• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಹಸಿರು ಪಟಾಕಿ ಅಂದ್ರೇನು ಅಂತ ನನಗೆ ಗೊತ್ತಿಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಹೀಗಂದಿದ್ಯಾಕೆ?

ಹಸಿರು ಪಟಾಕಿ ಅಂದ್ರೇನು ಅಂತ ನನಗೆ ಗೊತ್ತಿಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಹೀಗಂದಿದ್ಯಾಕೆ?

ಸಚಿವ ಕೆ.ಸುಧಾಕರ್

ಸಚಿವ ಕೆ.ಸುಧಾಕರ್

ನಿನ್ನೆ ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಆ ಕ್ಷೇತ್ರದ ಗ್ರೌಂಡ್ ರಿಯಾಲಿಟಿ ಅರಿತುಕೊಳ್ಳುವಲ್ಲಿ ಕಾಂಗ್ರೆಸ್ ಫೇಲ್ಯೂರ್ ಆಗಿದೆ ಎಂದು ಟೀಕಿಸಿದ ಸಚಿವ ಡಾ.ಕೆ.ಸುಧಾಕರ್, ಡಿಕೆಶಿ ಹಾಗೂ ಅವರ ತಮ್ಮ ಕಷ್ಟಪಟ್ಟು ಚುನಾವಣೆಯಲ್ಲಿ ಓಡಾಡಿದ್ದಾರೆ. ಅವರಿಬ್ಬರನ್ನೇ ಯಾಕೆ ಹೊಣೆ ಮಾಡ್ತೀರಿ.? ಇಡೀ ಕಾಂಗ್ರೆಸ್ ಪಕ್ಷ ಆರ್ ಆರ್ ನಗರ ಉಪಚುನಾವಣೆಯಲ್ಲಿ ಎಡವಿದೆ ಎಂದು ಸಚಿವರು ಹೇಳಿದರು.

ಮುಂದೆ ಓದಿ ...
  • Share this:

ಮೈಸೂರು; ಹಸಿರು ಪಟಾಕಿ ಅಂದ್ರೇನು ಅಂತ ನನಗೆ ಗೊತ್ತಿಲ್ಲ, ಈ ಬಗ್ಗೆ ನಾನು ತಿಳಿದುಕೊಂಡು ಹೇಳ್ತಿನಿ ಅಂತ ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ದೀಪಾವಳಿ ಹಬ್ಬದಲ್ಲಿ ಪಟಾಕಿ‌ ನಿಷೇಧದ ಬಗ್ಗೆ ನಮ್ಮ ಇಲಾಖೆಯಿಂದ ಮಾರ್ಗಸೂಚಿ ವರದಿ ಬಂದಿತ್ತು. ಅದನ್ನ ಸಿಎಂ ಗಮನಕ್ಕೆ ತಂದು ಸರ್ಕಾರಕ್ಕೆ ಸಲ್ಲಿಸಿದ್ದೆ. ಆ ನಂತರ ಸಿಎಂ ಹಸಿರು ಪಟಾಕಿ ಸಿಡಿಲು ಅನುಮತಿ ನೀಡಿದ್ದಾರೆ. ಸಂಜೆ ಸಮಯಾವಕಾಶವನ್ನು ನಿಗಧಿ ಮಾಡಿದ್ದಾರೆ ಎಂದು ತಿಳಿಸಿದರು. ಪತ್ರಕರ್ತರು ಹಸಿರು ಪಟಾಕಿ ಅಂದ್ರೆ ಏನು ಸರ್ ಎಂದು ಪ್ರಶ್ನಿಸಿದಾಗ ?  ಹಸಿರು ಪಟಾಕಿ ಅಂದ್ರೇನು ಅಂತ ನನಗೂ ಗೊತ್ತಿಲ್ಲ ಈ ಬಗ್ಗೆ ನಾನು ತಿಳಿದುಕೊಂಡು ಹೇಳುತ್ತೇನೆ ಅಂತ ತಮಾಷೆಯಾಗಿ ಉತ್ತರಿಸಿ, ಪಟಾಕಿ ಗೊಂದಲಕ್ಕೆ ತುಪ್ಪ ಸುರಿದ ಸಚಿವ ಡಾ.ಸುಧಾಕರ್ ನಗುತ್ತಲೇ ಅಲ್ಲಿಂದ  ತೆರಳಿದರು.


ಇನ್ನು ಚುನಾವಣೆ ಸಮಾವೇಶಗಳಲ್ಲಿ ಮಾಸ್ಕ್ ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್ ಈ ವಿಚಾರದಲ್ಲಿ I am also helpless ಎಂದು ಅಸಹಾಯಕತೆ ಪ್ರದರ್ಶನ ಮಾಡಿದರು. ಕೊರೋನಾ ಬಗ್ಗೆ ಈಗಾಗಲೇ ಮಾರ್ಗಸೂಚಿ ಇದೆ. ನಾನು ಕೂಡ ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಎಲ್ಲರಿಗೂ ಹೇಳುತ್ತಿದ್ದೇನೆ. ಇದು ನಮಗೂ ಅನ್ವಯ ಆಗುತ್ತದೆ. ರಾಜಕೀಯ ಪಕ್ಷಗಳ ಸಮಾವೇಶಗಳ ವಿಚಾರದಲ್ಲೂ ಸರ್ಕಾರಕ್ಕೆ ಸೂಚನೆ ಕೊಟ್ಟಿದ್ದೇ. ಆದರೆ ಇದು ಪಾಲನೆ ಆಗಿಲ್ಲ ಅನ್ನೋದು ನನಗಿರುವ ಬೇಸರ. ಈ ವಿಚಾರದಲ್ಲಿ ರಾಜಕೀಯ ಪಕ್ಷಗಳು ಹಾಗೂ ನಾಯಕರಿಗೆ ಸಾಮೂಹಿಕ ಜವಾಬ್ದಾರಿ ಇರಬೇಕು. ಆದರೆ ಎಲ್ಲರು ಅದನ್ನು ಮರೆತಿರುವುದು ದುರದೃಷ್ಟಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಸಾರ್ವಜನಿಕರಿಗೆ ಮಾತ್ರ ದಂಡ ಹಾಕುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು,  ದಂಡ ಎಲ್ಲರಿಗು ಅನ್ವಯ ಆಗುತ್ತೆ, ಎಲ್ಲಿರಿಗೂ ದಂಡ ಹಾಕಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದರು.


ಇದನ್ನು ಓದಿ: ವೈದ್ಯರು ಹಳ್ಳಿಗಳಲ್ಲಿ ಸೇವೆ ಮಾಡಿ, ಗ್ರಾಮೀಣ ಸೇವೆ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿರುವ ವೈದ್ಯರು ಪ್ರಕರಣ ಹಿಂಪಡೆಯಲಿ; ಸಚಿವ ಸುಧಾಕರ್ ಮನವಿ


ನಿನ್ನೆ ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಆ ಕ್ಷೇತ್ರದ ಗ್ರೌಂಡ್ ರಿಯಾಲಿಟಿ ಅರಿತುಕೊಳ್ಳುವಲ್ಲಿ ಕಾಂಗ್ರೆಸ್ ಫೇಲ್ಯೂರ್ ಆಗಿದೆ ಎಂದು ಟೀಕಿಸಿದ ಸಚಿವ ಡಾ.ಕೆ.ಸುಧಾಕರ್, ಡಿಕೆಶಿ ಹಾಗೂ ಅವರ ತಮ್ಮ ಕಷ್ಟಪಟ್ಟು ಚುನಾವಣೆಯಲ್ಲಿ ಓಡಾಡಿದ್ದಾರೆ. ಅವರಿಬ್ಬರನ್ನೇ ಯಾಕೆ ಹೊಣೆ ಮಾಡ್ತೀರಿ.? ಇಡೀ ಕಾಂಗ್ರೆಸ್ ಪಕ್ಷ ಆರ್ ಆರ್ ನಗರ ಉಪಚುನಾವಣೆಯಲ್ಲಿ ಎಡವಿದೆ. ಆರ್ ಆರ್ ನಗರದಲ್ಲಿ 50 ಸಾವಿರ ಲೀಡ್ ನಲ್ಲಿ ಗೆಲ್ತಿವಿ ಅಂತ ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿಯ ಫಲಿತಾಂಶ ಬಂದಿದೆ ಎಂದರು.


ಸಂಪುಟ ಪುನಾರಚನೆ ಉಸಾಬರಿ ನಮಗ್ಯಾಕೆ ? ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಏನು ಮಾಡಬೇಕೆಂಬುದು ಸಿಎಂ ಪರಮಾಧಿಕಾರ. ಆ ವಿಚಾರದಲ್ಲಿ ನಾವು ನೀವು ಮಾತನಾಡೋದು ಏನಿದೆ‌? ಮುಖ್ಯಮಂತ್ರಿಗಳು ಈಗಾಗಲೇ ಪುನಾರಚನೆ ಮಾಡ್ತೀನಿ ಅಂತ ಹೇಳಿದ್ದಾರೆ.  ದೆಹಲಿಗೆ ತೆರಳುವ ವಿಚಾರವನ್ನೂ ಬಹಿರಂಗಪಡಿಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ಸಿಗುವ ವಿಚಾರಕ್ಕೆ ಹಾರಿಕೆಯ ಉತ್ತರ ನೀಡಿದರು.

Published by:HR Ramesh
First published: