• ಹೋಂ
  • »
  • ನ್ಯೂಸ್
  • »
  • Corona
  • »
  • Priyanka Gandhi: ಕೋವಿಡ್​ ಔಷಧಿಗಳ ಮೇಲೂ ಜಿಎಸ್​ಟಿ ತೆರಿಗೆ ವಿಧಿಸುವುದು ಅಮಾನವೀಯ; ಪ್ರಿಯಾಂಕಾ ಗಾಂಧಿ ಕಿಡಿ

Priyanka Gandhi: ಕೋವಿಡ್​ ಔಷಧಿಗಳ ಮೇಲೂ ಜಿಎಸ್​ಟಿ ತೆರಿಗೆ ವಿಧಿಸುವುದು ಅಮಾನವೀಯ; ಪ್ರಿಯಾಂಕಾ ಗಾಂಧಿ ಕಿಡಿ

ಪ್ರಿಯಾಂಕಾ ಗಾಂಧಿ.

ಪ್ರಿಯಾಂಕಾ ಗಾಂಧಿ.

ಇಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸರ್ಕಾರವು ಕೋವಿಡ್​ ಔಷಧಿಗಳ ಮೇಲಿನ ತೆರಿಗೆಯನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

  • Share this:

    ನವ ದೆಹಲಿ (ಮೇ 28); ದೇಶದಲ್ಲಿ ಎರಡನೇ ಅಲೆಯ ಕೊರೋನಾ ಸೋಂಕನ್ನು ನಿಯಂತ್ರಿಸುವುದು ಸಾಧ್ಯವಾಗುತ್ತಿಲ್ಲ. ಈ ಸೋಂಕು ದಿನದಿಂದ ದಿನ್ಕಕೆ ವಿಷಮವಾಗುತ್ತಲೇ ಇದೆ. ಈ ನಡುವೆ ಜನರಿಗೆ ಸೂಕ್ತ ಔಷಧಗಲೂ ಲಭ್ಯವಾಗುತ್ತಿಲ್ಲ. ಅಲ್ಲದೆ, ಕೋವಿಡ್​ ಔಷಧಗಳ ಬೆಲೆಯೂ ಇಳಿಯುತ್ತಿಲ್ಲ. ಇದರಿಂದ ಮಧ್ಯಮ ಮತ್ತು ಬಡ ವರ್ಗದ ಜನ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಈ ಸಂಬಂಧ ಇಂದು ಧ್ವನಿ ಎತ್ತಿರುವ ಕಾಂಗ್ರೆಸ್​ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, "ಕೊರೋನಾ ವಿರುದ್ಧದ ಹೋರಾಟದಲ್ಲಿ ಬಳಸಲಾಗುವ ಎಲ್ಲಾ ಔಷಧಿಗಳು ಮತ್ತು ಸಲಕರಣೆಗಳ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುಬೇಕು. ಸಾಂಕ್ರಾಮಿಕ ರೋಗದ ಸಮಯದಲ್ಲಿ ಇಂತಹ ವಸ್ತುಗಳ ಮೇಲೆ ತೆರಿಗೆ ವಿಧಿಸುವುದು ಅಮಾನವೀಯ" ಎಂದು ಕಿಡಿಕಾರಿದ್ದಾರೆ.


    ಇಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸರ್ಕಾರವು ಕೋವಿಡ್ ಔಷಧಗಳ ಮೇಲಿನ ತೆರಿಗೆಯನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.



    ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, "ಸಾಂಕ್ರಾಮಿಕ ರೋಗ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಅಗತ್ಯ ವಸ್ತುಗಳಾದ ಆಂಬ್ಯುಲೆನ್ಸ್‌ಗಳು, ಆಸ್ಪತ್ರೆಯ ಹಾಸಿಗೆಗಳು, ವೆಂಟಿಲೇಟರ್‌ಗಳು, ಆಮ್ಲಜನಕ, ಔಷಧಿಗಳು ಹಾಗೂ ಕೋವಿಡ್ ಲಸಿಕೆಗಳ ಮೇಲೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ ಮತ್ತು ಅಸೂಕ್ಷ್ಮತೆಯ ನಡೆಯಾಗಿದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.


    "ಕೊರೋನಾ ವಿರುದ್ದ ಹೋರಾಟದಲ್ಲಿ ಬಳಸಲಾಗುವ, ಎಲ್ಲಾ ಜೀವ ಉಳಿಸುವ ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಸರ್ಕಾರವು ಇಂದು ನಡೆಯುವ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಕಿತ್ತು ಹಾಕಬೇಕು" ಎಂದು ಅವರು ಕೇಂದ್ರ ಸರ್ಕಾರವನ್ನು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ. ಕೊರೋನಾ ವೈರಸ್ ವಿರುದ್ಧದ ಹೋರಾಟದ ಸಮಯದಲ್ಲಿ ಸಾಮಾನ್ಯವಾಗಿ ಬಳಸಲಾಗುವ ವಸ್ತುಗಳ ಪಟ್ಟಿಯನ್ನು ಮತ್ತು ಅವುಗಳ ಮೇಲೆ ವಿಧಿಸಲಾಗುವ ಜಿಎಸ್ಟಿ ದರದ ಚಿತ್ರವನ್ನೂ ಪ್ರಿಯಾಂಕ ಗಾಂಧಿ ತಮ್ಮ ಟ್ವೀಟ್‌ನಲ್ಲಿ ಲಗತ್ತಿಸಿದ್ದಾರೆ.


    ಭಾರತದಲ್ಲಿ ಕೊರೋನಾ ಕೇಕೆ:


    ದೇಶದಲ್ಲಿ ಒಂದು ದಿನ ಹೆಚ್ಚು ಪ್ರಕರಣಗಳು ಮತ್ತೊಂದು ದಿನ ಕಡಿಮೆ ಕೇಸುಗಳು ಬರುತ್ತಿದ್ದು ಹಾವು ಏಣಿ ಆಟದಂತಾಗಿದೆ‌. ಇದರಿಂದ ಕೊರೋನಾ ಎರಡನೇ ಅಲೆ ಸಂಪೂರ್ಣವಾಗಿ ಕೆಳಮುಖವಾಗಿ ಸಾಗುತ್ತಿಲ್ಲ ಎಂಬುದು ಖಾತರಿ ಆದಂತಾಗಿದೆ. ಅಲ್ಲದೆ ಎರಡನೇ ಅಲೆ ಮುಗಿಯಲು ಇನ್ನೂ ಒಂದಷ್ಟು ದಿನ ಸಮಯ ಬೇಕಾಗಬಹುದು ಎಂದು ಹೇಳಬಹುದಾಗಿದೆ.


    ಇದನ್ನೂ ಓದಿ: Love Sex Dhoka: ಖ್ಯಾತ ನಟಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲ ಫೋಟೊ ತೋರಿಸಿ ಬೆದರಿಕೆ: ಮಾಜಿ ಸಚಿವನ ಮೇಲೆ ದೂರು


    ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನಾ ಎರಡನೇ ಅಲೆ ತಾರಕಕ್ಕೆ ಏರುತ್ತದೆ. ತಿಂಗಳ ಕೊನೆಯಲ್ಲಿ ಕಡಿಮೆ ಆಗುತ್ತದೆ ಎಂಬ ದೇಶಿಯ ಮತ್ತು ವಿದೇಶಿ ತಜ್ಞರ ಅಭಿಪ್ರಾಯದಂತೆ ಮೇ 6ರಂದು 4,14,188 ಪ್ರಕರಣಗಳು ಕಂಡುಬಂದಿದ್ದು ದೇಶದಲ್ಲಿ ದಿನ ಒಂದರಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂಬ ದಾಖಲೆಯಾಗಿತ್ತು. ನಂತರ ಕೆಳಮುಖವಾಗಿ ಸಾಗಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು.


    ಇದನ್ನೂ ಓದಿ: Rahul Gandhi: ದೇಶದಲ್ಲಿ ಕೊರೋನಾ ಅಲೆ ವ್ಯಾಪಕವಾಗಲು ಪ್ರಧಾನಿ ಮೋದಿಯ ನೌಟಂಕಿ ನಾಟಕಗಳೇ ಕಾರಣ; ರಾಹುಲ್ ಗಾಂಧಿ


    ಇತ್ತೀಚೆಗಿನ ಈ ಹಾವು ಏಣಿ ಆಟ ನೋಡುವುದಾದರೆ ಮೇ 24ರಂದು ಮೊದಲ ಬಾರಿಗೆ ಎರಡು ಲಕ್ಷಕ್ಕಿಂತ ಕಡಿಮೆ (1,96,427) ಪ್ರಕರಣಗಳು ಕಂಡುಬಂದಿದ್ದವು. ಇದರಿಂದ ಇಡೀ ದೇಶವನ್ನೇ ಕಾಡಿ ಕಂಗೆಡಿಸಿದ್ದ ಎರಡನೇ ಸುತ್ತಿನ ಕೊರೋನಾ ಅಲೆ ಕೊನೆಯಾಗಲಿದೆ ಎಂಬ ನಿಟ್ಟುಸಿರು ಬಿಡುವಷ್ಟರಲ್ಲಿ, ಮೇ 25ರಿಂದ ಮತ್ತೆ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು (2,08,921) ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದ್ದವು. ಇದಾದ ಬಳಿಕ ಮೇ 26ರಂದು 2,11,298 ಪ್ರಕರಣಗಳು ಗೋಚರಿಸುವ ಮೂಲಕ ಮತ್ತೆ ಕೊರೋನಾ ಸೋಂಕು ಹರಡುವಿಕೆ ಏರುಮುಖವಾಗಿ ಸಾಗುತ್ತಿದೆ ಎಂಬ ಆತಂಕ ಮೂಡಿಸಿತು. ಈಗ ಮೇ 27ರಂದು 1,86,364 ಕೇಸುಗಳು ಕಂಡುಬಂದಿದ್ದು ಇಳಿಮುಖವಾಗಿರುವುದನ್ನು ತೋರುತ್ತಿದೆ.


    ಗುರುವಾರ 1,86,364 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,75,55,457ಕ್ಕೆ ಏರಿಕೆ ಆಗಿದೆ.‌ ಗುರುವಾರ 3,660 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,18,895ಕ್ಕೆ ಏರಿಕೆ ಆಗಿದೆ. ಈವರೆಗೆ 2,48,93,410 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 23,43,152 ಆಕ್ಟಿವ್ ಕೇಸುಗಳಿವೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 20 ಕೋಟಿ ದಾಟಿದೆ.‌ ಈವರೆಗೆ 20,57,20,660 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ‌.

    Published by:MAshok Kumar
    First published: