ಗದಗ; SSLC ವಿದ್ಯಾರ್ಥಿಗೆ ಕೊರೋನಾ ಸೋಂಕು, 20 ಜನ ಕ್ವಾರಂಟೈನ್; ನಕಲು ಮಾಡಿದ್ದಕ್ಕೆ 6 ಜನ ಡಿಬಾರ್
SSLC EXAMS: ಈ ಎಲ್ಲಾ ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಪಟ್ಟಣದ ಅಂಧ ಹಾಗೂ ಮೂಖ ವಸತಿ ಶಾಲೆಯ ಮಕ್ಕಳಾಗಿದ್ದು, ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಗದಗ ಜಿಲ್ಲಾ ಡಿಡಿಪಿಐ ಎನ್.ಹೆಚ್. ನಾಗೂರ ಇಂದು ತಿಳಿಸಿದ್ದಾರೆ.
ಗದಗ: ಕೊರೋನಾ ವೈರಸ್ ಭೀತಿ ಹಾಗೂ ಪರ ವಿರೋಧ ಚರ್ಚೆಯ ನಡುವೆಯೂ ರಾಜ್ಯ ಸರ್ಕಾರ SSLC ಪರೀಕ್ಷೆ ನಡೆಸುತ್ತಿದೆ. ಸಾಕಷ್ಟು ಮುಂಜಾಗ್ರತಾ ಕ್ರಮವನ್ನೂ ಜರುಗಿಸಿದೆ. ಆದರೆ, ಎಷ್ಟೇ ಮುಂಜಾಗ್ರತೆ ವಹಿಸಿದರೂ ಸಹ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಓರ್ವ ವಿಶೇಷ ಚೇತನ ವಿದ್ಯಾರ್ಥಿಗೆ ಕೊರೋನಾ ಸೋಂಕು ತಗುಲಿದೆ. ಪರಿಣಾಮ ಕೂಡಲೇ ಈತ ಹಾಗೂ ಈತನ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳನ್ನು ಇದೀಗ ಕ್ವಾರಂಟೈನ್ ಮಾಡಲಾಗಿದ್ದು, ಈ ಮೂಲಕ SSLC ಪರೀಕ್ಷೆ ಬರೆಯಲಿದ್ದ ಎಲ್ಲಾ 20 ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ.
ಈ ಎಲ್ಲಾ ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಪಟ್ಟಣದ ಅಂಧ ಹಾಗೂ ಮೂಖ ವಸತಿ ಶಾಲೆಯ ಮಕ್ಕಳಾಗಿದ್ದು, ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಗದಗ ಜಿಲ್ಲಾ ಡಿಡಿಪಿಐ ಎನ್.ಹೆಚ್. ನಾಗೂರ ಇಂದು ತಿಳಿಸಿದ್ದಾರೆ.
SSLC ಪರೀಕ್ಷೆಗೆ ಕೊರೋನಾ ಮಾಹಾಮಾರಿ ಒಂದೆಡೆ ಭೀತಿಯನ್ನುಂಟು ಮಾಡಿದ್ದರೆ, ಮತ್ತೊಂದೆಡೆ ಎಲ್ಲಾ ವರ್ಷದಂತೆ ಈ ವರ್ಷವೂ ನಕಲು ಮಾಡಲು ಪ್ರಯತ್ನಿಸಿ ಜಿಲ್ಲೆಯಲ್ಲಿ 6 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಗದಗದ ಮುನ್ಸಿಪಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಯತ್ನಿಸಿದ ಮೂವರು ವಿದ್ಯಾರ್ಥಿಗಳು ಹಾಗೂ ಬಾಸೆಲ್ ಮಿಷನ್ ಪರೀಕ್ಷಾ ಕೇಂದ್ರದಲ್ಲೂ ಮೂವರು ವಿದ್ಯಾರ್ಥಿಗಳನ್ನು ಗಣಿತ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದ ಮೇಲೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಡಿಬಾರ್ ಮಾಡಿದ್ದಾರೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ