ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ತಾವೆಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಸೌಮ್ಯ ರೆಡ್ಡಿ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತಾ ಹೇಳುತ್ತಿದ್ದಾರೆ. ಅವರಲ್ಲಿಯೇ ಗೊಂದಲಗಳಿವೆ. ಮುಂದಿನ ಮುಖ್ಯಮಂತ್ರಿ ಯಾರೆಂದು ಸೌಮ್ಯ ರೆಡ್ಡಿಯೇ ಭವಿಷ್ಯ ನುಡಿಯಲಿ ಎಂದು ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.
ಧಾರವಾಡದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೌಮ್ಯ ರೆಡ್ಡಿ ಸಿದ್ದರಾಮಯ್ಯರ ಹೆಸರು ಏಕೆ ಹೇಳಲಿಲ್ಲ ಎನ್ನುವ ಬಗ್ಗೆ ಅವರನ್ನೇ ಕೇಳಬೇಕು. ಸಿದ್ದರಾಮಯ್ಯರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬುದನ್ನು ಸೌಮ್ಯ ರೆಡ್ಡಿ ಅವರೇ ಹೇಳಬೇಕು ಎಂದು ಕಾಂಗ್ರೆಸ್ ನಾಯಕರನ್ನು ಕುಟುಕಿದರು.
ಪದವೀಧರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಪಕ್ಷೇತರದ ಅಭ್ಯರ್ಥಿಗೆ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್ - ಜೆಡಿಎಸ್ ಒಡೆದ ಮನೆ. 'ಬಿ' ಫಾರ್ಮ್ ನೀಡಿದ ವ್ಯಕ್ತಿ ಇನ್ನೊಬ್ಬರಿಗೆ ಬೆಂಬಲಿಸುತ್ತಾರೆ ಎಂದರೆ ಪರಿಸ್ಥಿತಿ ಏನಿದೆ ಎಂಬುದನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಸರಳ ದಸರಾದಿಂದ ನಲುಗಿದ ಹೊಟೇಲ್ ಉದ್ಯಮ; ಕೋಟ್ಯಾಂತರ ರೂ ನಷ್ಟ ಎಂದ ಮಾಲೀಕರು
ಶಾಲಾ-ಕಾಲೇಜು ಆರಂಭದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಅಧಿಕೃತ ನಿರ್ಧಾರ ಆಗಿಲ್ಲ. ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿಲ್ಲ. ಯಾವಾಗ ಆರಂಭಿಸಬೇಕು ಎನ್ನುವ ಬಗ್ಗೆ ಆಲೋಚನೆ ನಡೆದಿವೆ ವಿನಃ ಈವರೆಗೂ ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಶಾಲಾ ಕಾಲೇಜು ಒಂದು ವರ್ಷ ತೆರೆಯದಂತೆ ಹೇಳಿಕೆ ವಿಚಾರ, ಒಂದು ವರ್ಷವೇ ಲಿಮಿಟ್ ಏಕೆ? ಒಂದು ತಿಂಗಳು ಅಥವಾ ಎರಡು ತಿಂಗಳು ಬಿಟ್ಟು ನೋಡೋಣ. ಕೊರೋನಾ ನಿಯಂತ್ರಣಕ್ಕೆ ಬಂದರೆ ಶೀಘ್ರವೇ ಆರಂಭಗೊಳ್ಳಲಿವೆ ಎಂದು ಕೈಗಾರಿಕಾ ಸಚಿವರು ಹೇಳಿದರು.
ವರದಿ: ಮಂಜುನಾಥ ಯಡಳ್ಳಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ