ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಹೊರ ರಾಜ್ಯದಿಂದ ಬಂದವರಿಂದಲೇ ಕೊರೋನಾ ಹರಡುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಬಂದವರು ಪೊಲೀಸ್ ಇಲಾಖೆಗೆ ತಲೆನೋವಾಗಿದ್ದಾರೆ.
ಹೌದು, ಮಹಾರಾಷ್ಷ್ರದಿಂದ ನಗರಕ್ಕೆ ಬರೋಬ್ಭರಿ 10,426 ಪ್ರಯಾಣಿಕರು ಬಂದಿದ್ದು, ಪ್ರತಿದಿನ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ 500ಕ್ಕೂ ಹೆಚ್ಚು ಮಂದಿ ಆಗಮಿಸುತ್ತಿದ್ದಾರೆ. ಇಷ್ಟು ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿ ನೋಡಿಕೊಳ್ಳುವುದೇ ಪೊಲೀಸರಿಗೆ ಸವಾಲಿನ ಕೆಲಸ ಆಗಿದೆ. ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ, ಹೋಮ್ ಕ್ವಾರಂಟೈನ್ನಲ್ಲಿ ಇರದ ಪ್ರಯಾಣಿಕರು ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ.
ಪ್ರತಿ ಪ್ರಯಾಣಿಕರ ವಾಸಸ್ಥಳ ಪತ್ತೆ ಹಚ್ಚಿ, ಮನೆಗೆ ಹೋಗಿ ಪೊಲೀಸರು ಎಚ್ಚರಿಕೆ ನೀಡಿ ಬರುತ್ತಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದವವರ ಮೇಲೂ ಪ್ರಕರಣ ಕೂಡ ದಾಖಲಿಸಲಾಗುತ್ತಿದೆ. ಇನ್ನು ಮುಂಬೈ ಬಿಟ್ಟು ದೆಹಲಿ ಮತ್ತು ಇತರೆ ರಾಜ್ಯಗಳಿಂದ ಬಂದವರಿಂದಲೂ ನಿಯಮ ಉಲ್ಲಂಘನೆಯಾಗಿದೆ. ಕ್ವಾರಂಟೈನ್ ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸಿದವರ ಬಗ್ಗೆ ಬಿಬಿಎಂಪಿ ನಿಗಾ ವಹಿಸುತ್ತಿಲ್ಲ. ಕ್ವಾರಂಟೈನ್ ಸಂಬಂಧ ಯಾವೊಬ್ಬ ಪ್ರಯಾಣಿಕರ ಬಗ್ಗೆಯೂ ತಲೆಕೆಡಿಸಿಕೊಳ್ಳುತ್ತಿಲ್ಲ.
ಇದನ್ನು ಓದಿ: ಕೊರೋನಾ ಆತಂಕವಿಲ್ಲದೇ, ಗುಂಪಾಗಿ ಕುಳಿತು ಸಭೆ ನಡೆಸಿದ ರಾಜ್ಯ ಕಾಂಗ್ರೆಸ್ ನಾಯಕರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ