• ಹೋಂ
  • »
  • ನ್ಯೂಸ್
  • »
  • Corona
  • »
  • Coronavirus: ದೆಹಲಿಯಲ್ಲಿ ಇಳಿಮುಖದತ್ತ ಕೊರೋನಾ: ಗುಣಮುಖರಾಗುವವರ ಸಂಖ್ಯೆ ದ್ವಿಗುಣ

Coronavirus: ದೆಹಲಿಯಲ್ಲಿ ಇಳಿಮುಖದತ್ತ ಕೊರೋನಾ: ಗುಣಮುಖರಾಗುವವರ ಸಂಖ್ಯೆ ದ್ವಿಗುಣ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು (Coronavirus) ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿದೆ.

  • Share this:

    ನವದೆಹಲಿ: ಕೊರೋನಾ ಎರಡನೇ ಅಲೆಯ ಪ್ರಭಾವ ರಾಷ್ಟ್ರ ರಾಜಧಾನಿಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ. ಸಕಾರಾತ್ಮಕ ದರ ಪ್ರಸ್ತುತ ಶೇ.2.5 ರಷ್ಟಿದೆ. ಆದರೂ, ಈ ಸೋಂಕನ್ನು ಸಂಪೂರ್ಣವಾಗಿ ನಿರ್ಮೂಲನೆ ಗೊಳಿಸುವ ಸಲುವಾಗಿ ಮೇ 31ರ ಬೆಳಗ್ಗೆ 5 ಗಂಟೆಯ ವರೆಗೆ ಲಾಕ್​ಡೌನ್​ ಅನ್ನು ವಿಸ್ತರಿಸಲಾಗಿದೆ. ಇದೀಗ ಕೋವಿಡ್​ನಿಂದ ಗುಣಮುಖರಾಗುವವರ ಸಂಖ್ಯೆ ಕೂಡ ಹೆಚ್ಚಾಗಿದೆ.  ದೈನಂದಿನ ವರದಿಯಾಗುವ ಪ್ರಕರಣಗಳಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ.


    ಒಟ್ಟಾರೆ ಈಗ ಗುಣಮುಖರಾಗುವವರ ಸಂಖ್ಯೆ ಪ್ರತಿದಿನವೂ ವರದಿಯಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆಯನ್ನು ಮೀರಿದೆ. ಚೇತರಿಕೆ ದರವು ಈಗ ಶೇ. 85.6 ರಿಂದ ಶೇ. 90% ಕ್ಕೆ ಏರಿದೆ. ಇದು ಸಕಾರಾತ್ಮಕ ಸೂಚನೆ ಎಂದು ದೆಹಲಿ ಆರೋಗ್ಯ ಸಚಿವಾಲಯ ತಿಳಿಸಿದೆ.



    "ಎರಡನೇ ಕೋವಿಡ್​ ಅಲೆಯ ಬೆನ್ನಿಗೆ ಮೂರನೇ ಅಲೆಯೂ ಭಾರತ ಮತ್ತು ದೆಹಲಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಹೊಸ ಆಮ್ಲಜನಕ ಸ್ಥಾವರಗಳು ಮತ್ತು ಐಸಿಯು ಹಾಸಿಗೆಗಳನ್ನು ಸ್ಥಾಪಿಸುವುದು ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಮಾಡಲು ಅಧಿಕಾರಿಗಳು ಹಗಲು, ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ರೀತಿಯ ಪ್ರವೃತ್ತಿಯೊಂದಿಗೆ ಪ್ರಕರಣಗಳು ಇಳಿಮುಖವಾಗುತ್ತಿದ್ದರೆ, ಮೇ 31 ರಿಂದ ಹಂತ ಹಂತವಾಗಿ ಲಾಕ್‌ಡೌನ್ ಅನ್ನು ಸಡಿಲಿಸಲಾಗುವುದು" ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.


    "ನಾನು ಅನೇಕ ತಜ್ಞರನ್ನು ಸಂಪರ್ಕಿಸಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಎಲ್ಲರೂ ಇನ್ನೂ ಒಂದು ವಾರದವರೆಗೆ ಲಾಕ್​ಡೌನ್ ವಿಸ್ತರಿಸುವ ಕುರಿತು ಒಲವು ತೋರಿಸಿದ್ದರು. ಆದ್ದರಿಂದಲೇ ಮೇ.31ರ ವರೆಗೆ ಲಾಕ್​ಡೌನ್ ಅನ್ನು ವಿಸ್ತರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೋಂಕು ಮತ್ತಷ್ಟು ಹೆಚ್ಚಾಗದಂತೆ ತಡೆಯುವ ಸಲುವಾಗಿ ಲಾಕ್​ಡೌನ್ ಅಗತ್ಯ ಇದೆ. ಈ ನಡುವೆ ಜನರಿಗೆ ಕೊರೋನಾ ಲಸಿಕೆ ನೀಡುವ ಅಗತ್ಯವಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಲಸಿಕೆಗಳು ಲಭ್ಯವಾದ ತಕ್ಷಣ 18-44 ವಯಸ್ಸಿನ ಎಲ್ಲಾ ಯುವಕರಿಗೂ ಲಸಿಕೆಯನ್ನು ನೀಡಲಾಗುವುದು" ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.


    ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು (Coronavirus) ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿದೆ. ಆದರೂ ಇನ್ನೂ ಪ್ರತಿದಿನ ಸರಿ ಸುಮಾರು ಎರಡೂವರೆ ಲಕ್ಷ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲೂ ಭಾರೀ ಇಳಿಮುಖ ಆಗಿಲ್ಲ.


    ಇದನ್ನು ಓದಿ: Explained: ಕೋವಿಡ್-19 ನ್ಯುಮೋನಿಯಾ ಎಂದರೇನು? ಅದರ ರೋಗಲಕ್ಷಣಗಳೇನು ಹಾಗೂ ಚೇತರಿಕೆ ಹೇಗೆ?


    ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿ ಹೆಚ್ಚಾಗಿತ್ತು.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:HR Ramesh
    First published: