• ಹೋಂ
  • »
  • ನ್ಯೂಸ್
  • »
  • Corona
  • »
  • BS Yadiyurappa: ಅಧಿಕಾರಿಗಳ ಜೊತೆ ಇಂದಿನ ಸಿಎಂ ಸಭೆ ರದ್ದು; ಚಿತ್ರರಂಗದ ಗಣ್ಯರಿಂದ ಸಿಎಂ ಬದಲು ಡಿಸಿಎಂ ಭೇಟಿ

BS Yadiyurappa: ಅಧಿಕಾರಿಗಳ ಜೊತೆ ಇಂದಿನ ಸಿಎಂ ಸಭೆ ರದ್ದು; ಚಿತ್ರರಂಗದ ಗಣ್ಯರಿಂದ ಸಿಎಂ ಬದಲು ಡಿಸಿಎಂ ಭೇಟಿ

ಸಭೆಯಲ್ಲಿ ಬಿಎಸ್ ಯಡಿಯೂರಪ್ಪ

ಸಭೆಯಲ್ಲಿ ಬಿಎಸ್ ಯಡಿಯೂರಪ್ಪ

ಅಧಿಕಾರಿಗಳ ಜೊತೆಗಿನ ಸಿಎಂ ಸಭೆ ರದ್ದಾಗಿದೆ; ಸಿನಿಮಾ ಕ್ಷೇತ್ರಕ್ಕೆ ಪರಿಹಾರ ವಿಚಾರವಾಗಿ ಸಿಎಂರನ್ನು ಭೇಟಿಯಾಗಬೇಕಿದ್ದ ಚಿತ್ರರಂಗದ ಗಣ್ಯರು ಈಗ ಡಿಸಿಎಂ ಅಶ್ವಥ ನಾರಾಯಣರ ಅವರನ್ನು ಭೇಟಿಯಾಗಲಿದ್ದಾರೆ.

  • Share this:

ಬೆಂಗಳೂರು(ಆ. 03): ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರೊಂದಿಗೆ ನಿಗದಿಯಾಗಿದ್ದ ಕೆಲ ಸಭೆಗಳು ರದ್ದಾಗುವ ಸಾಧ್ಯತೆ ಇದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 11 ಗಂಟೆಗೆ ಅಧಿಕಾರಿಗಳ ಜೊತೆ ನಡೆಯಬೇಕಿದ್ದ ಸಿಎಂ ಸಭೆ ರದ್ದಾಗಿದೆ.


ಲಾಕ್​ಡೌನ್​ನಿಂದಾಗಿ ಸಿನಿಮಾ ಕ್ಷೇತ್ರ ಜರ್ಝರಿತಗೊಂಡ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಣರು ಪರಿಹಾರ ಕೋರಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡುವುದಿತ್ತು. ಈಗ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಚಿತ್ರರಂಗದ ತಂಡವು ಬೆಳಗ್ಗೆ 10 ಗಂಟೆಗೆ ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವಥನಾರಾಯಣ ಅವರನ್ನು ಭೇಟಿ ಮಾಡುತ್ತಿದ್ದಾರೆ.


ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ವಿವಿಧ ನಾಯಕರು


ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ನಿನ್ನೆ ಭಾನುವಾರ ರಾತ್ರಿ ದೃಢಪಟ್ಟಿದೆ. ರಾತ್ರಿ 10:30ಕ್ಕೆ ಅವರನ್ನು ಓಲ್ಡ್ ಏರ್​ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐದನೇ ಮಹಡಿಯ ವಿಶೇಷ ವಾರ್ಡ್​ನಲ್ಲಿ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಏರುಪೇರು ಕಾಣುತ್ತಿಲ್ಲ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲು ವೈದ್ಯರ ವಿಶೇಷ ತಂಡ ರಚಿಸಲಾಗಿದೆ.


ಇದೇ ವೇಳೆ, ಆಸ್ಪತ್ರೆ ಮುಂಭಾಗ ಬಿಗಿ ಭದ್ರತೆ ನಿಯೋಜಿಸಲಾಗಿದೆ. ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಮಣಿಪಾಲ ಆಸ್ಪತ್ರೆಯಲ್ಲಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ: Amit Shah: ಕೇಂದ್ರ ಗೃಹ ಸಚಿವ ಅಮಿತ್​ ಶಾಗೂ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು


ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿದ್ದ ಕೆಲ ವ್ಯಕ್ತಿಗಳಿಗೆ ಈ ಹಿಂದೆ ಪಾಸಿಟಿವ್ ಬಂದಿತ್ತು. ಸಿಎಂ ಪ್ರತೀ ವಾರವೂ ತಪ್ಪದೇ ಕೊರೋನಾ ಪರೀಕ್ಷೆ ಮಾಡಿಸುತ್ತಿದ್ದರು. ಹಿಂದಿನ ವಾರ ಅವರಿಗೆ ನೆಗಟಿವ್ ಬಂದಿತ್ತು. ಈ ವಾರ ಪಾಸಿಟಿವ್ ಇರುವುದು ದೃಢಪಟ್ಟಿದೆ. ಭಾನುವಾರ ಬೆಳಗ್ಗೆ ಅವರು ಸ್ಯಾಂಪಲ್ ನೀಡಿದ್ದರು. ಸಂಜೆ ರಿಸಲ್ಟ್ ಬಂದು ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. ಯಡಿಯೂರಪ್ಪಗೆ ಸೋಂಕು ಇದೆಯಾದರೂ ರೋಗಲಕ್ಷಣಗಳು ಇಲ್ಲ.


ಯಡಿಯೂರಪ್ಪ ಅವರು ಇತ್ತೀಚೆಗೆ ಸಂಪರ್ಕ ಮಾಡಿದ ವ್ಯಕ್ತಿಗಳ ಪಟ್ಟಿ ತಯಾರಿಸಲಾಗಿದ್ದು, ಅವರೆಲ್ಲರ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ರಾಜ್ಯಪಾಲ ವಜುಭಾಯಿ ವಾಲ, ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಸಿಎಂ ಸಂಪರ್ಕಕ್ಕೆ ಬಂದಿದ್ದಾರೆ.

Published by:Vijayasarthy SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು