ಪುತ್ತೂರು(ಜೂ.18): ಕೊರೋನಾ ಲಾಕ್ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಇಂದು ರಾಜ್ಯಾದ್ಯಂತ ನಡೆಸಲಾಗಿದೆ. ಹೀಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ 26,942 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.
ಇಂದು ಬೆಳಿಗ್ಗೆ 8.30ಕ್ಕೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚನೆಯನ್ನೂ ನೀಡಲಾಗಿತ್ತು. ಪರೀಕ್ಷೆ ಆರಂಭದ ಮುಂಚಿತವಾಗಿ ಎಲ್ಲಾ ವಿದ್ಯಾರ್ಥಿಗಳ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವಿತರಣೆ ನಡೆಸುವ ನಿಟ್ಟಿನಲ್ಲಿ ಈ ಸೂಚನೆಯನ್ನು ನೀಡಲಾಗಿತ್ತು. ಆದರೆ ಪುತ್ತೂರಿನ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ಯಾನಿಂಗ್ ನಡೆಸಿಲ್ಲ ಎಂದು ಆರೋಪಿಸಲಾಗಿದೆ.
ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಸಂದರ್ಭದಲ್ಲಿ ಮಳೆಯಿದ್ದ ಪರಿಣಾಮ ಹೆಚ್ಚಿನ ವಿದ್ಯಾರ್ಥಿಗಳು ಮಳೆಗೆ ನಿಲ್ಲಲು ಜಾಗವಿಲ್ಲದೆ ಗುಂಪಾಗಿ ಸೇರಿದ್ದು, ಸಾಮಾಜಿಕ ಅಂತರ ಮಾಯವಾಗಿತ್ತು. ಅಲ್ಲದೆ ಥರ್ಮಲ್ ಸ್ಕ್ಯಾನಿಂಗನ್ನೂ ಸರಿಯಾಗಿ ಮಾಡಿಲ್ಲ ಎನ್ನುವ ಆರೋಪ ವಿದ್ಯಾರ್ಥಿಗಳಿಂದ ಕೇಳಿ ಬಂದಿದೆ.
ಇದನ್ನೂ ಓದಿ: ‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ - ಎಂಬಿ ಪಾಟೀಲ್
ವಿದ್ಯಾರ್ಥಿಗಳು ಗುಂಪಾಗಿ ಸೇರುತ್ತಿರುವ ದೃಶ್ಯಗಳು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಕಂಡು ಬಂದಿದ್ದು, ಮಕ್ಕಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವೊಲಿಸುವುದು ಕಷ್ಟ ಸಾಧ್ಯ ಅನ್ನೋದು ಇಂದು ನಡೆದ ಪರೀಕ್ಷೆಯನ್ನು ಗಮನಿಸಿದಾಗಿ ತಿಳಿದುಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ