• ಹೋಂ
  • »
  • ನ್ಯೂಸ್
  • »
  • Corona
  • »
  • Coronavirus Vaccine: ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮನ; ಈ ವಾರದೊಳಗೆ ಮತ್ತೆ 12 ಲಕ್ಷ ಡೋಸ್ ಲಭ್ಯ

Coronavirus Vaccine: ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಆಗಮನ; ಈ ವಾರದೊಳಗೆ ಮತ್ತೆ 12 ಲಕ್ಷ ಡೋಸ್ ಲಭ್ಯ

ಕೋವಿಶೀಲ್ಡ್​- ಕೋವ್ಯಾಕ್ಸಿನ್ ಲಸಿಕೆ

ಕೋವಿಶೀಲ್ಡ್​- ಕೋವ್ಯಾಕ್ಸಿನ್ ಲಸಿಕೆ

Karnataka Coronavirus: ಕರ್ನಾಟಕಕ್ಕೆ ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಬಂದಿದೆ. ಇನ್ನೊಂದು ವಾರದಲ್ಲಿ 12 ಲಕ್ಷ ಡೋಸ್ ಲಸಿಕೆ ಬರಲಿದೆ.

  • Share this:

ಬೆಂಗಳೂರು (ಮಾ. 25): ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ರಾಜ್ಯಕ್ಕೆ ಮತ್ತೆ 4‌ ಲಕ್ಷ ಡೋಸ್ ಕೊರೋನಾ ಲಸಿಕೆಯನ್ನು ತರಿಸಿಕೊಳ್ಳಲಾಗಿದೆ. ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಬಂದಿದೆ. ಇನ್ನೊಂದು ವಾರದಲ್ಲಿ 12 ಲಕ್ಷ ಡೋಸ್ ಲಸಿಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.


ಕರ್ನಾಟಕದಲ್ಲಿ ಕೊರೋನಾ ಲಸಿಕೆಯ ಅಭಾವವಿಲ್ಲ. ಈ ಬಗ್ಗೆ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದ್ದು, ಎಲ್ಲ ಅರ್ಹ ನಾಗರಿಕರೂ ತಮ್ಮ ಹೆಸರು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆಯಬೇಕು. ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯಷ್ಟು ಕೊರೋನಾ ಲಸಿಕೆಯನ್ನು ಕಳುಹಿಸಲಿದೆ. ರಾಜ್ಯದಲ್ಲಿ ಲಸಿಕೆಯ ಅಭಾವವಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.



ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಸೋಂಕು ನಿಯಂತ್ರಿಸಲು ಲಸಿಕೆ ನೀಡುವ ಕೆಲಸವನ್ನು ಮಾಡುತ್ತಿದ್ದೇವೆ. ರಾಜ್ಯದಲ್ಲಿ ಮಾರ್ಚ್ 22ರವರೆಗೂ ಒಟ್ಟಾರೆ 27,10,904 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ರಾಜ್ಯಕ್ಕೆ ಇದುವರೆಗೆ 38.85 ಲಕ್ಷ ಡೋಸ್ ಲಸಿಕೆಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ. ಈ ಲಸಿಕೆಗಳನ್ನು ಪ್ರಾದೇಶಿಕ ಮತ್ತು ಜಿಲ್ಲಾ ಲಸಿಕೆ ಸಂಗ್ರಹ ಕೇಂದ್ರಗಳಿಗೆ ವಿತರಿಸಲಾಗಿದೆ. ಅಲ್ಲಿಂದ ಅಗತ್ಯಕ್ಕೆ ಅನುಸಾರವಾಗಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ರವಾನಿಸಲಾಗಿದೆ.


ಇದನ್ನೂ ಓದಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸ್ಪರ್ಧೆ; ರಾಜಕೀಯ ಲೆಕ್ಕಾಚಾರಗಳೇನು?


ಇಂದು ಬೆಂಗಳೂರಿನಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದ್ದು, ನೆಲಮಂಗಲದ ಒಂದೇ ಕಾಲೇಜಿನ 22 ಜನರಲ್ಲಿ ಕೊರೋನಾ ಸೋಂಕು ತಗುಲಿದೆ. ನೆಲಮಂಗಲದ ಬೇಗೂರಿನಲಿರುವ ಸೌಂದರ್ಯ ನರ್ಸಿಂಗ್ ಕಾಲೇಜಿನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ನರ್ಸಿಂಗ್ ಕಾಲೇಜಿನಲ್ಲಿ ಕಳೆದ 4 ದಿನಗಳಲ್ಲಿ 22 ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಕೇರಳ, ಪಶ್ಚಿಮ ಬಂಗಾಳ ಹಾಗೂ ನೇಪಾಳ ಮೂಲದ ವಿಧ್ಯಾರ್ಥಿಗಳಿಗೆ ಸೋಂಕು ತಗುಲಿದೆ.


ಪ್ರಾಕ್ಟೀಕಲ್ ತರಗತಿಗಳಿಗೆ ಆಸ್ಪತ್ರೆಗಳಿಗೆ ತೆರಳಿದಾಗ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಸೋಂಕಿತರ ಪ್ರಾಥಮಿಕ‌ ಸಂಪರ್ಕದಲ್ಲಿದ್ದ 30 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಸೋಂಕಿತರಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

First published: