ನವದೆಹಲಿ: ಆಮ್ಲಜನಕದ ಕೊರತೆಯಿಂದಾಗಿ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಶನಿವಾರ ವೈದ್ಯರು ಸೇರಿದಂತೆ ಕನಿಷ್ಠ 8 ರೋಗಿಗಳು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಆಸ್ಪತ್ರೆಯಲ್ಲಿ ಮಧ್ಯಾಹ್ನ 12.30 ರ ಸುಮಾರಿಗೆ ದ್ರವ ವೈದ್ಯಕೀಯ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿದೆ. ಮತ್ತು ಮಧ್ಯಾಹ್ನ 1.35 ಕ್ಕೆ ಆಮ್ಲಜನಕ ಟ್ಯಾಂಕರ್ ಪಡೆದುಕೊಂಡಿದೆ ಎನ್ನಲಾಗಿದೆ.
ಆಮ್ಲಜನಕದ ಕೊರತೆಯೇ ರೋಗಿಗಳ ಸಾವಿಗೆ ಕಾರಣವೇ ಎಂದು ಕೇಳಿದಾಗ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಸ್ಸಿಎಲ್ ಗುಪ್ತಾ ಅವರು, ಹೌದು… ಆಸ್ಪತ್ರೆಯಲ್ಲಿ ಅರ್ಧ ಘಂಟೆಯವರೆಗೆ ಆಮ್ಲಜನಕ ಇರಲಿಲ್ಲ. ಇದರಿಂದಾಗಿ ಎಂಟು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಇನ್ನೂ ಐದು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉಳಿಸುವ ಎಲ್ಲ ಪ್ರಯತ್ನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನದಿಂದ ಬರಲಿರುವ ಆಮ್ಲಜನಕದ ಕೊರತೆಯ ಬಗ್ಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ, ಆಸ್ಪತ್ರೆಯಲ್ಲಿ 327 ರೋಗಿಗಳನ್ನು ದಾಖಲಿಸಲಾಗಿದ್ದು, ಅವರಲ್ಲಿ 48 ಮಂದಿ ಗಂಭೀರ ಆರೈಕೆ ಘಟಕದಲ್ಲಿದ್ದಾರೆ. ಪ್ರಾಣ ಕಳೆದುಕೊಂಡವರಲ್ಲಿ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರೈಟಿಸ್ ಮುಖ್ಯಸ್ಥ ಡಾ. ಆರ್ ಕೆ ಹಿಮ್ಥಾನಿ (62) ಅವರು ಒಬ್ಬರಾಗಿದ್ದಾರೆ.
ನಿಖರವಾಗಿ ಒಂದು ವಾರದ ಹಿಂದೆ, ಆಸ್ಪತ್ರೆಯಲ್ಲಿ ಆಕ್ಸಿಜನ್ ದಾಸ್ತಾನು ಖಾಲಿಯಾದ ನಂತರ ದೆಹಲಿ ಸರ್ಕಾರದಿಂದ ತುರ್ತು ಆಮ್ಲಜನಕ ಪೂರೈಕೆ ಪಡೆದಿತ್ತು. ಕೊರೋನಾ ವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆಯ ಮಧ್ಯೆ ನಗರವು ಆಮ್ಲಜನಕದ ಪೂರೈಕೆಯ ಕೊರತೆಯನ್ನು ಎದುರಿಸುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ