ನವದೆಹಲಿ: ಭೂಗತ ಲೋಕದ ದೊರೆ ರಾಜೇಂದ್ರ ನಿಕಾಲ್ಜೆ ಅಲಿಯಾಸ್ ಛೋಟಾ ರಾಜನ್ ಕೋವಿಡ್ -19ನಿಂದ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಯಲ್ಲಿ ಇಂದು (ಮೇ 7) ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ. 62 ವರ್ಷದ ಛೋಟಾ ರಾಜನ್ ಅವರು ಏಪ್ರಿಲ್ 26ರಂದು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್-19 ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು.
ಛೋಟಾ ರಾಜನ್ಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಹಾರ್ ಜೈಲಿನ ಸಹಾಯಕ ಜೈಲರ್ ಸೆಷನ್ಸ್ ಕೋರ್ಟ್ನಲ್ಲಿ ತಿಳಿಸಿದ್ದರು. ಆ ಬಳಿಕ ಏಪ್ರಿಲ್ 26ರಂದು ರಾಜನ್ನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನು ಓದಿ: Oxygen Crisis: ದೆಹಲಿಗೆ ಪ್ರತಿದಿನ 700 ಮೆ.ಟನ್ ಆಕ್ಸಿಜನ್ ಸರಬರಾಜು ಮಾಡಿ; ಕೇಂದ್ರಕ್ಕೆ ಸುಪ್ರೀಂ ತಾಕೀತು!
ಮುಂಬೈನಲ್ಲಿ ಸುಲಿಗೆ ಮತ್ತು ಕೊಲೆಗೆ ಸಂಬಂಧಿಸಿದ ಸುಮಾರು 70 ಕ್ರಿಮಿನಲ್ ಪ್ರಕರಣಗಳನ್ನು ರಾಜನ್ ಎದುರಿಸುತ್ತಿದ್ದಾನೆ. ಅವುಗಳನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ನ್ಯಾಯಾಲಯವನ್ನು ರಚಿಸಲಾಯಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ