ಸಿನಿಮೀಯ ರೀತಿಯಲ್ಲಿ ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವಿನ ರಕ್ಷಣೆ
ಕಳೆದ ಮೂರು ತಿಂಗಳಲ್ಲಿ ಸುಮಾರು ನಾಲ್ಕೈದು ಜನ ಇದೇ ಭದ್ರಾ ಮೇಲ್ದಂಡೆ ಯೋಜನೆಗೆ ಬಲಿಯಾಗಿದ್ದಾರೆ. ಹಾಗಾಗಿ, ಸ್ಥಳೀಯರು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
news18-kannada Updated:November 16, 2020, 7:54 AM IST

ಭದ್ರಾ ನಾಲೆಯಿಂದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
- News18 Kannada
- Last Updated: November 16, 2020, 7:54 AM IST
ಚಿಕ್ಕಮಗಳೂರು (ನ. 16): ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ. ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯುದ್ಧಕ್ಕೂ ಎಲ್ಲೂ ಸರ್ಕಾರ ಬೇಲಿ ನಿರ್ಮಿಸಿಲ್ಲ. ಆದ್ದರಿಂದ, ಮೇಯುವಾಗ ಆಯ ತಪ್ಪಿ ಬಿದ್ದ ಹಸು ತನ್ನ ಜೀವ ಉಳಿಸಿಕೊಳ್ಳಲು ಹೋರಾಡುತ್ತಿತ್ತು. ವೇಗವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಲೇ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಹಸುವನ್ನು ಕಂಡು ಸ್ಥಳಿಯರು ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳ ಗಮನಕ್ಕೆ ತಂದರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಮವಸ್ತ್ರದಲ್ಲಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ನೀರಿನಲ್ಲಿ ಧುಮುಕಿ ಹಸುವನ್ನು ರಕ್ಷಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ನೀರಿನಲ್ಲಿಯೇ ಹಸುವಿಗೆ ಹಗ್ಗ ಕಟ್ಟಿ ಅದನ್ನು ಕಾಲುವೆಯ ಒಂದು ಬದಿಗೆ ಎಳೆತಂದು, ಸ್ಥಳೀಯರ ಸಹಾಯದಿಂದ ಹಸುವನ್ನು ರಕ್ಷಿಸಿ ಮೇಲೆ ತಂದಿದ್ದಾರೆ. ಇದನ್ನೂ ಓದಿ: ಭಾವಿ ಪತ್ನಿಗೆ ಹಳೆಯ ಲವ್ವರ್ ಹೆಸರು ಟ್ಯಾಟೂ ಹಾಕಿಕೊಳ್ಳುವಾಸೆ; ಸಾಮಾಜಿಕ ಜಾಲತಾಣದಲ್ಲಿ ಬೇಸರ ತೋಡಿಕೊಂಡ ವ್ಯಕ್ತಿ
ಆದರೆ, ಕಳೆದ ಮೂರು ದಿನಗಳ ಹಿಂದೆ ಇದೇ ರೀತಿ ಅಜ್ಜಂಪುರದ ಸಮೀಪ ಇದೇ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಿದ್ದಿದ್ದ ಹಸುವೊಂದನ್ನು ಸ್ಥಳೀಯರು ರಕ್ಷಿಸಲು ಮುಂದಾಗಿದ್ದರು. ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಹಸುವನ್ನು ಜೆಸಿಬಿ ಮೂಲಕವೂ ರಕ್ಷಿಸಲು ಮುಂದಾಗಿದ್ದರು. ಆದರೆ, ಸ್ಥಳೀಯರ ಕೆಲಸ ಫಲ ಕೊಡಲಿಲ್ಲ. ಹಸು ಕೊಚ್ಚಿ ಹೋಗಿ ಸಾವನ್ನಪ್ಪಿತು. ಅಷ್ಟೇ ಅಲ್ಲದೆ, ಕಳೆದ ಎರಡು ದಿನಗಳ ಹಿಂದಷ್ಟೆ ಈಜಲು ಹೋಗಿದ್ದ 22 ವರ್ಷದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ.
ಕಳೆದ ಮೂರು ತಿಂಗಳಲ್ಲಿ ಸುಮಾರು ನಾಲ್ಕೈದು ಜನ ಇದೇ ಭದ್ರಾ ಮೇಲ್ದಂಡೆ ಯೋಜನೆಗೆ ಬಲಿಯಾಗಿದ್ದಾರೆ. ಹಾಗಾಗಿ, ಸ್ಥಳೀಯರು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನೂರಾರು ಕಿ.ಮೀ. ಸಾಗಿದೆ. ಎಲ್ಲೂ ಕೂಡ ನಾಲೆಯ ಎರಡೂ ಬದಿಗೆ ತಂತಿ ಬೇಲೆ ನಿರ್ಮಿಸಿಲ್ಲ. ಇದರಿಂದ ಸಾವು-ನೋವುಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ನಾಲೆಯ ಎರಡು ಬದಿಗೆ ತಂತಿ ಬೇಲಿ ನಿರ್ಮಿಸಿಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಮವಸ್ತ್ರದಲ್ಲಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ನೀರಿನಲ್ಲಿ ಧುಮುಕಿ ಹಸುವನ್ನು ರಕ್ಷಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ನೀರಿನಲ್ಲಿಯೇ ಹಸುವಿಗೆ ಹಗ್ಗ ಕಟ್ಟಿ ಅದನ್ನು ಕಾಲುವೆಯ ಒಂದು ಬದಿಗೆ ಎಳೆತಂದು, ಸ್ಥಳೀಯರ ಸಹಾಯದಿಂದ ಹಸುವನ್ನು ರಕ್ಷಿಸಿ ಮೇಲೆ ತಂದಿದ್ದಾರೆ.
ಆದರೆ, ಕಳೆದ ಮೂರು ದಿನಗಳ ಹಿಂದೆ ಇದೇ ರೀತಿ ಅಜ್ಜಂಪುರದ ಸಮೀಪ ಇದೇ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಿದ್ದಿದ್ದ ಹಸುವೊಂದನ್ನು ಸ್ಥಳೀಯರು ರಕ್ಷಿಸಲು ಮುಂದಾಗಿದ್ದರು. ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಹಸುವನ್ನು ಜೆಸಿಬಿ ಮೂಲಕವೂ ರಕ್ಷಿಸಲು ಮುಂದಾಗಿದ್ದರು. ಆದರೆ, ಸ್ಥಳೀಯರ ಕೆಲಸ ಫಲ ಕೊಡಲಿಲ್ಲ. ಹಸು ಕೊಚ್ಚಿ ಹೋಗಿ ಸಾವನ್ನಪ್ಪಿತು. ಅಷ್ಟೇ ಅಲ್ಲದೆ, ಕಳೆದ ಎರಡು ದಿನಗಳ ಹಿಂದಷ್ಟೆ ಈಜಲು ಹೋಗಿದ್ದ 22 ವರ್ಷದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ.
ಕಳೆದ ಮೂರು ತಿಂಗಳಲ್ಲಿ ಸುಮಾರು ನಾಲ್ಕೈದು ಜನ ಇದೇ ಭದ್ರಾ ಮೇಲ್ದಂಡೆ ಯೋಜನೆಗೆ ಬಲಿಯಾಗಿದ್ದಾರೆ. ಹಾಗಾಗಿ, ಸ್ಥಳೀಯರು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನೂರಾರು ಕಿ.ಮೀ. ಸಾಗಿದೆ. ಎಲ್ಲೂ ಕೂಡ ನಾಲೆಯ ಎರಡೂ ಬದಿಗೆ ತಂತಿ ಬೇಲೆ ನಿರ್ಮಿಸಿಲ್ಲ. ಇದರಿಂದ ಸಾವು-ನೋವುಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ನಾಲೆಯ ಎರಡು ಬದಿಗೆ ತಂತಿ ಬೇಲಿ ನಿರ್ಮಿಸಿಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.