• ಹೋಂ
  • »
  • ನ್ಯೂಸ್
  • »
  • Corona
  • »
  • Vaccine: ಕೊವಾಕ್ಸೀನ್ ಮುಗಿದಿದೆ, ಕೋವಿಶೀಲ್ಡ್​ 4 ದಿನದಲ್ಲಿ ಖಾಲಿಯಾಗಲಿದೆ; ದೆಹಲಿ ಸಚಿವ ಸತ್ಯೇಂದ್ರ ಜೈನ್ ಕಳವಳ

Vaccine: ಕೊವಾಕ್ಸೀನ್ ಮುಗಿದಿದೆ, ಕೋವಿಶೀಲ್ಡ್​ 4 ದಿನದಲ್ಲಿ ಖಾಲಿಯಾಗಲಿದೆ; ದೆಹಲಿ ಸಚಿವ ಸತ್ಯೇಂದ್ರ ಜೈನ್ ಕಳವಳ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ದೆಹಲಿಯಲ್ಲಿ ಕೇವಲ ಒಂದು ದಿನ ಕೊವಾಕ್ಸಿನ್ ಉಳಿದಿದೆ ಮತ್ತು ಕೋವಿಶೀಲ್ಡ್​ ಲಸಿಕೆ ಮೂರರಿಂದ ನಾಲ್ಕು ದಿನಗಳು ಮಾತ್ರ ಉಳಿದಿವೆ. ನಮಗೆ ಬೇಗನೆ ಲಸಿಕೆಗಳು ಬೇಕಾಗುತ್ತವೆ. ಹೀಗಾಗಿ ಕೇಂದ್ರ ಸರ್ಕಾರ ಸಾಧ್ಯವಾದಷ್ಟು ಬೇಗ ಲಸಿಕೆಯನ್ನು ಪೂರೈಸಬೇಕು ಎಂದು ಸಚಿವ ಸತ್ಯೇಂದ್ರ ಜೈನ್ ಮನವಿ ಮಾಡಿದ್ದಾರೆ.

ಮುಂದೆ ಓದಿ ...
  • Share this:

ನವ ದೆಹಲಿ (ಮೇ 10); ದೆಹಲಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಕೈಮೀರುತ್ತಲೇ ಇದೆ. ಸೋಂಕಿತರ ಹಾಗೂ ಸಾವಿನ ಸಂಖ್ಯೆ ಅಧಿಕವಾಗುತ್ತಲೇ ಇದೆ. ಹೀಗಾಗಿ ಎಲ್ಲರಿಗೂ ಲಸಿಕೆ ನೀಡುವುದೊಂದೇ ಕೊರೋನಾವನ್ನು ಸೋಲಿಸಲು ಪರಿಹಾರ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಸಹ ಮೇ.01 ರಿಂದ 18 ರಿಂದ 44 ವರ್ಷದವರಿಗೆ ಕೊರೋನಾ ಲಸಿಕೆ ಕಡ್ಡಾಯ ಎಂದು ಹೇಳಿತ್ತು. ಆದರೆ, ಯಾವ ರಾಜ್ಯಗಳಿಗೂ ಈವರೆಗೆ ಅಗತ್ಯಕ್ಕೆ ತಕ್ಕಷ್ಟು ಲಸಿಕೆಯನ್ನು ನೀಡಲಾಗಿಲ್ಲ. ಪರಿಣಾಮ ಎಲ್ಲಾ ರಾಜ್ಯದಲ್ಲೂ ಕೊರೋನಾ ಲಸಿಕೆ ಖಾಲಿಯಾಗಿದೆ. ಇದಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯೂ ಹೊರತಾಗಿಲ್ಲ. ಈ ಬಗ್ಗೆ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಕಳವಳ ವ್ಯಕ್ತಪಡಿಸಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​, "ದೆಹಲಿಯಲ್ಲಿ ನಾಳೆ ಕೋವಾಕ್ಸೀನ್ ಖಾಲಿಯಾದರೆ, ಇನ್ನೂ ನಾಲ್ಕು ದಿನಗಳಲ್ಲಿ ಕೋವಿಶೀಲ್ಡ್​ ಸಹ ಮುಗಿಯಲಿದೆ" ಎಂದು ಆತಂಕ ಹೊರಹಾಕಿದ್ದಾರೆ.


"ದೆಹಲಿಯಲ್ಲಿ ಕೇವಲ ಒಂದು ದಿನ ಕೊವಾಕ್ಸಿನ್ ಉಳಿದಿದೆ ಮತ್ತು ಕೋವಿಶೀಲ್ಡ್​ ಲಸಿಕೆ ಮೂರರಿಂದ ನಾಲ್ಕು ದಿನಗಳು ಮಾತ್ರ ಉಳಿದಿವೆ. ನಮಗೆ ಬೇಗನೆ ಲಸಿಕೆಗಳು ಬೇಕಾಗುತ್ತವೆ. ಹೀಗಾಗಿ ಕೇಂದ್ರ ಸರ್ಕಾರ ಸಾಧ್ಯವಾದಷ್ಟು ಬೇಗ ದೆಹಲಿಗೆ ಲಸಿಕೆಯನ್ನು ಪೂರೈಸಬೇಕು. ಇಲ್ಲದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟ" ಎಂದು ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.


ದೆಹಲಿ ಸರ್ಕಾರವು ತಿಂಗಳಿಗೆ ಸುಮಾರು 85 ಲಕ್ಷ ಡೋಸ್ ಪಡೆದರೆ ಮೂರು ತಿಂಗಳಲ್ಲಿ ಇಡೀ ರಾಷ್ಟ್ರ ರಾಜಧಾನಿಗೆ ಲಸಿಕೆ ಹಾಕಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ ಮರು ದಿನವೇ ದೆಹಲಿಯಲ್ಲಿ ಲಸಿಕೆ ಅಲಭ್ಯತೆ ಕಾಡಲಾರಂಭಿಸಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಸುಮಾರು 1 ಲಕ್ಷ ಲಸಿಕೆ ನೀಡಲಾಗುತ್ತಿದೆ. ಇದನ್ನು 3 ಲಕ್ಷಕ್ಕೆ ಏರಿಸುವ ಗುರಿ ಇದೆ ಎಂದು ಅರವಿಂದ ಕೇಜ್ರಿವಾಲ್ ಇತ್ತೀಚೆಗೆ ಹೇಳಿದ್ದರು.


ಭಾರತದಲ್ಲಿ ಕೊರೋನಾ ಆತಂಕ:


ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರೂವರೆ ಲಕ್ಷಕ್ಕೂ ಹೆಚ್ಚು ಜನ ಸೋಂಕು ಪೀಡಿತರಾಗುತ್ತಿದ್ದಾರೆ.


ಇದನ್ನೂ ಓದಿ: ಚುನಾವಣಾ ಫಲಿತಾಂಶಗಳಲ್ಲಿ ಸೋಲು, ಕೋವಿಡ್ ನಿರ್ವಹಣೆಯಲ್ಲೂ ವೈಫಲ್ಯ; ಆರ್​ಎಸ್​ಎಸ್​-ಬಿಜೆಪಿಯಲ್ಲಿ ಮನೆಮಾಡಿದ ಆತಂಕ

top videos


    ಭಾನುವಾರ 3,66,161 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,53,818 ಜನ ಮಾತ್ರ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,26,62,575ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಭಾನುವಾ 3,754 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,46,116ಕ್ಕೆ ಏರಿಕೆ ಆಗಿದೆ.


    ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.

    First published: