ಹಾಸನ; ಹಾಸನ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಸಾವು ಸಂಭವಿಸಿದೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕರಾದ ಡಾ. ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಇಂದು ಚನ್ನರಾಯಪಟ್ಟಣದ 65 ವರ್ಷದ ವೃದ್ಧ ಕೊರೋನಾ ಸೋಂಕಿತನಿಂದ ಮೃತಪಟ್ಟಿದ್ದಾರೆ. ಕಳೆದ ರಾತ್ರಿ 12.45ಕ್ಕೆ ಖಾಸಗಿ ಆಸ್ಪತ್ರೆಯಿಂದ ರೆಫರ್ ಅಗಿ ಕೋವಿಡ್ ಆಸ್ಪತ್ರೆಗೆ ಬಂದಿರುತ್ತಾರೆ. ಬೆಳಿಗ್ಗೆ 7.45ಕ್ಕೆ ಸಾವು ಸಂಭವಿಸಿದೆ. ಮೃತರು ಮಧುಮೇಹ ರೋಗದಿಂದ ಬಳಲುತ್ತಿದ್ದ ಕಾರಣ ಸೋಂಕಿತರ ಗಂಟಲ ದ್ರವ ತೆಗೆದು ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಅವರು ತಿಳಿಸಿದರು.
ಇದನ್ನು ಓದಿ: ಸೋಮಶೇಖರ್ ಹೇಳಿದ್ದಕ್ಕೆಲ್ಲಾ ನಾನು ಸ್ಪಷ್ಟೀಕರಣ ಕೊಡಬೇಕಾ?: ಜಗದೀಶ್ ಶೆಟ್ಟರ್ ಆಕ್ರೋಶ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ