Rahul Gandhi: ಜನತೆಗೆ ಲಸಿಕೆ ಕೊಡುವಲ್ಲಿ ಮೋದಿ ಸರ್ಕಾರದ ಸೋಲು ಭಾರತ ಮಾತೆಯ ಎದೆಗೆ ಇರಿದಂತೆ: ರಾಹುಲ್ ಗಾಂಧಿ
ಮೋದಿ ಸರ್ಕಾರದ ಈ ಶೂನ್ಯ ವ್ಯಾಕ್ಸೀನ್ ನೀತಿಯು ಭಾರತ ಮಾತೆಯ ಎದೆ ಬಗೆಯುವ ಕೆಲಸದಂತೆ ಭಾಸವಾಗುತ್ತಿದೆ ಎಂದು ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.
ನವ ದೆಹಲಿ (ಮೇ 30); "ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರಂಭಿಸಿದ ಲಸಿಕೆ ಕಾರ್ಯಕ್ರಮ ಇದೀಗ ಸೋಲನುಭವಿಸಿದೆ. 18-44 ವರ್ಷದವರಿಗೆ ಲಸಿಕೆ ನೀಡಲಾಗುತ್ತಿದೆ. ಮೋದಿ ಸರ್ಕಾರದ ಈ ಶೂನ್ಯ ವ್ಯಾಕ್ಸೀನ್ ನೀತಿಯು ಭಾರತ ಮಾತೆಯ ಎದೆ ಬಗೆಯುವ ಕೆಲಸದಂತೆ ಭಾಸವಾಗುತ್ತಿದೆ" ಎಂದು ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಅಸಲಿಗೆ ಕೇಂದ್ರ ಸರ್ಕಾರ ಮೇ.01 ರಿಂದ ದೇಶದಲ್ಲಿರುವ ಎಲ್ಲರಿಗೂ ಅದರಲ್ಲೂ ಮುಖ್ಯವಾಗಿ 18-44 ವಯಸ್ಸಿನವರಿಗೆ ಲಸಿಕೆ ಕಾರ್ಯಕ್ರಮ ಆರಂಭಿಸಿತ್ತು. ಲಸಿಕೆಯಿಂದ ಮಾತ್ರ ಜನರನ್ನು ಕೊರೋನಾದಿಂದ ಕಾಪಾಡಲು ಸಾಧ್ಯ ಎಂದು ಪ್ರಧಾನಿ ಮೋದಿ ಸಹ ಹೇಳಿದ್ದರು. ಆದರೆ, ಈವರೆಗೆ ಈ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಜಾರಿಗೆ ತಂದಿಲ್ಲ. ಹಲವಾರು ರಾಜ್ಯಗಳು ಲಸಿಕೆ ಕೊರತೆ ಅನುಭವಿಸುತ್ತಿವೆ. ಹೀಗಾಗಿಕೊರೊನಾ ನಿರ್ವಹಣೆಯನ್ನು ಕೇಂದ್ರವು ಕಳಪೆಯಾಗಿ ಮಾಡುತ್ತಿರುವ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಇತ್ತೀಚೆಗೆ ಕೇಂದ್ರದ ವಿರುದ್ದ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.
मोदी सरकार की ज़ीरो वैक्सीन नीति भारत माता के सीने में ख़ंजर का काम कर रही है।
ಮತ್ತೊಂದು ಟ್ವೀಟ್ನಲ್ಲಿ ಕೊರೋನಾ ಎರಡನೆ ಅಲೆಯು ಶೇ.90ರಷ್ಟು ಭಾರತೀಯರನ್ನು ಬಡವರನ್ನಾಗಿ ಮಾಡಿದೆ ಎಂಬ ವರದಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಮತ್ತು ಈ ಬಡತನ್ನಕ್ಕೆ "ಮೊದಲ ಕಾರಣ ಒಬ್ಬ ಮನುಷ್ಯ ಮತ್ತು ಆತನ ಅಹಂಕಾರ, ಎರಡನೆ ಕಾರಣ ಒಂದು ವೈರಸ್ ಮತ್ತು ಅದರ ರೂಪಾಂತರ" ಎಂದು ಟ್ಟೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ರಾಹುಲ್ ಗಾಂಧಿ ಹಂಚಿಕೊಂಡ ವರದಿಯು, ಕೊರೋನಾ ಎರಡನೇ ಅಲೆಯು ಭಾರತದ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಹೆಚ್ಚಾಗಿ ಸಂಬಳ ಪಡೆಯುವ ಉದ್ಯೋಗಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ವರದಿಯಾಗಿದೆ. ಇದಲ್ಲದೆ, ಶೇಕಡಾ 97 ರಷ್ಟು ಭಾರತೀಯರು ತಮ್ಮ ಆದಾಯದಲ್ಲೂ ಇಳಿಕೆ ಕಂಡಿದ್ದಾರೆ ಎಂದು ತಿಳಿಸಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ