಳಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳು


-2047 ರ ವೇಳೆಗೆ ಸಿಕಲ್ ಸೆಲ್ ಅನೀಮಿಯ (ರಕ್ತಹೀನತೆ) ತೊಡೆದು ಹಾಕಲು ಯೋಜನೆ.


-ಮುಂದಿನ ಮೂರು ವರ್ಷಗಳಲ್ಲಿ ಆದಿವಾಸಿಗಳಿಗೆ ಸುರಕ್ಷಿತ ವಸತಿ, ನೈರ್ಮಲ್ಯ, ಕುಡಿಯುವ ನೀರು ಮತ್ತು ವಿದ್ಯುತ್‌ ಸೌಲಭ್ಯಕ್ಕಾಗಿ 15,000 ಕೋಟಿ ರೂ.


ಇದನ್ನೂ ಓದಿ: Budget 2023: ಜನ ಸಾಮಾನ್ಯರಿಗೆ ಬಿಗ್ ಶಾಕ್! ಬಜೆಟ್‌ ನಂತರ ಇವುಗಳ ಬೆಲೆ ಹೆಚ್ಚಾಗುತ್ತಾ?


-ಮ್ಯಾನ್‌ಹೋಲ್‌ನಿಂದ ಮಷಿನ್-ಹೋಲ್ ಮೋಡ್‌ಗೆ: ಎಲ್ಲಾ ನಗರಗಳು ಮತ್ತು ಪಟ್ಟಣಗಳು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ 100 ಪ್ರತಿಶತ ಪರಿವರ್ತನೆಗಾಗಿ ಸಕ್ರಿಯಗೊಳಿಸಲಾಗುತ್ತದೆ


-ಏಕಲವ್ಯ ಮಾದರಿ ವಸತಿ ಶಾಲೆಗಳು, ಇದಕ್ಕಾಗಿ 38,800 ಶಿಕ್ಷಕರ ನೇಮಕ.


-'ಮೇಕ್ AI ಇನ್ ಇಂಡಿಯಾ', 'ಮೇಕ್ AI ವರ್ಕ್ ಫಾರ್ ಇಂಡಿಯಾ': ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ AIಗಾಗಿ ಮೂರು ಉನ್ನತ ಕೇಂದ್ರಗಳನ್ನು ಸ್ಥಾಪನೆ.


-63,000 ಕ್ರೆಡಿಟ್ ಸೊಸೈಟಿಗಳ ಗಣಕೀಕರಣಕ್ಕೆ 2,516 ಕೋಟಿ ರೂ.


-ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ 5G ಸೇವೆಗಳನ್ನು ಬಳಸಿಕೊಂಡು ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಲು 100 ಲ್ಯಾಬ್‌ಗಳ ಸ್ಥಾಪನೆ


-ನಿವ್ವಳ-ಶೂನ್ಯ ಹೊರಸೂಸುವಿಕೆ ಗುರಿಗಳಿಗೆ ಶಕ್ತಿ ಪರಿವರ್ತನೆಗಾಗಿ 35,000 ಕೋಟಿ ರೂ


-ಪಳೆಯುಳಿಕೆ ಇಂಧನದ ಮೇಲೆ ಕಡಿಮೆ ಅವಲಂಬನೆಗಾಗಿ ಹಸಿರು ಹೈಡ್ರೋಜನ್ ಮಿಷನ್


-4000 MWh ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆಗಳನ್ನು ಬೆಂಬಲಿಸಲಾಗುತ್ತದೆ


-ವ್ಯವಹಾರವನ್ನು ಸುಲಭಗೊಳಿಸಲು 39,000 ಅನುಸರಣೆಗಳನ್ನು ಕಡಿಮೆ ಮಾಡಲಾಗುತ್ತದೆ,


-30 ಸ್ಕಿಲ್ ಇಂಡಿಯಾ ಅಂತರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ.


-ನೈಸರ್ಗಿಕ ಕೃಷಿ - ಒಂದು ಕೋಟಿ ರೈತರಿಗೆ ನೆರವು ಸಿಗಲಿದೆ.




ಒಟ್ಟಾರೆಯಾಗಿ ಈ ಬಾರಿಯ ಬಜೆಟ್​ ಹಲವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಅದರಲ್ಲೂ ಮಧ್ಯಮ ಶ್ರಮಿಕ ವರ್ಗದ ಜನರ ಹೊರೆಯನ್ನು ಕಡಿಮೆ ಮಾಡಿದ್ದು, ಇದೊಂದು ದೂರದೃಷ್ಟಿಯಿಂದ ರೂಪಿಸಲಾದ ಬಜೆಟ್​ ಎನ್ನಲಾಗಿದೆ.

Published by:Precilla Olivia Dias
First published: