• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಕೋವಿಡ್ ಹೆಸರಲ್ಲಿ ಲೂಟಿ ಹೊಡೆಯುತ್ತಿರುವ ರಾಜ್ಯ ಸರ್ಕಾರಕ್ಕೆ ಕೊರೋನಾ ಸೋಂಕು ತಗುಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕೋವಿಡ್ ಹೆಸರಲ್ಲಿ ಲೂಟಿ ಹೊಡೆಯುತ್ತಿರುವ ರಾಜ್ಯ ಸರ್ಕಾರಕ್ಕೆ ಕೊರೋನಾ ಸೋಂಕು ತಗುಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮಾಜಿ ಸಚಿವ ಪ್ರಿಯಾಂಕ್​​​ ಖರ್ಗೆ

ಮಾಜಿ ಸಚಿವ ಪ್ರಿಯಾಂಕ್​​​ ಖರ್ಗೆ

ಕೋವಿಡ್ ವಿಷಯದಲ್ಲಿ ಯಾವುದೇ ಸಚಿವರ ನಡುವೆ ಸಮನ್ವಯತೆ ಇಲ್ಲ. ಬೀದಿ ಬದಿ ವ್ಯಾಪಾರಿಗಳು, ಬಡವರು ಸಂಕಷ್ಟ ಎದುರಿಸಿದ್ದಾರೆ. ಸರಕಾರ ಕೋವಿಡ್ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷವು ದಾಖಲೆ ಸಮೇತ ಸಾಬೀತುಪಡಿಸಿದೆ. ಈ ವಿಷಯವಾಗಿ ಶ್ವೇತ ಪತ್ರ ಹೊರಡಿಸಬೇಕು. ಅದೇ ರೀತಿ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಮಹಾದೇವಪ್ಪ ಆಗ್ರಹಿಸಿದ್ದಾರೆ.

ಮುಂದೆ ಓದಿ ...
  • Share this:

ಯಾದಗಿರಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿವೆ. ಬಡಜನರು ಸಂಕಷ್ಟದಲ್ಲಿದ್ದರೆ. ಆದರೆ ರಾಜ್ಯ ಸರಕಾರ ಮಾತ್ರ ಕೊರೋನಾ ಹೆಸರಿನಲ್ಲಿ ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದು, ಸರಕಾರಕ್ಕೆ ಕೊರೋನಾ ಸೋಂಕು ತಗುಲಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಯಾದಗಿರಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಿಯಾಂಕ್ ಖರ್ಗೆ, ಸರಕಾರ ಹಣ ಕೊಳ್ಳೆ ಹೊಡೆಯುತ್ತಿದೆ. ಸಾರ್ವಜನಿಕರು ಹಾಗೂ ಕೊರೋನಾ ಸೈನಿಕರ ರಕ್ಷಣೆ ಮಾಡುವುದು ಬಿಟ್ಟು ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪ ಮಾಡಿದ್ದಾರೆ.


ಬೆಂಗಳೂರು ಮಹಾನಗರಕ್ಕೆ ಮಾತ್ರ ಸರಕಾರ ಕೋವಿಡ್ ವಿಷಯದಲ್ಲಿ 8 ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಆದರೆ, ಬೆಂಗಳೂರು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿವೆ. ಸರಕಾರ ಎಲ್ಲಾ ಜಿಲ್ಲೆಗೆ ಪ್ರಾಮುಖ್ಯತೆ ನೀಡಬೇಕು. ಅದು ಬಿಟ್ಟು ಬೆಂಗಳೂರಿಗೆ ಮಾತ್ರ ಆದ್ಯತೆ ನೀಡುತ್ತಿದೆ. ಯಾವುದೇ ಸಚಿವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ, ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದಲ್ಲಿ ಕೊರೋನಾ ತಡೆಗೆ ದೇಶದ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಹೇಳಿದ ಹಿನ್ನೆಲೆಯಲ್ಲಿ ಪ್ರತಿಪಕ್ಷವು ಕೂಡ ಎಲ್ಲಾ ರೀತಿಯಿಂದ ಸಹಕಾರ ನೀಡಿದೆ. ಆದರೆ, ಕೊರೋನಾ ಹೆಸರಿನಲ್ಲಿ ಇವರೇ ಲೂಟಿ ಮಾಡುತ್ತಿದ್ದಾರೆ. ಈ ವಿಷಯದಲ್ಲಿ ನಾವು ಸಹಕಾರ ಕೊಟ್ಟು ಸುಮ್ಮನೆ ಇರಲು ಸಾಧ್ಯವಾ ಎಂದು ಪ್ರಶ್ನೆ ಮಾಡಿದರು. ನಾವು ಭ್ರಷ್ಟಾಚಾರಕ್ಕೆ ಸಹಕಾರ ಕೊಡುವುದಿಲ್ಲ ಎಂದು ಟಾಂಗ್ ನೀಡಿದರು.


ಇದನ್ನು ಓದಿ: ಅಡಿಕೆ ಬೆಳೆಗಾರರಿಗೆ ವರದಾನವಾದ ಲಾಕ್​ಡೌನ್; ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಬೆಲೆ


ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಕೋವಿಡ್ ವಿಷಯದಲ್ಲಿ ಯಾವುದೇ ಸಚಿವರ ನಡುವೆ ಸಮನ್ವಯತೆ ಇಲ್ಲ. ಬೀದಿ ಬದಿ ವ್ಯಾಪಾರಿಗಳು, ಬಡವರು ಸಂಕಷ್ಟ ಎದುರಿಸಿದ್ದಾರೆ. ಸರಕಾರ ಕೋವಿಡ್ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷವು ದಾಖಲೆ ಸಮೇತ ಸಾಬೀತುಪಡಿಸಿದೆ. ಈ ವಿಷಯವಾಗಿ ಶ್ವೇತ ಪತ್ರ ಹೊರಡಿಸಬೇಕು. ಅದೇ ರೀತಿ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

Published by:HR Ramesh
First published: