• ಹೋಂ
  • »
  • ನ್ಯೂಸ್
  • »
  • Corona
  • »
  • ಸರಿಗಮಪ ಖ್ಯಾತಿಯ ಪೊಲೀಸ್ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್; ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಜ್ಯೋತಿ?

ಸರಿಗಮಪ ಖ್ಯಾತಿಯ ಪೊಲೀಸ್ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್; ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಜ್ಯೋತಿ?

ಮೃತಪಟ್ಟ ಜ್ಯೋತಿ ಹಾಗೂ ಪೊಲೀಸ್ ಹೆಡ್​ ಕಾನ್ಸ್​ಟೇಬಲ್ ಸುಬ್ರಮಣಿ.

ಮೃತಪಟ್ಟ ಜ್ಯೋತಿ ಹಾಗೂ ಪೊಲೀಸ್ ಹೆಡ್​ ಕಾನ್ಸ್​ಟೇಬಲ್ ಸುಬ್ರಮಣಿ.

ಸಂಬಂಧಿಕರು ಬೆಂಗಳೂರು ಹೊರವಲಯದ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆ ಕರೆದೊಯ್ದಿಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹ ಆರೋಪ ಹಾಗೂ ಖಿನ್ನತೆಗೊಳಗಾಗಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಮುಂದೆ ಓದಿ ...
  • Share this:

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಸಿಂಗಿಂಗ್​ ಶೋ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಕೋವಿಡ್ ಸೋಂಕಿಗೆ ತುತ್ತಾಗಿ, ತೀವ್ರ ಉಸಿರಾಟದ ಸಮಸ್ಯೆಯಿಂದ ನೆನ್ನೆ ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್ ಆಗಿರುವ ಸುಬ್ರಮಣಿ ಅವರ ಪತ್ನಿ ಜ್ಯೋತಿ (33) ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.


    ಜ್ಯೋತಿ ಅವರು ಕೌಟುಂಬಿಕ ಕಲಹ ಹಾಗೂ ಖಿನ್ನತೆಯಿಂದಾಗಿ ಮೇ 7ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಕೂಡಲೇ ಅವರನ್ನು ಕೋಲಾರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತಿದ್ದ ಸುಬ್ರಮಣಿ ಪತ್ನಿ ಜ್ಯೋತಿ ಅವರಿಗೆ ವೆಂಟಿಲೇಟರ್ ಬೆಡ್ ಸಿಗದೇ ಪರದಾಟ ನಡೆಸಿದ್ದರು. ಆ ಬಳಿಕ ಸಂಬಂಧಿಕರು ಬೆಂಗಳೂರು ಹೊರವಲಯದ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆ ಕರೆದೊಯ್ದಿಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹ ಆರೋಪ ಹಾಗೂ ಖಿನ್ನತೆಗೊಳಗಾಗಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.


    ಇದನ್ನು ಓದಿ: ರಾಜ್ಯ, ದೇಶದಲ್ಲಿ ಕೊರೋನಾ ಇಷ್ಟು ದೊಡ್ಡದಾಗಿ ಬೆಳೆಯಲು ವಿರೋಧ ಪಕ್ಷದವರ ಅಪಪ್ರಚಾರವೇ ಕಾರಣ; ಸಚಿವ ಸಿ.ಪಿ. ಯೋಗೇಶ್ವರ್!


    ಆಸ್ಪತ್ರೆಗೆ ದಾಖಲಿಸಿದ ವೇಳೆ ಪಾಸಿಟಿವ್ ಪತ್ತೆಯಾಗಿತ್ತು. ಎರಡು ತಿಂಗಳಿನಿಂದ ಹೆಡ್ ಕಾನ್ಸ್ ಸ್ಟೇಬಲ್ ಸುಬ್ರಮಣಿ ಕರ್ತವ್ಯಕ್ಕೆ ಗೈರಾಗಿದ್ದರು. ನೆನ್ನೆ ಸುಬ್ರಮಣಿ ಪತ್ನಿ ಮೃತಪಟ್ಟಾಗ  ಕೋವಿಡ್ ಸೋಂಕಿನಿಂದ ಸುಬ್ರಮಣಿ ಪತ್ನಿ ಜ್ಯೋತಿ ಮೃತಪಟ್ಟಿದ್ದಾಗಿ ಪೊಲೀಸರ ವಾಟ್ಸ್ ಅಪ್ ಗ್ರೂಪ್ ಸೇರಿ ಇತರೆ ಗ್ರೂಪ್​ಗಳಲ್ಲಿ ಪೋಟೋ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಬೇರೊಂದು ಆಯಾಮ ಸಿಕ್ಕಿದ್ದು, ಪ್ರಕರಣ ಸಂಬಂಧ ಕೋಲಾರ ಟೌನ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಿಸಿಕೊಳ್ಳಲಾಗಿದೆ.

    Published by:HR Ramesh
    First published: