ಹಾವೇರಿ; ಹಾವೇರಿ ರೈಲು ನಿಲ್ದಾಣಕ್ಕೆ ಮಹಾದೇವಪ್ಪ ಮೈಲಾರ ರೈಲು ನಿಲ್ದಾಣ ಎಂದು ನಾಮಕರಣ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದೇಶ ಹೊರಬಿದ್ದ ಬೆನ್ನಲ್ಲೇ ಹಾವೇರಿ ರೈಲ್ವೆ ಇಲಾಖೆಯ ಸಿಬ್ಬಂದಿ ನಾಮ ಫಲಕ ಅಳವಡಿಸಿದ್ದಾರೆ. ಈ ಹಿಂದೆ ಇದ್ದ ಹಾವೇರಿ ರೈಲು ನಿಲ್ದಾಣ ಎನ್ನುವ ನಾಮ ಫಲಕಕ್ಕೆ ಬಣ್ಣ ಬಳಿದು ಮಹಾದೇವಪ್ಪ ಮೈಲಾರ ರೈಲು ನಿಲ್ದಾಣ ಎಂದು ಕನ್ನಡ, ಇಂಗ್ಲಿಷ್, ಹಾಗೂ ಹಿಂದಿ ಬಾಷೆಯಲ್ಲಿ ಬರೆಯಲಾಗಿದೆ.
ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಅಪ್ರತಿಮ ಹೋರಾಟ ನಡೆಸಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸ್ವಾತಂತ್ರ್ಯ ಸೇನಾನಿ, ಅಪ್ರತಿಮ ದೇಶಭಕ್ತ ಹುತಾತ್ಮ ಮೈಲಾರ ಮಹಾದೇವಪ್ಪ ಅವರು ಜಿಲ್ಲೆಗೆ ನೀಡಿದ ಕೊಡುಗೆ ಅಪಾರ. ಜಿಲ್ಲೆಯ ಜನರ ಹಾಗೂ ಮೈಲಾರ ಕುಟುಂಬದ ಬಹುದಿನದ ಬೇಡಿಕೆಯನ್ನು ಕೇಂದ್ರ ಸರಕಾರದ ರೈಲ್ವೇ ಸಚಿವಾಲಯ ಈಡೇರಿಸುವ ಮೂಲಕ ಜಿಲ್ಲೆಯ ಜನತೆಯ ಬೇಡಿಕೆಯನ್ನು ಈಡೇರಿಸಿದೆ.
ಇದನ್ನು ಓದಿ: ಮಠದ ಆವರಣದಲ್ಲಿ ಗಾಂಜಾ ಗಿಡ ಪತ್ತೆ; ಜಾಗದ ಮಾಲೀಕರ ಪತ್ತೆಗೆ ಮುಂದಾದ ಅಬಕಾರಿ ಇಲಾಖೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ