ಬೆಂಗಳೂರು; ಇತ್ತೀಚೆಗೆ ಮಾರಕ ಕೊರೋನ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿದೆ. ಅದರಲ್ಲೂ ಮದುವೆ ಸಮಾರಂಭಗಳಲ್ಲೂ ಸೋಂಕು ಹೆಚ್ಚು ಹಬ್ಬಿದೆ. ಹೀಗಾಗಿ ಎರಡು ಜಿಲ್ಲೆಗಳಲ್ಲಿ ಇನ್ನುಮುಂದೆ ಮದುವೆ ಸಮಾರಂಭ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿದೆ.
ಮದುವೆಗೆ ಹೆಚ್ಚು ಜನ ಸೇರುತ್ತಿರುವುದರಿಂದಲೇ ಸೋಂಕು ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಾಗಲಕೋಟೆ ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ಮದುವೆ ಸಮಾರಂಭ ಬಂದ್ ಮಾಡುವಂತೆ ಡಿಸಿಎಂ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ಸೂಚನೆ ನೀಡಿದ್ದಾರೆ.
ಇದನ್ನು ಓದಿ: ಸರ್ಕಾರ ಮನವಿ ಮಾಡಿದರೂ ನಿಲ್ಲದ ಗುಳೆ; ಗಂಟು ಮೂಟೆ ಕಟ್ಟಿಕೊಂಡು ಊರುಗಳತ್ತ ಹೊರಟ ಜನರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ