ಶಿವಮೊಗ್ಗ (ಡಿಸೆಂಬರ್.11) : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹೀಗಾಗಿ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಶಿವಮೊಗ್ಗ ವಿಭಾಗದಲ್ಲಿ 320 ಬಸ್ ಗಳು ಇದ್ದು, ಅದರಲ್ಲಿ ಇಂದು 60 ಬಸ್ ಗಳು ಬೆಳಗ್ಗೆ ನಿಲ್ದಾಣದಿಂದ ಹೊರಟಿವೆ. ಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿಗಳನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬ ಒತ್ತಾಯ ಜೋರಾಗುತ್ತಿದೆ. ಇಂದಿನಿಂದ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ನ ಸಿಬ್ಬಂದಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹೀಗಾಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದ 9-30 ರವರೆಗೆ ಬಸ್ ಗಳು ಎಂದಿನಂತೆ ಸಂಚಾರ ಮಾಡಿದವು. ಅದರೆ ಬೆಳಗ್ಗೆ 10 ಗಂಟೆಯ ನಂತರ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಯಿತು.
320 ಬಸ್ ಗಳಿಂದ 500 ಟ್ರಿಪ್ ಗಳು ನಡೆಯುತ್ತದೆ. ಶಿವಮೊಗ್ಗ ಕೆಎಸ್ ಆರ್ ಟಿಸಿ ವಿಭಾಗದಲ್ಲಿ 1,600 ಜನ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ.ಇನ್ನು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣಕ್ಕೆ ಪ್ರತಿ ನಿತ್ಯ 1,300 ಬಸ್ ಗಳು ಬಂದು ಹೋಗುತ್ತವೆ. ಅದರೆ ಇಂದು ಬಹುತೇಕ ಬಸ್ ಗಳು ಶಿವಮೊಗ್ಗ ನಿಲ್ದಾಣಕ್ಕೆ ಬಂದಿಲ್ಲ. ಅದರಲ್ಲೂ ಬೆಂಗಳೂರಿನಿಂದ ಬರುವಂತ ಮತ್ತು ಬೆಂಗಳೂರಿಗೆ ತೆರಳುವಂತ ಬಸ್ ಗಳು ಬಹುತೇಕ ಸ್ಥಗಿತವಾಗಿವೆ.
ಇನ್ನು ಶಿವಮೊಗ್ಗ ಭದ್ರಾವತಿ ನಡುವೆ ಸಂಚಾರ ನಡೆಸುತ್ತಿದ್ದ ಕೆಎಸ್ ಆರ್ ಟಿಸಿ ಸಿಟಿ ಬಸ್ ಗೆ ಬಸ್ ವೊಂದಕ್ಕೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಶಿವಮೊಗ್ಗ ಸಮೀಪದ ಮಾಚೇನಹಳ್ಳಿ ಬಳಿ ಚಲಿಸುತ್ತಿದ್ದ ಬಸ್ ಗೆ ಕಲ್ಲು ತೂರಿದ ಘಟನೆ ನಡೆದಿದೆ.
ಇದನ್ನೂ ಓದಿ : ಈಶ್ವರಪ್ಪನವರೇ ಎಷ್ಟು ಜನ ಕುರುಬರಿಗೆ ಎಂಎಲ್ಎ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೀರಿ?: ಬೈರತಿ ಸುರೇಶ್ ಪ್ರಶ್ನೆ
ಬಸ್ ನ ಕಿಟಕಿಯ ಗಾಜಿಗೆ ಕಲ್ಲು ಬಿದ್ದ ಪರಿಣಾಮ ಗಾಜು ಪುಡಿಯಾಗಿದೆ. ಕೆಎ 17 ಎಫ್ 1865 ನಂಬರ್ ಕೆಎಸ್ ಆರ್ ಟಿಸಿ ಬಸ್ ಗೆ ಕಲ್ಲು ಹೊಡೆಯಲಾಗಿದೆ. ನಂತರ ಬಸ್ ಅನ್ನು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣಕ್ಕೆ ತಂದು ನಿಲ್ಲಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ