ಮೈಸೂರು (ಮಾ.9): ಮಂಡ್ಯದಲ್ಲಿ(Mandya) ಕೆಲಸಕ್ಕಿಂತ ಕ್ರೆಡಿಟ್ಗೆ (Credit) ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಯಾರೋ ಮಾಡಿದ ಕೆಲಸಕ್ಕೆ ಯಾರೋ ಕ್ರೆಡಿಟ್ ತೆಗೆದುಕೊಳ್ತಿದ್ದಾರೆ ಅಂತ ಸಂಸದೆ ಸುಮಲತಾ (Sumalatha) ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ (Press meet) ನಡೆಸಿ ಮಾತಾಡಿದ ಸುಮಲತಾ, ನನ್ನ ಕ್ಷೇತ್ರ (Constituency) ಮಂಡ್ಯದಲ್ಲಿ ನಾನು ಕೆಲಸ ಮಾಡ್ತಿದ್ದೇನೆ ನನ್ನ ಕೆಲಸಕ್ಕೆ ಬೇರೆಯವರು ಕ್ರೆಡಿಟ್ ತೆಗೆದುಕೊಳ್ಳಲು ಬರ್ತಿದ್ದಾರೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದು ಕೋಪದಲ್ಲೇ ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ಇನ್ನು ಕೆಲವರು ನನ್ನ ಕೆಲಸಗಳ ನಡುವೆ ಮೂಗು ತೂರಿಸ್ತಿದ್ದಾರೆ. ಮಂಡ್ಯ ಜನರ ದಾರಿ ತಪ್ಪಿಸಲು ಹೊರಟಿದ್ದಾರೆ. ಇದನ್ನು ನಾನು ಸಹಿಸುವುದಿಲ್ಲ ಅಂತ ಸಂಸದೆ ಸುಮಲತಾ ಕಿಡಿಕಾರಿದ್ರು.
‘ಕ್ರೆಡಿಟ್ ಪಡೆಯಲು ನಾನು ಕೆಲಸ ಮಾಡ್ತಿಲ್ಲ’
ಮಂಡ್ಯ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಮಾಡಲ್ಲ. ನಿಜ ಹೇಳಲು ಭಯ ಏಕೆ ?. ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರು ಜವಾಬ್ದಾರಿ ಅರಿಯಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ತಮ್ಮ ವಿರೋಧಿಗಳಿಗೆ ಸುಮಲತಾ ಟಾಂಗ್ ಕೊಟ್ಟರು.
‘ಜನರ ಬಳಿ ಹೋದ್ರೆ ನಿಜ ಗೊತ್ತಾಗುತ್ತೆ’
ಮೈಸೂರು-ಬೆಂಗಳೂರು ಹೆದ್ದಾರಿ ಒಳ್ಳೆಯ ಪ್ರಾಜೆಕ್ಟ್. ಆದರೆ ಮಂಡ್ಯ ಜನರಿಗೆ ತೊಂದರೆ ಕೊಟ್ಟರೆ ನಾನು ಸುಮ್ಮನಿರಲ್ಲ. ಮಾಧ್ಯಮಗಳಲ್ಲಿ ದಿನ ನಿತ್ಯ ಏನು ಬೇಕಾದ್ರೂ ಹೇಳಬಹುದು. ಆದರೆ ಜನರ ಬಳಿ ಹೋದರೆ ನಿಜವಾದ ಸಮಸ್ಯೆ ಗೊತ್ತಾಗುತ್ತೆ. ಶಿಂಷಾ ನದಿ ಬಳಿ ಹೆದ್ದಾರಿ ಸೇತುವೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: GST ವಿಚಾರದಲ್ಲಿ ಯಾಮಾರಿದ್ದೇವೆ; ಈಗ ಭಿಕ್ಷೆಪಾತ್ರೆ ಹಿಡಿದು ನಿಲ್ಲುವ ಸ್ಥಿತಿ ಬಂದಿದೆ: HD Kumarswamy
ವಿರೋಧಿಗಳಿಗೆ ಟಾಂಗ್ ಕೊಟ್ಟ ಸಂಸದೆ
ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡೆ ಇಲ್ಲ ಅಂತ ಹೇಳಿದರೆ ನಾನು ಸುಮ್ಮನಿರಲ್ಲ ಎಂದು ಸಂಸದ ಪ್ರತಾಪ್ ಸಿಂಹಗೆ ಪರೋಕ್ಷ ಟಾಂಗ್ ಕೊಟ್ಟರು.
‘ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ’
ನನ್ನ ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರೂ ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಅನ್ನೋ ಭಯ ಎಂದು ಸುಮಲತಾ ನುಡಿದರು.
‘ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ‘
ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿದೆ. ಅಲ್ಲಿಂದ ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಟ್ರಿಮೆಂಡಸ್ ಜಾಬ್ ಎಂದು ಕೇಂದ್ರ ಸರ್ಕಾರದ ಬಗ್ಗೆ ಗುಣಗಾನ ಮಾಡಿದರು.
ಇದನ್ನೂ ಓದಿ: ತಪ್ಪಿದ ಮಹಾ ದುರಂತ: ರೈಲು ಹಳಿ ಮೇಲೆ ನೂರಾರು ಜನರು; ನೋಡ ನೋಡುತ್ತಿದ್ದಂತೆ ಬಂದ Shatabdi Express
ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೂ ಒತ್ತಡದ ನಡುವೆಯೂ ಈ ವರ್ಷ ಒಂದು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಚಿತ್ರರಂಗ ನನ್ನ ಕುಟುಂಬ ಇದ್ದಂತೆ. ಚಿತ್ರರಂಗ ನನಗೆ ಎಲ್ಲವನ್ನೂ ನೀಡಿದೆ. ಅಲ್ಲಿ ಉತ್ತಮ ನೆನಪುಗಳಿವೆ, ಯಾವತ್ತೂ ಅದನ್ನು ಮರೆಯುವುದಿಲ್ಲ ಎಂದು ಸುಮಲತಾ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ