• ಹೋಂ
  • »
  • ನ್ಯೂಸ್
  • »
  • Corona
  • »
  • Covid19: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಸೋಂಕು; 2ಕ್ಕಿಂತಲೂ ಕಡಿಮೆ ಇದೆ ಪಾಸಿಟಿವಿಟಿ ದರ

Covid19: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಸೋಂಕು; 2ಕ್ಕಿಂತಲೂ ಕಡಿಮೆ ಇದೆ ಪಾಸಿಟಿವಿಟಿ ದರ

file photo

file photo

ರಾಜ್ಯದ ಆರು ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೋವಿಡ್​ ಪ್ರಕರಣಗಳು ಕಂಡು ಬಂದಿದೆ.

  • Share this:

ಬೆಂಗಳೂರು (ಜೂ.28): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ರಾಜ್ಯದಲ್ಲಿ ಇಂದು 2, 576 ಪ್ರಕರಣಗಳು ಕಂಡು ಬಂದಿದ್ದು, ಬೆಂಗಳೂರಿನಲ್ಲಿ 563 ಪ್ರಕರಣಗಳು ಕಂಡು ಬಂದಿದೆ. ಹಲವು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಮೂರು ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ಕಂಡು ಬಂದಿದೆ. ಜೊತೆಗೆ 100ಕ್ಕಿಂತ ಕಡಿಮೆ ಸಾವು ಕಂಡು ಬಂದಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನಂದಿಂದ ದಿನಕ್ಕೆ ಕೋವಿಡ್​ ಪ್ರಕರಣಗಳು ಇಳಿಕೆ ಕಾಣುವುದರ ಜೊತೆಗೆ ಹಲವು ಮೊದಲಿಗೆ ಕಾರಣವಾಗಿದೆ. ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ದರ 2ರ ಒಳಗೆ ಕಂಡು ಬಂದಿದ್ದು, ಪ್ರಸ್ತುತ ಕರ್ನಾಟಕದಲ್ಲಿ 1 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ಇವೆ ಎಂದು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.


ಕೋವಿಡ್​ನಿಂದ ರಾಜ್ಯದಲ್ಲಿಂದು 93 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೂ 34,836 ಜನ ಸಾವನ್ನಪ್ಪಿದ್ದಾರೆ. ಇಂದು 5,933 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.3.61 ರಷ್ಟಿದೆ. ಬೆಂಗಳೂರಲ್ಲಿಂದು 18 ಸೋಂಕಿತರು ಸಾವನ್ನಪ್ಪಿದ್ದಾರೆ.



ರಾಜ್ಯದ ಆರು ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಕೋವಿಡ್​ ಪ್ರಕರಣಗಳು ಕಂಡು ಬಂದಿದೆ. ಮೈಸೂರು- 282, ದಕ್ಷಿಣ ಕನ್ನಡ- 263 ಕೇಸ್, ಶಿವಮೊಗ್ಗ- 194, ಕೊಡಗು- 150, ಹಾಸನ- 138 ಪ್ರಕರಣಗಳು ಕಂಡು ಬಂದಿದ್ದು, ಸೋಂಕು ಇಳಿಕೆಗೆ ಈ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.


ಇದನ್ನು ಓದಿ: ಕಟ್ಟಿಕೊಂಡವನು ಕೈ ಕೊಟ್ಟ, ಹೆತ್ತವರಿಗೂ ಬೇಡವಾದಳು: ನೋವು ನುಂಗಿಕೊಂಡು ಖಡಕ್​​ ಪೊಲೀಸ್​ ಆದ ಸಾಧಕಿ


ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್​ ನಿಯಮಗಳಿಂದಾಗಿ ಸೋಂಕು ಹತೋಟಿಗೆ ತರುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕೋವಿಡ್​ ಸೋಂಕು ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿರುವ ಹಿನ್ನಲೆ ಸರ್ಕಾರ ಇಂದಿನಿಂದ ಮತ್ತಷ್ಟು ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಿದೆ. ಮದುವೆಗಳನ್ನು ಫಂಕ್ಷನ್​ ಹಾಲ್​ಗಳಲ್ಲಿ ನಡೆಸಲಿ ಅವಕಾಶ ನೀಡಲಾಗಿದೆ. ಆದರೆ, 40 ಜನಕ್ಕಿಂತ ಹೆಚ್ಚಿಲ್ಲದಂತೆ ಭಾಗವಹಿಸದಂತೆ ಆದೇಶ ನೀಡಿದೆ. ಅಧಿಕಾರಿಗಳು ಈ ಹಿಂದೆ 10 ಪಾಸ್​ಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದರು. ಈಗ ಈ ಸಂಖ್ಯೆಯನ್ನು 40ಕ್ಕೆ ಏರಿಸಲಾಗಿದೆ.


ಲಸಿಕೆ ಅಭಿಯಾನಕ್ಕೂ ಹೆಚ್ಚು ಒತ್ತು ನೀಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲೂ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಭಾನುವಾರ 1 ಲಕ್ಷ ಮಂದಿ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

top videos
    First published: