• ಹೋಂ
  • »
  • ನ್ಯೂಸ್
  • »
  • Corona
  • »
  • ನಾಳೆ ಸಿಎಂ ಮಹತ್ವದ ಸುದ್ದಿಗೋಷ್ಠಿ; ಲಾಕ್​ಡೌನ್ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ; ಯಾರಿಗೆ ಯಾವ ನೆರವು?

ನಾಳೆ ಸಿಎಂ ಮಹತ್ವದ ಸುದ್ದಿಗೋಷ್ಠಿ; ಲಾಕ್​ಡೌನ್ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ; ಯಾರಿಗೆ ಯಾವ ನೆರವು?

ಸಿಎಂ ಬಿ.ಎಸ್.​ಯಡಿಯೂರಪ್ಪ.

ಸಿಎಂ ಬಿ.ಎಸ್.​ಯಡಿಯೂರಪ್ಪ.

ಲಾಕ್​ಡೌನ್ ವಿಸ್ತರಣೆ ಮಾಡಿದರೆ, ರಾಜ್ಯ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ವಿರೋಧ ಪಕ್ಷಗಳು ಸೇರಿದಂತೆ ಪಕ್ಷದ ಹಲವು ಸಚಿವರು ಒತ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್​ಡೌನ್ ವಿಸ್ತರಣೆ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಂದೆ ಓದಿ ...
  • Share this:

    ಬೆಂಗಳೂರು: ನಾಳೆ ಬೆಳಗ್ಗೆ 11.30ಕ್ಕೆ ಸಿಎಂ‌ ಬಿಎಸ್ ಯಡಿಯೂರಪ್ಪ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ, ನಾಳೆ ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ. ಲಾಕ್‌ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಬಗ್ಗೆ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ. ಈಗ ಘೋಷಿಸಿರುವ ಲಾಕ್​ಡೌನ್​ ಇದೇ ತಿಂಗಳ 24ಕ್ಕೆ ಮುಕ್ತಾಯವಾಗಲಿದೆ.


    ವಿಶೇಷ ಪ್ಯಾಕೇಜ್​ನಲ್ಲಿ ಯಾರಿಗೆ ಯಾವ ನೆರವು?


    • ಬೀದಿಬದಿ ವ್ಯಾಪಾರಿಗಳಿಗೆ ಹಣದ ನೆರವು

    • ಮಡಿವಾಳ, ಸವಿತಾ ಸಮುದಾಯಕ್ಕೆ ನೆರವು (ಕಳೆದ ವರ್ಷ 5 ಸಾವಿರ ನೆರವು)

    • ಕಟ್ಟಡ ಕಾರ್ಮಿಕರಿಗೆ ಮನಿ ಪ್ಯಾಕೇಜ್

    • ಹೋಟೆಲ್ ಕಾರ್ಮಿಕರಿಗೆ ಹಣದ ಪ್ಯಾಕೇಜ್.

    • ಹೂ, ತರಕಾರಿ ಬೆಳೆಗಾರರಿಗೆ ಹಣದ ನೆರವು

    • ಆಶಾ ಕಾರ್ಯಕರ್ತೆಯರಿಗೆ ಸಹಾಯ ಧನ

    • ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಮನ್ನಾ

    • 60 ಸಾವಿರ ಮಡಿವಾಳರಿಗೆ 5 ಸಾವಿರ ರೂ. ಪರಿಹಾರ

    • ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ. ಪರಿಹಾರ

    • ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ

    • ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ

    • ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ

    • ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ

    • ಆಟೋ/ಕ್ಯಾಬ್ ಚಾಲಕರ ಖಾತೆಗೆ ಹಣ. (ಕಳೆದ ವರ್ಷ 5 ಸಾವಿರ ನೆರವು)

    • ಬೀದಿಬದಿ ವ್ಯಾಪಾರಿಗಳಿಗೆ ಹಣದ ನೆರವು

    • ಮಡಿವಾಳ, ಸವಿತಾ ಸಮುದಾಯಕ್ಕೆ ನೆರವು (ಕಳೆದ ವರ್ಷ 5 ಸಾವಿರ ನೆರವು.)

    • ಕರೆಂಟ್, ವಾಟರ್ ಬಿಲ್ ಆಧಾರದಲ್ಲಿ ಬಡವರ ಖಾತೆಗೆ ಹಣ.

    • ವಾಟರ್, ಕರೆಂಟ್ ಬಿಲ್ ಪಾವತಿಗೆ 1 ತಿಂಗಳು ಹೆಚ್ಚಿನ ಕಾಲಾವಕಾಶ.

    • ಮನೆ ತೆರಿಗೆ ಪಾವತಿಗೆ ರಿಯಾಯಿತಿ, ಸಮಯಾವಕಾಶ ಸಾಧ್ಯತೆ.

    • ಮನೆ ಬಾಡಿಗೆ ಪಾವತಿಗೆ ಮಾಲೀಕರು ಒತ್ತಡ ಹಾಕುವಂತಿಲ್ಲ‌

    • ಇಂದಿರಾ ಕ್ಯಾಂಟೀನ್‍ನಲ್ಲಿ ಈಗಾಗಲೇ ಉಚಿತ ಊಟದ ವ್ಯವಸ್ಥೆ ಆಗಿದೆ.

    • ಬಿಪಿಎಲ್ ಕಾರ್ಡ್ ಆಧಾರದಲ್ಲಿ ರೇಷನ್ ಕಿಟ್ ಕೊಡಬಹುದು.

    • 5 ಕೆಜಿ ಅಕ್ಕಿ ಸೇರಿದಂತೆ ಎಲ್ಲಾ ರೇಷನ್ ಒಳಗೊಂಡ ಫುಡ್ ಕಿಟ್.

    • ಜೊತೆಗೆ ಲಾಕ್‍ಡೌನ್‍ನಿಂದ ಸಾಕಷ್ಟು ತೊಂದರೆ ಅನುಭವಿಸಿರುವ ತಳಸಮುದಾಯಗಳಿಗೆ ಕಳೆದ ಬಾರಿಯಂತೆಯೇ ಹಣ ಹಾಕುವ ಸಂಭವ.


    ಇದನ್ನು ಓದಿ: ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಸೂಚನೆ; ಸಚಿವ ಬಸವರಾಜ ಬೊಮ್ಮಾಯಿ

    ಕೊರೋನಾ ನಿಯಂತ್ರಣ ಸಲುವಾಗಿ ರಾಜ್ಯದಲ್ಲಿ ಮೇ 24ರವರೆಗೆ ಲಾಕ್​ಡೌನ್ ಜಾರಿ ಮಾಡಲಾಗಿದೆ. ಕೊರೋನಾ ಸಂಪೂರ್ಣ ಹತೋಟಿಗೆ ಮತ್ತಷ್ಟು ದಿನ ಲಾಕ್​ಡೌನ್​ ವಿಸ್ತರಣೆ ಅನಿವಾರ್ಯ ಎಂದು ತಜ್ಞರು, ಜಿಲ್ಲಾಧಿಕಾರಿಗಳು ಹಾಗೂ ಸಚಿವರು ಸಲಹೆ ನೀಡಿದ್ದಾರೆ. ಹೀಗಾಗಿ ಲಾಕ್​ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಆದರೆ, ಲಾಕ್​ಡೌನ್ ವಿಸ್ತರಣೆ ಮಾಡಿದರೆ, ರಾಜ್ಯ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ವಿರೋಧ ಪಕ್ಷಗಳು ಸೇರಿದಂತೆ ಪಕ್ಷದ ಹಲವು ಸಚಿವರು ಒತ್ತಾಯ ಮಾಡಿದ್ದಾರೆ. ಹೀಗಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್​ಡೌನ್ ವಿಸ್ತರಣೆ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

    Published by:HR Ramesh
    First published: