ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮೇ 7ರವರೆಗೆ ಲಾಕ್ಡೌನ್ ಜಾರಿ ಮಾಡಿ. ಲಾಕ್ಡೌನ್ ಬಳಿಕ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ತುಸು ತಗ್ಗಿದೆಯಾದರೂ ಸಂಪೂರ್ಣ ಹತೋಟಿಗೆ ಬಂದಿಲ್ಲ. ಈ ಹಿನ್ನಲೆಯಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಬೇಕೋ ಬೇಡವೋ ಎಂಬುದರ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಯಿತು. ಈ ಸಭೆಯ ಬಳಿಕ ಸಿಎಂ ಲಾಕ್ಡೌನ್ ಬಗ್ಗೆ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಈ ಬಗ್ಗೆ ಶನಿವಾರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ.
ಇಂದು ನಡೆದ ಸಭೆಯಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗದ ಕಾರಣ ಈ ಬಗ್ಗೆ ಶನಿವಾರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ತೆಗೆದುಕೊಂಡು, ಅದೇ ದಿನ ಲಾಕ್ ಡೌನ್ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಪ್ರಕಟ ಮಾಡಲು ಸರ್ಕಾರ ನಿರ್ಧರಿಸಿದೆ.
ಸಭೆಯಲ್ಲಿ ಆಕ್ಸಿಜನ್ ಪೂರೈಕೆಗೆ ಸಿಎಂ ಬಿಎಸ್ವೈ ಸೂಚನೆ ನೀಡಿದರು. ಆಕ್ಸಿಜನ್ ಎಲ್ಲಿ ಹೆಚ್ಚಾಗಿದೆ ಎಲ್ಲಿ ಕಡಿಮೆ ಬೇಡಿಕೆ ಇದೆ ಅನ್ನೋದರ ಬಗ್ಗೆ ನಿಗಾ ಇಟ್ಟು ಆಕ್ಸಿಜನ್ ಜಿಲ್ಲಾವಾರು ಹಂಚಿಕೆ ಬಗ್ಗೆ ನಿಗಾ ವಹಿಸಿ. ಹಳ್ಳಿಗಳಲ್ಲಿ ಕೊರೋನಾ ನಿಯಂತ್ರಣ ಬಗ್ಗೆ ಹೆಚ್ಚು ಗಮನ ಹರಿಸಿ. ಬ್ಲಾಕ್ ಫಂಗಸ್ ಪೆಟಾಲಿಟಿ ಹೆಚ್ಚಾಗಿದ್ದು ಅದನ್ನು ನಿಯಂತ್ರಿಸಿ. ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ಕೊರೋನಾ ಸೋಂಕನ್ನು ನಿಯಂತ್ರಿಸಲು ಸೂಕ್ತ ಕ್ರಮ ವಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬಿಎಸ್ವೈ ಸೂಚನೆ ನೀಡಿದರು.
ರಫ್ತು ವಲಯಕ್ಕೆ ಲಾಕ್ ಡೌನ್ ಸಡಿಲಿಕೆ
ರಫ್ತು ವಲಯದ ಉದ್ಯಮಗಳಿಗೆ ನಾಳೆಯಿಂದ ಲಾಕ್ಡೌನ್ನಿಂದ ಶೇ. 100ರಷ್ಟು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ. ರಫ್ತು ವಲಯದ ಉದ್ಯಮಗಳಿಗೆ ಶೇ. 100ರಷ್ಟು ಅವಕಾಶ ನೀಡಲಾಗಿದೆ. ರಫ್ತ ವಲಯದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಶೇಕಡಾ 50 ರಷ್ಟು ಅವಕಾಶ ನೀಡಲಾಗಿದೆ. ರಫ್ತು ವಲಯ ಬಿಟ್ಟು ಉಳಿದ ವಲಯಗಳಿಗೆ ವಿನಾಯಿತಿ ನೀಡೋದು ಅನುಮಾನವಾಗಿದೆ.
ಇದನ್ನು ಓದಿ: CM BSY: ಬಿಎಸ್ವೈ ನಾಯಕತ್ವ ಬದಲಾವಣೆ ಇಲ್ಲ; ಸಂಪುಟದ ಶೇ.50 ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ!
ಲಾಕ್ಡೌನ್ ವಿಸ್ತರಣೆ ಸಂಬಂಧ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದೇನೆ. ಅಲ್ಲಿ ಅವರ ಸಲಹೆಗಳನ್ನು ಪಡೆದು ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಸದ್ಯಕ್ಕೆ ಕೊರೋನಾ ನಿಯಂತ್ರಿಸುವುದು ಮಾತ್ರ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ ಎಂದು ಹೇಳಿದ್ದರು.
ಲಾಕ್ಡೌನ್ನಲ್ಲಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಜೆ ತೀರ್ಮಾನ ಮಾಡುತ್ತೇವೆ. ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ಕೆಲವೊಂದಕ್ಕೆ ಮಾತ್ರ ವಿನಾಯ್ತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ. ಲಾಕ್ಡೌನ್ ಸಡಿಲ ಹೇಗೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಜೂನ್ 7ರ ನಂತರವೂ ಲಾಕ್ಡೌನ್ ವಿಸ್ತರಣೆಗೆ ನಿರ್ಧರಿಸಲಾಗಿದೆ. ವಿಸ್ತರಣೆ ಮಾಡಿ ಬಿಗಿ ಕ್ರಮ ಏನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ