• ಹೋಂ
  • »
  • ನ್ಯೂಸ್
  • »
  • Corona
  • »
  • ನಾಳೆಯಿಂದ ಒಂದು ವಾರಗಳ ಕಾಲ ಲಾಕ್‌ಡೌನ್; ಕಟ್ಟುನಿಟ್ಟಿನ ಜಾರಿಗೆ ಪೊಲೀಸ್ ಇಲಾಖೆ ತಯಾರಿ

ನಾಳೆಯಿಂದ ಒಂದು ವಾರಗಳ ಕಾಲ ಲಾಕ್‌ಡೌನ್; ಕಟ್ಟುನಿಟ್ಟಿನ ಜಾರಿಗೆ ಪೊಲೀಸ್ ಇಲಾಖೆ ತಯಾರಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇಂದು ರಾತ್ರಿ 8 ರಿಂದ ಜುಲೈ 22ರ ಬೆಳಗ್ಗೆ 5 ರವರೆಗೆ ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲು ಪೊಲೀಸರು ತೀರ್ಮಾನಿಸಿದ್ದಾರೆ. ಎರಡು ಜಿಲ್ಲೆಯಲ್ಲಿ ಕಂಪ್ಲೀಟ್ ನಿರ್ಬಂಧ ಹೇರಿರುವ ಡಿಜಿಪಿ ಪ್ರವೀಣ್ ಸೂದ್‌, ಭದ್ರತೆಗೆ ಸಿಬ್ಬಂದಿಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಜುಲೈ 14); ಕೊರೋನಾ ನಿಯಂತ್ರಿಸುವ ಸಲುವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ನಾಳೆಯಿಂದ ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಎರಡು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿ ಸಂಬಂಧ ಪೊಲೀಸ್‌ ಇಲಾಕೆ ಸಜ್ಜಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿರುವ ಪ್ರವೀಣ್ ಸೂದ್ ನಿನ್ನೆ ಹಿರಿಯ ಆಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ.


ಲಾಕ್‌ಡೌನ್‌ ಅನ್ನು ಯಶಸ್ವಿಯಾಗಿ ಚಾಲ್ತಿಗೆ ತರುವ ಉದ್ದೇಶದಿಂದ ಒಂದು ವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಪ್ರವೇಶಿಸುವ ಗಡಿ ಭಾಗದ ರಸ್ತೆಗಳನ್ನು ಬಂದ್ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದಲೇ ಬೆಂಗಳೂರು ಪ್ರವೇಶಿಸುವ ಗಡಿ ಭಾಗಗಳು ಬಂದ್ ಅಗಲಿದ್ದು ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲು ಪೊಲೀಸ್ ಇಲಾಖೆ ತಯಾರಿ ನಡೆಸಿದೆ. ಅದರೆ, ತುರ್ತು ಸೇವೆಗಳು ಮತ್ತು ಆರೋಗ್ಯ, ದಿನಸಿ ವಸ್ತುಗಳು, ಹಾಲು, ತರಕಾರಿ ಹಣ್ಣು ಹಂಪಲು ಮತ್ತು ಅವಶ್ಯಕ ವಸ್ತುಗಳಿಗಷ್ಟೆ ಸಾಗಾಟಕ್ಕೆ ವಿನಾಯಿತಿ ನೀಡಲಾಗಿದೆ.


ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ದಿನ ಬಳಕೆಯ ಅಗತ್ಯ ವಸ್ತುಗಳ ಖರೀದಿಗಷ್ಟೆ ಜನ ಮನೆಯಿಂದ ಹೊರ ಬರಬೇಕು. ಉಳಿದಂತೆ ಯಾರು ಸಹ ಸುಖಾಸುಮ್ಮನೆ ಓಡಾಡುವಂತಿಲ್ಲ. ವಾಹನಗಳು ಸಹ ಅನಗತ್ಯವಾಗಿ ಓಡಾಡಿದರೇ ಅಂತವರ ಮೇಲೆ ಕಾನೂನು ಕ್ರಮ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ.


ಅಲ್ಲದೆ, ಇಂದು ರಾತ್ರಿ 8 ರಿಂದ ಜುಲೈ 22ರ ಬೆಳಗ್ಗೆ 5 ರವರೆಗೆ ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲು ಪೊಲೀಸರು ತೀರ್ಮಾನಿಸಿದ್ದಾರೆ. ಎರಡು ಜಿಲ್ಲೆಯಲ್ಲಿ ಕಂಪ್ಲೀಟ್ ನಿರ್ಬಂಧ ಹೇರಿರುವ ಡಿಜಿಪಿ ಪ್ರವೀಣ್ ಸೂದ್‌, ಭದ್ರತೆಗೆ ಸಿಬ್ಬಂದಿಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಪೊಲೀಸರಲ್ಲೂ ಕೊರೋನಾ ಸೋಂಕು ಕಂಡು ಬಂದಿದ್ದು. ನಗರದಲ್ಲಿ ಸುಮಾರು 500ಕ್ಕೂ ಅಧಿಕ ಪೊಲೀಸರು ಈ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಸಂಪರ್ಕದಿಂದ ಸುಮಾರು 800ಕ್ಕು ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ.


ಇದನ್ನೂ ಓದಿ : ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಶಂಕಿತ ಉಗ್ರರ ಸಂಚು?; ಎನ್‌ಐಎ ತನಿಖೆಯಿಂದ ಬಯಲಾಯ್ತು ಆಘಾತಕಾರಿ ಮಾಹಿತಿ


ಆದ್ದರಿಂದ ಕೊರೋನಾ ಭೀತಿಯ ನಡುವೆಯೂ ಸಿಬ್ಬಂದಿ ಕೊರತೆಯಾಗದಂತೆ ನಗರದಲ್ಲಿ ಬಂದೋಬಸ್ತ್ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಲವು ಸಿಬ್ಬಂದಿಗಳು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅದರ ಜೊತೆಗೆ ಕ್ವಾರಂಟೈನ್ ಮುಗಿಸಿ ಹಲವು ಪೊಲೀಸರು ವಾಪಸ್ ಆಗಿದ್ದಾರೆ. ಇವರ ಜೊತೆ ಮತ್ತಷ್ಟು ಹೆಚ್ಚುವರಿ ಪೊಲೀಸರು ಹಾಗೂ ಹೋಮ್‌ ಗಾರ್ಡ್‌‌ಗಳನ್ನು ನೇಮಿಸಿಕೊಂಡು ಒಂದು ವಾರದ ಮಟ್ಟಿಗೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿ ಮಾಡಲು ಪೊಲೀಸ್‌ ಇಲಾಖೆ ಅಗತ್ಯ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

Published by:MAshok Kumar
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು