ಬೆಂಗಳೂರು (ಆ. 21): ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ನಾಳೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಲಿದೆ. 1 ಲಕ್ಷದ 51 ಸಾವಿರದ 95 ವಿದ್ಯಾರ್ಥಿಗಳು ಪರೀಕ್ಷೆಗೆ ಎದುರಿಸಲಿದ್ದಾರೆ. ರಾಜ್ಯದಲ್ಲೆಡೆ ಸೋಂಕಿನ ಆತಂಕ ಇರುವ ಹಿನ್ನಲೆ ಪರೀಕ್ಷೆ ಕೋವಿಡ್ ಸುರಕ್ಷಾತಾ ಕ್ರಮದ ಮೂಲಕ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಜ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಈ ಸಂಬಂದ ಮುನ್ನೆಚ್ಚರಿಕಾ ಕ್ರಮ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕೋವಿಡ್ ನೆಗಟಿವ್ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷಾ ವೇಳೆ ಕೈ ಗೊಂಡ ಮುಂಜಾಗ್ರತಾ ಕ್ರಮಗಳನ್ನು ಟಿಇಟಿ ಪರೀಕ್ಷೆ ವೇಳೆ ಕೂಡ ನಡೆಸಲಾಗಿದ್ದು, ಕೋವಿಡ್ ಲಕ್ಷಣಗಳಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ರಾಜ್ಯದ 34 ಜಿಲ್ಲಾ ಕೇಂದ್ರದ 634 ಪರೀಕ್ಷಾ ಕೇಂದ್ರದಲ್ಲಿ ಟಿಇಟಿ ಪರೀಕ್ಷೆ ನಡೆಯಲಿದ್ದು, ಒಂದು ಡೆಸ್ಕ್ಗೆ ಕೇವಲ ಒಬ್ಬ ವಿದ್ಯಾರ್ಥಿಗಳಿಗೆ ಮಾತ್ರ ಕೂರಲು ಅವಕಾಶ ಮಾಡಲಾಗಿದೆ.
ಇದನ್ನು ಓದಿ: ಇಡಿ ಸಮನ್ಸ್ ಜಾರಿ ಬೆನ್ನಲ್ಲೇ ದೆಹಲಿಗೆ ಹಾರಿದ ಜಮೀರ್
ಬೆಳಗ್ಗೆ 9. 30 ರಿಂದ 12 ಗಂಟೆ ವರೆಗೆ ಮೊದಲ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2. 30ರಿಂದ 4 ಗಂಟೆಗೆ ಎರಡನೇ ಪತ್ರಿಕೆಗೆ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯವಾಗಿದೆ. ಅಭ್ಯರ್ಥಿಗಳು ನೀರಿನ ಬಾಟಲ್,ಆಹಾರದ ಡಬ್ಬಿ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.
ಈಗಾಗಲೇ ಪರೀಕ್ಷಾ ಕೇಂದ್ರಗಳನ್ನ ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಜೊತೆಗೆ ಪರೀಕ್ಷೆಗೆ ಮುನ್ನ ಎರಡು ಅವಧಿಗಳಲ್ಲೂ ಕೇಂದ್ರದಲ್ಲಿ ಸ್ಯಾನಿಟೈಜ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ದ್ವಾರದ ಬಳಿ ಅಭ್ಯರ್ಥಿಗಳ ಆರೋಗ್ಯ ತಪಾಸಣಾ ಕೌಂಟರ್ ನಿರ್ಮಾಣ ಮಾಡಲಾಗಿದ್ದು, ಅಭ್ಯರ್ಥಿಗಳನ್ನ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ