ಬೆಂಗಳೂರು (ಮೇ.06); ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿ ಸಿಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಈ ನಡುವೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ. ಆಕ್ಸಿಜನ್ ಕೊರತೆ ಮತ್ತು ಐಸಿಯು ಬೆಡ್ ಇಲ್ಲದಿರುವುದೇ ಈ ಎಲ್ಲಾ ಸಾವಿಗೆ ಪ್ರಮುಖ ಕಾರಣವಾಗಿದೆ. ಈ ನಡುವೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಜನ ಮೃತಪಟ್ಟ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣದ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್, ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಗತ್ಯವಾದ 1200 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ನೀಡಬೇಕು ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಸೂಚನೆ ವಿರುದ್ಧ ಕೇಂದ್ರ ಸರ್ಕಾರ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಈ ನಡೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಖಂಡಿಸಿದ್ದಾರೆ.
Shocked to know that @BJP4India Central govt has approached Supreme Court against Karnataka High Court's direction to allocate 1200 MT of liquid oxygen to Karnataka.
Will @CMofKarnataka & @BJP4Karnataka ever fight against this decision?
1/3#BJPMosa pic.twitter.com/tcNmxo2Ef9
— Siddaramaiah (@siddaramaiah) May 6, 2021
Karnataka needs more than 1600-1700 MT of oxygen but Central govt has allocated just 675 MT of oxygen which is less than 60% of the demand.
Is @narendramodi blind to Karnataka's need?
2/3#BJPMosa
— Siddaramaiah (@siddaramaiah) May 6, 2021
Karnataka has elected 25 @BJP4India MPs to Lok Sabha.
Where are they hiding? Have they lost their spine to stand up against @narendramodi?
Shame on them!!
They are unfit to represent Karnataka and a blot to mankind.
3/3#BJPMosa
— Siddaramaiah (@siddaramaiah) May 6, 2021
ಈ ನಡುವೆ ರಾಜ್ಯದಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಹೇರುವ ಕುರಿತು ಚರ್ಚೆಗಳು ಆರಂಭವಾಗಿವೆ. ಕೊರೋನಾ ಕೇಕೆ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಲೇ ಇದೆ. ಈಗಾಗಲೇ ಜನತಾ ಕರ್ಫ್ಯೂ ಚಾಲ್ತಿಯಲ್ಲಿದೆ. ಆದರೂ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ಇಳಿಮುಖವಾಗುವಂತೆ ಕಾಣುತ್ತಿಲ್ಲ. ಹೀಗಾಗಿ ರಾಜ್ಯಾದ್ಯಂತ ಲಾಕ್ಡೌನ್ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲೂ ಸಹ ಈ ಬಗ್ಗೆ ಚರ್ಚೆ ಮಾಡಲಾಗಿತ್ತಾದರೂ ಸಿಎಂ ಯಡಿಯೂರಪ್ಪ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ.
ಆದರೆ, ಇದೀಗ ರಾಜ್ಯದಲ್ಲಿ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಮಿತಿ ಮೀರಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಸಂಜೆ 6 ಗಂಟೆಗೆ ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಚರ್ಚೆಯ ನಂತರ ಲಾಕ್ಡೌನ್ ಅಥವಾ ಜನತಾ ಕರ್ಫ್ಯೂವನ್ನು ಮುಂದುವರೆಸುವುದಾ? ಎಂದು ಸಿಎಂ ತಿರ್ಮಾನಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: CoronaVirus: ಲಾಕ್ಡೌನ್ ಅಥವಾ ಜನತಾ ಕರ್ಫ್ಯೂ?; ನಾಳೆ ಸಂಜೆ ನಿರ್ಧರಿಸಲಿರುವ ಸರ್ಕಾರ!
ತಜ್ಞರು ಈಗಾಗಲೇ ಕೊರೋನಾ ನಿಯಂತ್ರಣಕ್ಕೆ ಲಾಕ್ಡೌನ್ ಒಂದೇ ಪರಿಹಾರ ಎಂದು ವರದಿ ನೀಡಿದ್ದಾರೆ. ಲಾಕ್ ಡೌನ್ ನಿಂದ ಮಾತ್ರ ಕೋವಿಡ್ ಚೈನ್ ಲಿಂಕ್ ಕಟ್ ಮಾಡಬಹುದು. ಮುಂಬೈನಲ್ಲಿ ಲಾಕ್ ಡೌನ್ ನಿಂದ ಕೋವಿಡ್ ಕಂಟ್ರೋಲ್ ಗೆ ಬಂದಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಸಾವಿನ ಸಂಖ್ಯೆ ಮಿತಿ ಮೀರುತ್ತಿದೆ. ಹತ್ತು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ಗೆ ಬರುತ್ತಿಲ್ಲ. ಈ ನಡುವೆ ಜನತಾ ಕರ್ಫ್ಯೂ ವರ್ಕೌಟ್ ಆಗಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ