ದೆಹಲಿ ಪೊಲೀಸರಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ವಿಚಾರಣೆ; ಅಕ್ರಮ ಆರೋಪ
ಶ್ರೀನಿವಾಸ್ರನ್ನು ವಿಚಾರಣೆ ಒಳಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ನಾನು ನಿಮ್ಮೊಂದಿಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ನವದೆಹಲಿ: ಕೋವಿಡ್ ಸಮಯದಲ್ಲಿ ಪರಿಹಾರ ಕಾರ್ಯಗಳಿಂದ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ರನ್ನು ಇಂದು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ದೆಹಲಿಯ ಯುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಪೊಲೀಸರು ಪರಿಹಾರ ಸಾಮಗ್ರಿಗಳ ವಿತರಣೆ ಬಗ್ಗೆ 20 ನಿಮಿಷಗಳ ಕಾಲ ಶ್ರೀನಿವಾಸ್ರನ್ನು ಪ್ರಶ್ನಿಸಿದ್ದಾರೆ. ಆಕ್ಸಿಜನ್ , ಔಷಧಿಗಳು ನಿಮಗೆ ಹೇಗೆ ಸಿಗುತ್ತಿದೆ ಎಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶ್ರೀನಿವಾಸ್ ವಿರುದ್ಧ ಕೋರ್ಟ್ಗೆ ಪಿಐಎಲ್ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ನಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಶ್ರೀನಿವಾಸ್ ದೆಹಲಿಯಲ್ಲಿ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ಔಷಧಗಳನ್ನು ಪೂರೈಸುತ್ತಿದ್ದರು. ಪೊಲೀಸರ ವಿಚಾರಣೆ ಬಳಿಕ ಪ್ರತಿಕ್ರಿಯಿಸಿದ ಶ್ರೀನಿವಾಸ್ ನಾನು ಏನನ್ನು ಮುಚ್ಚಿಡುತ್ತಿಲ್ಲ. ಏನನ್ನು ಮುಚ್ಚಿಡುವ ಅಗತ್ಯ ನನಗಿಲ್ಲ. ನಾವು ನಮ್ಮ ಕೆಲಸಗಳನ್ನು ನಿಲ್ಲಿಸುವುದೂ ಇಲ್ಲ, ಹೆದರುವುದು ಇಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ಯುವ ಕಾಂಗ್ರೆಸ್ ಕಮಿಟಿ ಕಚೇರಿಯಲ್ಲಿ ಕೊರೋನಾ ವಾರ್ ರೂಂ ತೆರೆದು ಜನರಿಗೆ ನೆರವಾಗುತ್ತಿದ್ದೇವೆ. ಜೀವ ಉಳಿಸುವ ನಮ್ಮ ಪ್ರಯತ್ನವನ್ನು ಪಿಐಎಲ್ಗಳಿಗೆ ಹೆದರಿ ನಿಲ್ಲಿಸುವುದಿಲ್ಲ ಎಂದಿದ್ದಾರೆ.
Delhi: A team of Delhi Police's Crime Branch arrived at the Indian Youth Congress office today
"They wanted to know the details of how are we helping people. We answered all their questions," says Srinivas BV, Youth Congress chief pic.twitter.com/Jz2ZHp3vur
ಶ್ರೀನಿವಾಸ್ ಹಾಗೂ ಅವರ ತಂಡದ ವಿರುದ್ಧ ಸಲ್ಲಿಕೆ ಆಗಿರುವ ಪಿಐಎಲ್ನಲ್ಲಿ ಕೋವಿಡ್ ಸಂಬಂಧಿತ ವಸ್ತುಗಳ ಅಕ್ರಮ ದಾಸ್ತಾನು ಹಾಗೂ ವಿತರಣೆ ಬಗ್ಗೆ ದೂರಲಾಗಿದೆ. ಔಷಧಿಗಳ ಅಕ್ರಮ ವಿತರಣೆಯಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ. ದೇಶಾದ್ಯಂರ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರಕ್ತ, ಪ್ಲಾಸ್ಮಾ, ವೆಂಟಿಲೇಟರ್, ಔಷಧಗಳ ಪೂರೈಕೆ ಮೂಲಕ ಶ್ರೀನಿವಾಸ್ ಪ್ರಸಿದ್ಧಿಗಳಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.
बचाने वाला हमेशा मारने वाले से बड़ा होता है।#IStandWithIYC
ಶ್ರೀನಿವಾಸ್ರನ್ನು ವಿಚಾರಣೆ ಒಳಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ನಾನು ನಿಮ್ಮೊಂದಿಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಯುವ ಕಾಂಗ್ರೆಸ್ ಘಟಕದ ಕಚೇರಿ ಮೇಲಿನ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
Published by:Kavya V
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ