Chikkamagaluru Viral Video: ಕಿಡ್ನಾಪರ್​ಗೆ ಚಳ್ಳೆಹಣ್ಣು ತಿನ್ನಿಸಿ ಪಾರಾದ ಪೋರ!

ಸಿಸಿಟಿವಿ ದೃಶ್ಯ

ಸಿಸಿಟಿವಿ ದೃಶ್ಯ

ಮಾರ್ಚ್ 26 ರಂದು ಭಾನುವಾರ ಸಂಜೆ 6.38ರ ವೇಳೆ ನಡೆದ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ವೈರಲ್ ಆಗ್ತಿದೆ.

  • News18 Kannada
  • 5-MIN READ
  • Last Updated :
  • Chikmagalur, India
  • Share this:

ಚಿಕ್ಕಮಗಳೂರು: ಕಿಡ್ನಾಪರ್​ಗೆ ಯುಕೆಜಿಯ ಪುಟ್ಟ ಬಾಲಕನೊಬ್ಬ ಚಳ್ಳೆಹಣ್ಣು ತಿನ್ನಿಸಿ ಪಾರಾದ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ (Chikkamagaluru Viral Video) ನಡೆದಿದೆ. ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕನನ್ನು ಕಿಡ್ನಾಪ್ ಮಾಡಲು ವ್ಯಕ್ತಿಯೋರ್ವ ಯತ್ನಿಸಿದ್ದಾನೆ. ಆದರೆ ಪವಾಡದಂತೆ ಚಿಕ್ಕ ಬಾಲಕ ಕಿಡ್ನಾಪರ್​ನಿಂದ​ (Boy Escaped From Kidnaper)  ಪಾರಾಗಿದ್ದಾನೆ!


ಮಾರ್ಚ್ 26 ರಂದು ಭಾನುವಾರ ಸಂಜೆ 6.38ರ ವೇಳೆ ನಡೆದ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ವೈರಲ್ ಆಗ್ತಿದೆ.






ಫುಟ್​ಪಾತ್​ನಲ್ಲಿ ಪುಟ್ಟ ಬಾಲಕ ಆಟವಾಡುತ್ತಿದ್ದ ಅನಾಮಿಕ ವ್ಯಕ್ತಿಯೊಬ್ಬ ಅಪಹರಿಸಲು ಯತ್ನಿಸಿದ್ದಾನೆ. ಅಪಹರಿಸಿ ಹೆಗಲ ಮೇಲೆ ಎತ್ತಿಕೊಂಡು ಬೇಗ ಸ್ಥಳದಿಂದ ಕಾಲು ಕೀಳಲು ಮುಂದಾಗಿದ್ದಾನೆ. ಆದರೆ ಅದೇ ವೇಳೆ ಎಚ್ಚೆತ್ತ ಬಾಲಕ ಅಪಹರಣಕಾರ ಹೆಗಲ ಮೇಲಿನಿಂದ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿದ್ದಾನೆ.


ಇದನ್ನೂ ಓದಿ: Chikkamagaluru: ನೀವು ಏನೇ ಹೇಳಿ, ನಾವು ಮತ ಹಾಕಲ್ಲ! ಚಿಕ್ಕಮಗಳೂರಿನಲ್ಲಿ ಬಂಡೆದ್ದ ಜನತೆ


ಬಾಲಕ ತಪ್ಪಿಸಿಕೊಂಡ ತಕ್ಷಣ ಕಿಡ್ನಾಪರ್ ತಕ್ಷಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕಿಡ್ನಾಪರ್ ಕೈಯಿಂದ ತಪ್ಪಿಸಿಕೊಂಡು ಸಾಹಸ ಮೆರೆದು ಧೈರ್ಯ ಪ್ರದರ್ಶಿಸಿದ ಯುಕೆಜಿ ಬಾಲಕನ ಕುರಿತು ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.


5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ!
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ರೈಲಿನ ಗಾಲಿಗೆ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಪೊಲೀಸ್ ಕಾನ್ಸ್​ಟೇಬಲ್ (Railway Police Constable) ಓರ್ವರು ರಕ್ಷಿಸಿದ ಘಟನೆ ನಡೆದಿದೆ. ರೈಲ್ವೆ ಪೊಲೀಸ್ ಕಾನ್ಸ್​ಟೇಬಲ್ ಸಂತೋಷ್ ರಾಠೋಡ್ ಎಂಬುವವರೇ ರೈಲ್ವೆ (Indian Railway Traveler) ಪ್ರಯಾಣಿಕರ ಜೀವ ಉಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.


ಇದನ್ನೂ ಓದಿ: Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!


ಹೊಸಪೇಟೆ ರೈಲು ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ರೈಲ್ವೆ ಪ್ಲಾಟ್‌ಫಾರಂ ಮೇಲೆ ನಿಂತಿದ್ದ ಪೊಲೀಸ್ ಕಾನ್ಸ್​ಟೇಬಲ್ ರೈಲಿನ ಅಡಿಗೆ ಬೀಳುತ್ತಿದ್ದ ಪ್ರಯಾಣಿಕ ಯುವಕನನ್ನು ಕೈ ಹಿಡಿದು ಮೇಲೆತ್ತಿ ರಕ್ಷಿಸಿದ್ದಾರೆ.


ಗದಗ ಮೂಲದ ಯುವಕ ಅಪಾಯಕ್ಕೆ ಸಿಲುಕಿದ್ದೇಗೆ?
ಗದಗ ಮೂಲದ ಯುವಕನೊಬ್ಬ ಹೊಸಪೇಟೆಯಿಂದ ತನ್ನೂರಿಗೆ ವಾಪಸ್ ಹೊರಟಿದ್ದ. ಈ ವೇಳೆ ರೈಲು ನಿಲ್ದಾಣದಲ್ಲಿ ಶೌಚಾಲಯದಲ್ಲಿ ಶೌಚಕ್ಕೆಂದು ಹೋದಾಗ 5 ರೂ. ಕೇಳಿದ್ದು, ಹಣ ಯಾಕೆ ಪಾವತಿಸಬೇಕೆಂದು ಅದೇ ಸಮಯಕ್ಕೆ ಫ್ಲಾಟ್​ಫಾರಂಗೆ ಬಂದು ನಿಂತಿದ್ದ ಬೆಳಗಾವಿ- ಸಿಕಂದರಾಬಾದ್ ರೈಲಿನಲ್ಲಿ ಶೌಚಕ್ಕೆ ತೆರಳಿದ್ದಾನೆ.

First published: