• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • Shivamogga Chalo: ಶಿವಮೊಗ್ಗ ಚಲೋ: ಸಿಎಂ ಬಿಎಸ್​ವೈ ತವರು ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಬೃಹತ್​​​ ಪ್ರತಿಭಟನೆ

Shivamogga Chalo: ಶಿವಮೊಗ್ಗ ಚಲೋ: ಸಿಎಂ ಬಿಎಸ್​ವೈ ತವರು ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಬೃಹತ್​​​ ಪ್ರತಿಭಟನೆ

ಕಾಂಗ್ರೆಸ್​ ನಾಯಕರು

ಕಾಂಗ್ರೆಸ್​ ನಾಯಕರು

ಸಿಎಂ ತವರು ಕ್ಷೇತ್ರದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್​ ಹಿರಿಯ ನಾಯಕ ಎಸ್​ ಆರ್​ ಪಾಟೀಲ್​ ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್​ ನಾಯಕರು, ಶಾಸಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಮಾ. 13): ಭದ್ರಾವತಿ ಶಾಸಕ ಬಿಕೆ ಸಂಗಮೇಶ್​ ಮೇಲೆ ದಾಖಲಿಸಿರುವ ಕ್ರಿಮಿನಲ್​ ಪ್ರಕರಣ ಖಂಡಿಸಿ ಕಾಂಗ್ರೆಸ್​ ನಾಯಕರು ಇಂದು ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರ ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಅನೇಕ ಕ್ಷೇತ್ರಗಳಲ್ಲಿನ ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿಜೆಪಿ ಕಿರುಕುಳ ನೀಡುತ್ತಿದೆ. ಭದ್ರಾವತಿ ಶಾಸಕರ ಮೇಲೆ ಕ್ಷುಲಕ ಪ್ರಕರಣ ದಾಖಲಿಸಿ​ ಬಂಧನ ಮಾಡುವ ಪ್ರಯತ್ನ ನಡೆಸಿದ್ದಾರೆ. ಈ ವಿಚಾರ ಕುರಿತು ಸಭಾಧ್ಯಕ್ಷರ ಗಮನ ಸೆಳೆಯಲು ಮುಂದಾದ ಶಾಸಕರನ್ನು ಸದನದಿಂದ ಅಮಾನತು ಮಾಡುವಂತಹ ಕಾರ್ಯ ನಡೆಸಲಾಗಿದೆ. ಈ ಹಿನ್ನಲೆ ರಾಜ್ಯದಲ್ಲಿನ ನಮ್ಮ ಕಾರ್ಯಕರ್ತರಿಗೆ ರಕ್ಷಣೆಕೊಡುವ ನಿಟ್ಟಿನಲ್ಲಿ ಈ ಶಿವಮೊಗ್ಗ ಚಲೋ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.


ಸಿಎಂ ತವರು ಕ್ಷೇತ್ರದಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್​ ಹಿರಿಯ ನಾಯಕ ಎಸ್​ ಆರ್​ ಪಾಟೀಲ್​ ಸೇರಿದಂತೆ ರಾಜ್ಯದ ಎಲ್ಲಾ ಕಾಂಗ್ರೆಸ್​ ನಾಯಕರು, ಶಾಸಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1. 30ಕ್ಕೆ ಈ ಪ್ರತಿಭಟನೆ ನಡೆಯಲಿದ್ದು, ಈಗಾಗಲೇ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್​ ನಡೆಸಲಾಗಿದೆ.



ಈ ಕುರಿತು ಕಳೆದೆರಡು ದಿನಗಳ ಹಿಂದೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​,  ಶಿವಮೊಗ್ಗದ ಏಕೈಕ ಕಾಂಗ್ರೆಸ್​ ಶಾಸಕ ಪಕ್ಷದ ಶಾಸಕ ಬಿಕೆ ಸಂಗಮೇಶ್​ ಮತ್ತು ಅವರ ಕುಟುಂಬ ಸದಸ್ಯರ ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಈ ಮೂಲಕ ಅವರನ್ನು ಬಿಜೆಪಿಗೆ ಸೆಳೆಯಲು ಒತ್ತಡ ಹೇರಿದ್ದರು, ಅವರು ಆಪರೇಷನ್​ ಕಮಕ್ಕೆ ಬಲಿಯಾಗಲಿಲ್ಲ ಎಂದು ಈಗ ಪ್ರಕರಣ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.


ಏನಿದು ಗಲಾಟೆ?
ಭದ್ರಾವತಿಯಲ್ಲಿ ನಡೆದ ಕಬ್ಬಡ್ಡಿ ಪಂದ್ಯಾವಳಿಯ ಅಂತಿಮ ಪಂದ್ಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್​ ಘೋಷಣೆ ಕೂಗಿದ ಹಿನ್ನಲೆ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಬಿಗುವಿನ ವಾತವಾರಣ ನಿರ್ಮಾಣವಾಗಿ ಎರಡು ದಿನಗಳ ಕಾಲ ನಗರದಲ್ಲಿ ನಿಷೇಧಾಜ್ಞೆಯನ್ನು ಪೊಲೀಸರು ಹೇರಿದ್ದರು. ಈ ಘಟನೆ ಬಳಿಕ ಸಂಗಮೇಶ್​ ಮಗ ಸೇರಿದಂತೆ ಏಳು ಜನರ ವಿರುದ್ಧ ಹಾಗೂ ಕಾಂಗ್ರೆಸ್​ನ 20 ಮಂದಿ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಲಾಗಿತ್ತು.


ಇದನ್ನು ಓದಿ: ಕೊರೋನಾ ಸೋಂಕು ಹೆಚ್ಚಳ: ಮತ್ತೆ ಕಠಿಣ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ


ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದನ್ನು ಖಂಡಿಸಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್  ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ನಡೆಸಿದರು. ಇದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಕ್ರೋಶಕ್ಕೂ ಕಾರಣವಾಯಿತು. ಸದನದಲ್ಲಿ ಶರ್ಟ್ ಬಿಚ್ಚಿದ್ದ ಸಂಗಮೇಶ್ ಅವರಿಗೆ ಶಿಕ್ಷೆ ನೀಡಿದ ಸ್ಪೀಕರ್ ಕಾಗೇರಿ ಸಂಗಮೇಶ್ ಅವರನ್ನು ಒಂದು ವಾರ ಸದನದಿಂದ ಅಮಾನತು ಮಾಡಿದರು.


ಈ ಪ್ರಕರಣದಲ್ಲಿ ಈಗಾಗಲೇ ಬಿಕೆ ಸಂಗಮೇಶ್​ ಅವರ ಮಗ ಬಸವೇಶ್​ ಅವರನ್ನು ಮಾರ್ಚ್​ 6ರಂದು ಭದ್ರಾವತಿ ಪೊಲೀಸರು ಚಿತ್ರದುರ್ಗದಲ್ಲಿ ವಶಕ್ಕೆ ಪಡೆದಿದ್ದರು.

First published: