• ಹೋಂ
  • »
  • ನ್ಯೂಸ್
  • »
  • Corona
  • »
  • ಮಂಗಳವಾರ 8 ಗಂಟೆಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್​ಡೌನ್; ಸಿಎಂ ಘೋಷಣೆ

ಮಂಗಳವಾರ 8 ಗಂಟೆಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಲಾಕ್​ಡೌನ್; ಸಿಎಂ ಘೋಷಣೆ

ಬಿಎಸ್​ ಯಡಿಯೂರಪ್ಪ

ಬಿಎಸ್​ ಯಡಿಯೂರಪ್ಪ

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಿ ಸಹಕರಿಸಬೇಕಿದೆ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

ಮುಂದೆ ಓದಿ ...
  • Share this:

    ಬೆಂಗಳೂರು; ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು. 14ರಿಂದ ಅಂದರೆ  ಮಂಗಳವಾರ ರಾತ್ರಿ 8 ಗಂಟೆಯಿಂದ 1 ವಾರಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.


    ಜು.14ರಿಂದ ಜು.22ರವರೆಗೆ ಈ ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​ ಜಾರಿಯಾಗಲಿದೆ. ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.


    ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಿ ಸಹಕರಿಸಬೇಕಿದೆ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.


    ಇದನ್ನು ಓದಿ: Lockdown - ಜುಲೈ 14ರಿಂದ ಜುಲೈ 22ರವರೆಗೆ ಒಂದು ವಾರ ಕಾಲ ಬೆಂಗಳೂರು ಮತ್ತು ಗ್ರಾಮಾಂತರ ಲಾಕ್​ಡೌನ್


    ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

    Published by:HR Ramesh
    First published: