ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಲೋಕಸಭೆಯಲ್ಲಿ ಬಜೆಟ್ ಭಾಷಣ (Budget Speech) ಆರಂಭಿಸಿದರು. ಮುಂಜಾನೆ ರಾಷ್ಟ್ರಪತಿಗೆ ಬಜೆಟ್ ಪ್ರತಿ ನೀಡಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ಸಚಿವರು ಬಜೆಟ್ಗೆ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದರು. ಇದು ಅಮೃತಕಾಲದ ಮೊದಲ ಬಜೆಟ್. ಇದು ಹಿಂದಿನ ಬಜೆಟ್ಗಳ ದೃಢವಾದ ಅಡಿಪಾಯಗಳ ಮೇಲೆ ಸಿದ್ಧಗೊಂಡಿದೆ. ನಮ್ಮ ಯುವಕರು (Youths) , ಮಹಿಳೆಯರು (Womens) ಮತ್ತು ದಲಿತರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಕೊವಿಡ್ (Covid) ಸೇರಿದಂತೆ ಹಲವು ಸವಾಲುಗಳ ನಡುವೆಯೂ ಭಾರತವು ಉಜ್ವಲ ಭವಿಷ್ಯದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ವಿಶ್ವಮಟ್ಟದ ಹಲವು ಸಂಸ್ಥೆಗಳು ಗುರುತಿಸಿವೆ. ಇದರ ಜೊತೆಗೆ ಶೇ 7 ರಷ್ಟು ಜಿಡಿಪಿ ಅದ್ಭುತ ಬೆಳವಣಿಗೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಸಂತಸ ವ್ಯಕ್ತಪಡಿಸಿದರು.
80 ಕೋಟಿ ಜನರಿಗೆ ಆಹಾರ!
ಕೊವಿಡ್ ಸಂಕಷ್ಟ ಸಂದರ್ಭದಲ್ಲಿ ಯಾವುದೇ ಭಾರತೀಯರು ಹಸಿವಿನಿಂದ ಬಳಲಲು ಅವಕಾಶ ನೀಡಲಿಲ್ಲ. 80 ಕೋಟಿ ಜನರಿಗೆ ಆಹಾರ ಒದಗಿಸಲಾಗಿದೆ. ಜಾಗತಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತಕ್ಕೆ ಜಿ-20 ನಾಯಕತ್ವ ಲಭಿಸಿದೆ. ವಸುಧೈವ ಕುಟುಂಬಕಂ ಮಂತ್ರದ ಆಶಯ ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಒಂದು ವರ್ಷ ಉಚಿತ ಆಹಾರ!
ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಕೇಂದ್ರ ಸರ್ಕಾರದ ಸಮಗ್ರ ಆಹಾರ ಭದ್ರತಾ ಯೋಜನೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಎಂದು ಹೆಸರಿಸಲಾಗಿದೆ, ಇದರ ಅಡಿಯಲ್ಲಿ ಜನವರಿ 1 ರಿಂದ 80 ಕೋಟಿಗೂ ಹೆಚ್ಚು ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ. ಪಿಎಂಜಿಕೆಎವೈ ಎಂದು ಕರೆಯಲ್ಪಡುವ ಮತ್ತೊಂದು ಯೋಜನೆಯಡಿ ಬಡ ಜನರಿಗೆ ಉಚಿತ ಮಾಸಿಕ ಐದು ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳ ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿದ್ದಕ್ಕಾಗಿ ಪ್ರತಿಪಕ್ಷಗಳ ಟೀಕೆಗಳ ನಡುವೆ ಈ ಕ್ರಮವು ತೆಗೆದುಕೊಳ್ಳಲಾಗಿದೆ.
2020ರಲ್ಲಿ ಪ್ರಾರಂಭವಾದ ಯೋಜನೆ!
ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಏಪ್ರಿಲ್ 2020 ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ಕಳೆದ ವರ್ಷ ಡಿಸೆಂಬರ್ನಲ್ಲಿ ಕೊನೆಗೊಂಡಿತು. ಕಳೆದ ತಿಂಗಳು, ಪಿಎಂಜಿಕೆಎವೈ ಅನ್ನು ಅಸ್ತಿತ್ವದಲ್ಲಿರುವ ಎರಡು ಆಹಾರ ಸಬ್ಸಿಡಿ ಯೋಜನೆಗಳಿಗೆ ಒಳಪಡಿಸಲು ಸರ್ಕಾರ ನಿರ್ಧರಿಸಿತು ಮತ್ತು ಇದರ ಪರಿಣಾಮವಾಗಿ, ಹೊಸ ಸಮಗ್ರ ಆಹಾರ ಭದ್ರತಾ ಯೋಜನೆ ಜಾರಿಗೆ ಬಂತು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಏಳು ಆದ್ಯತೆಗಳನ್ನು ಘೋಷಿಸಿದ್ದಾರೆ. ಅಮೃತ ಕಾಲದ ಮೂಲಕ ಮಾರ್ಗದರ್ಶನ ನೀಡುವ 7 ಆದ್ಯತೆಗಳನ್ನು ಬಜೆಟ್ನಲ್ಲಿ ಅಳವಡಿಸಿಕೊಳ್ಳಲಾಗಿದೆ.
1. ಅಂತರ್ಗತ ಅಭಿವೃದ್ಧಿ
2. ಕೊನೆಯ ಮೈಲಿಯನ್ನು ತಲುಪುವುದು
3. ಮೂಲಸೌಕರ್ಯ ಮತ್ತು ಹೂಡಿಕೆ
4. ಅನ್ಲಾಕಿಂಗ್ ಸಂಭಾವ್ಯ
5. ಹಸಿರು ಬೆಳವಣಿಗೆ
6. ಯುವ ಶಕ್ತಿ
7. ಹಣಕಾಸು ವಲಯ
ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಬಂಪರ್ ನ್ಯೂಸ್, ಠೇವಣಿ ಮೊತ್ತ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಏರಿಕೆ!
ಹಿರಿಯ ನಾಗರಿಕರಿಗೆ ಬಂಪರ್ ನ್ಯೂಸ್!
ಈ ಬಾರಿಯ ಬಜೆಟ್ನಲ್ಲಿ ಹಿರಿಯ ನಾಗರಿಕರಿಗೆ ಬಂಪರ್ ನ್ಯೂಸ್ ನೀಡಿದೆ ಎಂದರೆ ತಪ್ಪಾಗಲ್ಲ. ಹಿರಿಯ ನಾಗರಿಕರ ಠೇವಣಿ ಮೊತ್ತ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಏರಿಕೆಯಾಗಿದೆ. ಹಿರಿಯರ ಉಳಿತಾಯದ ಮೇಲೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದೆ ಎಂದು ತಿಳಿಯುತ್ತಿದೆ. ಹಿರಿಯ ನಾಗರಿಕರು ಠೇವಣಿ ಮೊತ್ತ ಮಿತಿ 15 ಲಕ್ಷದಿಂದ 30 ಲಕ್ಷಕ್ಕೆ ಏರಿಕೆಯಾಗಿದೆ. ಆ ಮೂಲಕ ಹಿರಿಯ ನಾಗರಿಕರ ಸೇವಿಂಗ್ಸ್ ಕಡೆ ನಿರ್ಮಲಾ ಗಮನ ಹರಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ