ಬೆಂಗಳೂರು(ಜೂ.21): ಮಾರಕ ಕೋವಿಡ್-19 ವೈರಸ್ ಸೋಂಕು ಕೊರೋನಾ ವಾರಿಯರ್ಸ್ ಅನ್ನು ಬೆಂಬಿಡದೇ ಕಾಡುತ್ತಿದೆ. ರಾಜ್ಯದ ಪೊಲೀಸರಿಗೂ ಕೊರೋನಾ ಪತ್ತೆಯಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಎಚ್ಚೆತ್ತುಕೊಂಡಿದ್ದಾರೆ. ಹೀಗಾಗಿ 50 ವರ್ಷ ಮೇಲ್ಪಟ್ಟ ಪೊಲೀಸರು ಠಾಣೆಗೆ ಬರದಂತೆ ಆದೇಶಿಸಿದ್ದಾರೆ. ಜತೆಗೆ ಯಾರಿಗಾದರೂ ಆರೋಗ್ಯ ಬಗ್ಗೆ ಅನುಮಾನವಿದ್ದಲ್ಲಿ ಕೂಡಲೇ ಕೋವಿಡ್-19 ಟೆಸ್ಟ್ ಮಾಡಿಸುವಂತೆ ನಿರ್ದೇಶಿಸಿದ್ದಾರೆ. ಜತೆಗೆ ನಗರ ಪೊಲೀಸ್ ಠಾಣೆಗಳಿಗೆ ಹತ್ತಾರು ಸೂಚನೆ ರವಾನೆ ಮಾಡಿದ್ದಾರೆ.
ಕಮೀಷನರ್ ಪೊಲೀಸ್ ಠಾಣೆಗಳಿಗೆ ರವಾನಿಸಿದ ಸೂಚನೆಗಳು ಹೀಗಿವೆ...
1. ಏನೇ ಸಮಸ್ಯೆ ಬಂದ್ರು ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, ಸರ್ಕಾರ ಸಮಾಜ ನಮ್ಮನ್ನ ನಂಬಿದೆ. ಎಲ್ಲಾ ಸ್ಟೇಷನ್ನಲ್ಲಿ 55 ವರ್ಷ ಮೇಲ್ಪಟ್ಟವರು ಮನೆಯಲ್ಲಿ ಇರಬೇಕು. ಬೆಂಗಳೂರು ಬಿಡುವಂತಿಲ್ಲ. ಅಧಿಕಾರಿಗಳು ಮಾನಿಟರ್ ಮಾಡಬೇಕು.
2. ಸಾಧ್ಯವಾದಷ್ಟು ಯುವ ಹೋಂ ಗಾರ್ಡ್ ಬಳಕೆ ಮಾಡಿಕೊಳ್ಳಿ. ಜಂಟಿ ಸಿಪಿ ಡಿಸಿಪಿಗಳು ಮಾರ್ಗದರ್ಶನ ಮಾಡ್ತಾರೆ.
3. ಶಾಮಿಯಾನ ಹಾಕಿಕೊಂಡು ಠಾಣೆ ಹೊರಗಡೆ ಅಲ್ಲೆ ವಿಲೇವಾರಿ ಮಾಡಬೇಕು. ಆರೋಪಿಗಳು ಇರಲಿ ಯಾರೇ ಅಗಲಿ. ಯಾರನ್ನು ಟಚ್ ಮಾಡಬಾರದು.
4. ಹೊಯ್ಸಳ ಮತ್ತು ಚೀತಾ ಅನವಶ್ಯಕವಾಗಿ ಸುತ್ತಾಡಬಾರದು. ಸಮಸ್ಯೆ ಇದ್ರೆ ಕಾಲ್ ಬಂದ್ರೆ ಹೋಗಬೇಕು, ಸುಮ್ಮನೆ ಸ್ಟೇಷನ್ಗೆ ಬರಬಾರದು.
5. ಮುಖ್ಯ ಕೇಸ್ಗಳಲ್ಲಿ ಮಾತ್ರ ಆರೋಪಿಗಳನ್ನ ಬಂಧಿಸಬೇಕು. ಸುಮ್ಮನೆ ಬಂಧಿಸೊ ಅವಶ್ಯಕತೆ ಇಲ್ಲ, ಸುಮ್ಮನೆ ಯಾರನ್ನು ಕರೆ ತಂದು ಕುರಿಸಬಾರದು.
6. ಎಲ್ಲಾ ಠಾಣೆ ವ್ಯಾಪ್ತಿಯಲ್ಲಿ ಒಂದು ಕಲ್ಯಾಣ ಮಂಟಪ ರೆಡಿ ಮಾಡಬೇಕು. 25 ಜನ ಇರೋತರ, ಊರಲ್ಲಿ ಇರೋ ಸೋಂಕು ಮನೆಗೆ ತಗೊಂಡು ಹೋಗಬಾರದು.
7. ಪ್ರತಿ ಠಾಣೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಇರಬೇಕು. ಕುಡಿಯಲು, ಸ್ನಾನ, ಕೈಕಾಲು ತೊಳೆಯಲು, ಮಾಸ್ಕ್ ಸ್ಯಾನಿಟೈಸರ್, ಪೇಸ್ ಶೀಲ್ಡ್ ಇರಬೇಕು.
8. ನಾವು ಉಪಯೋಗಿಸುವ ವಾಹನಗಳು ಪ್ರತಿದಿನ ಸ್ಯಾನಿಟೈಸ್ ಆಗಬೇಕು. ಬೆಂಕಿ ಅನಾಹುತ ಆಗದಂತೆ ಸ್ಯಾನಿಟೈಸ್ ಮಾಡಬೇಕು. ನಾವು ಕ್ವಾರಂಟೈನ್ ಆಗಿದ್ದೀವಿ ಅಂತ ಸಾರ್ವಜನಿಕರಿಗೆ ನಮ್ಮ ಸೇವೆಯಿಂದ ಕೊರತೆ ಆಗಬಾರದು.
9. ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಒದಗಿಸಬೇಕು, ಗ್ಲೌಸ್ ಹಾಕಬೇಕು, ದೂರದಲ್ಲಿ ನಿಂತು ಮಾತನಾಡಬೇಕು.
10. ಎಂಒಬಿ ಕಾರ್ಡ್ ಬಂಧಿಸೋದು ಬೇಡ, ತಾಂತ್ರಿಕವಾಗಿ ಅವರ ಮೇಲೆ ನಿಗಾ ಇಟ್ಟಿರಿ. ಅವರ ಮೇಲೆ ಇನ್ನೂ ನಿಗಾ ಹೆಚ್ಚಾಗಿರಬೇಕು. ನಾವು ಸುಮ್ಮನೆ ಇದ್ದೀವಿ ಅಂತ ಸಮಾಜಘಾತುಕ ಶಕ್ತಿಗಳಿಗೆ ಅವಕಾಶ ಕೊಡಬಾರದು, ಇನ್ಸ್ಪೆಕ್ಟರ್, ಪಿಎಸ್ಐಗಳು ಗಮನ ಇಡಬೇಕು.
11. ನಮ್ಮ ಸಿಬ್ಬಂದಿಗೆ ಊಟ ತಿಂಡಿ ಸರಿಯಾಗಿ ಅಗಬೇಕು, ನಿನ್ನೆ ಅಸ್ಪತ್ರೆಯಲ್ಲಿ ಊಟದ ರೀತಿ ಮತ್ತೆ ಅಗಬಾರದು. ನಮ್ಮದು ಶಿಸ್ತಿನ ಇಲಾಖೆ.
12. ಮುಖ್ಯ ಕಾರ್ಯದರ್ಶಿಗಳು ಇಲಾಖೆಗೆ ಎಲ್ಲಾ ನೆರವು ನೀಡೊ ಬಗ್ಗೆ ಹೇಳಿದ್ದಾರೆ. ಹಾಗೂ ಪೊಲೀಸ್ ಕ್ವಾಟ್ರಸ್ ಗಳು ಸ್ವಚ್ಚತೆ ಇರಬೇಕು, ಎಲ್ಲ ಮನೆಗಳಿಗೆ ಸ್ಯಾನಿಟೈಸರ್ ಮಾಸ್ಕ್ ಕೊಡಬೇಕು.
ಇದನ್ನೂ ಓದಿ: ಭಾರತದಲ್ಲಿ ಕೋವಿಡ್-19 ಕಾವು: ಒಂದೇ ದಿನ 15,400 ಕೇಸ್, 4.10 ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ