ಕೊರೋನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ತೊಂದರೆ ಮಾಡಲಿದೆ ಎಂದು ಅನೇಕ ಪರಿಣಿತರು ಮುನ್ನೆಚ್ಚರಿಕೆ ಕೊಟ್ಟರು ಪರೀಕ್ಷೆ ನಡೆಸಲು ಹೊರಟಿರುವ ಸರ್ಕಾರದ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಡೆಯ ವಿರುದ್ದ ಜನರು ಆಕ್ರೋಶ ಗೊಂಡಿದ್ದಾರೆ. ಮೊದಲ ಅಲೆಯ ಸಮಯದಲ್ಲೆ ಪರೀಕ್ಷೆ ನಡೆಸಿ ಯಾವುದೇ ಅವಘಡ ಆಗದಂತೆ ಗೆದ್ದ ಸರ್ಕಾರ ಆತ್ಮವಿಶ್ವಾಸದಲ್ಲಿ ಇದ್ದು ಈ ಬಾರಿಯೂ ಮಕ್ಕಳಿಗೆ ತೊಂದರೆ ಅಗದಂತೆ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 19 ಹಾಗೂ 20ರಂದು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿ ದಾಖಲಾಗಿದ್ದು ಅದರಲ್ಲಿ ಉಲ್ಲೇಖಿಸಲಾಗಿರುವ ಪ್ರಮುಖ ಅಂಶಗಳ ವಿವರ ಇಲ್ಲಿದೆ.
ಸಿಂಗ್ರೇ ಗೌಡ ಎನ್ನುವವರು ಅರ್ಜಿ ಸಲ್ಲಿಸಿದ್ದು ಕೋವಿಡ್ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಮಕ್ಕಳು ಆನ್ಲೈನ್ ತರಗತಿಗಳ ಮೂಲಕ ಪಠ್ಯವನ್ನು ಅರ್ಥಮಾಡಿಕೊಳ್ಳುವಲ್ಲಿ ಕಷ್ಟಪಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅರ್ಜಿಯಲ್ಲಿ ಉಲ್ಲೇಖಿಸಲಾಗಿರುವ ಪ್ರಮುಖ ಅಂಶಗಳು ಹೀಗಿವೆ:
ಮೇಲಿನ ಕಾರಣಗಳ ಹಿನ್ನೆಲೆಯಲ್ಲಿ ಒಂದೋ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಇಲ್ಲವೇ ಎಲ್ಲ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸೂಕ್ತ ಪರ್ಯಾಯ ಪರಿಹಾರೋಪಾಯ ಹುಡುಕಬೇಕು. ಇದನ್ನೇ ಮರುಪರೀಕ್ಷೆ ಬರೆಯುತ್ತಿರುವವರಿಗೂ ಅನ್ವಯಿಸಬೇಕು ಎಂದು ಕೋರಲಾಗಿದೆ. ಅಂಕಗಳನ್ನು ನೀಡಲು 8, 9 ನೇ ತರಗತಿಯ ಪರೀಕ್ಷಾ ಅಂಕಗಳು ಹಾಗೂ 10ನೇ ತರಗತಿಯ ಪೂರ್ವಭಾವಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವಂತೆಯೂ ಮನವಿ ಮಾಡಲಾಗಿದೆ.
ಇದನ್ನೂ ಓದಿ: Cabinet expansion : ನೂತನ 43 ಸಚಿವರಲ್ಲಿ ಯಾರಿಗೆ ಯಾವ ಖಾತೆ; ಇಲ್ಲಿದೆ ಪಟ್ಟಿ
ಇದೂ ಸಾಧ್ಯವಿಲ್ಲವಾದರೆ, ಇತರೆ ರಾಜ್ಯಗಳು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಅನುಸರಿಸುವ ಮಾನದಂಡವನ್ನು ಅನುಸರಿಸುವಂತೆಯೂ ಕೋರಲಾಗಿದೆ. ಪ್ರಕರಣದ ವಿಚಾರಣೆಯನ್ನು ಮುಂದಿನ ವಾರ ಕೈಗೊಳ್ಳುವ ನಿರೀಕ್ಷೆ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ