• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಜಮೀರ್ ಅಹಮದ್ ತಾನು ಏನೆಂದು ಅವರೇ ಯೋಚಿಸಿಕೊಳ್ಳಲಿ : ಸಚಿವ ಸಿ.ಟಿ. ರವಿ ತಿರುಗೇಟು

ಜಮೀರ್ ಅಹಮದ್ ತಾನು ಏನೆಂದು ಅವರೇ ಯೋಚಿಸಿಕೊಳ್ಳಲಿ : ಸಚಿವ ಸಿ.ಟಿ. ರವಿ ತಿರುಗೇಟು

ಸಚಿವ ಸಿ.ಟಿ. ರವಿ

ಸಚಿವ ಸಿ.ಟಿ. ರವಿ

ರಾಜಕಾರಣಿಗಳ ಮಕ್ಕಳೇ ಇರಲೀ, ರಾಜಕಾರಣಿಗಳೇ ಇರಲಿ, ಯಾರೇ ಇರಲಿ ಡ್ರಗ್ಸ್​ ಕೇಸಲ್ಲಿ ಶಿಕ್ಷೆಯಾಗಲಿ. ನಮಗೂ ಮಾಧ್ಯಮಗಳಿಂದ ತಿಳಿಯುತ್ತಿದೆ. ಯಾರೇ ಇದ್ದರೂ ತನಿಖೆ ಆಗಲಿ. ಡ್ರಗ್ಸ್ ಮಟ್ಟ ಹಾಕೋಕೆ ನಮ್ಮ ಅವಧಿಯಲ್ಲೂ ಪ್ರಯತ್ನ ಮಾಡಿದ್ದೆವು. ಈಗ ಹೆಚ್ಚಾಗಿ ಬಯಲಿಗೆ ಬರ್ತಿದೆ. ಎನ್​​ಸಿಬಿ ಈಗ ಎಲ್ಲವನ್ನೂ ಪತ್ತೆ ಹಚ್ಚುತ್ತಿದೆ. ನಾರ್ಕೋಟಿಕ್ ಆ್ಯಕ್ಟ್ ಇದೆ, ಅದರ ಪ್ರಕಾರ ಕ್ರಮ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಮುಂದೆ ಓದಿ ...
  • Share this:

ಚಿಕ್ಕಮಗಳೂರು : ಡ್ರಗ್ಸ್ ಕೇಸಲ್ಲಿ ಜಮೀರ್ ಅಹಮದ್ ಅವರ ಪಾತ್ರ ಎಷ್ಟಿದೆ? ಏನು ಅನ್ನೋದು ತನಿಖೆಯ ಬಳಿಕ ಗೊತ್ತಾಗಬೇಕು. ಆದರೆ, ಕೆಜೆ ಹಳ್ಳಿ-ಡಿಜೆ ಹಳ್ಳಿ ಪ್ರಕರಣದಲ್ಲಿ ಅಪರಾಧಿಗಳ ಪರ ಅವರು ನಿಂತ ನಿಲುವು ಸಮಾಜಘಾತುಕ ಶಕ್ತಿಗಳಿಗೆ ಬೆಂಬಲ ಕೊಡುವಂತಹಾ ಮನಸ್ಥಿತಿ ತೋರಿಸುತ್ತೆ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ಜಮೀರ್ ವಿರುದ್ಧ ಕಿಡಿ ಕಾರಿದ್ದಾರೆ.  ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ಕುರಿತಂತೆ ಸ್ಥಳಿಯರೊಂದಿಗಿನ ಸಭೆಯ ಬಳಿಕ ಮಾತನಾಡಿದ ಅವರು, "ಅವರದ್ದು ಅಪರಾಧಿಗಳ ಪರವಾಗಿ ನಿಲ್ಲುವಂತಹಾ ಮನೋಭಾವನೆ. ಜೊತೆಗೆ, ಅವರದ್ದೇ ಕ್ಷೇತ್ರವಾದ ಪಾದರಾಯನಪುರದಲ್ಲಿ ಅವರ ಬೆಂಬಲಿಗರು ಕೊರೋನ ವಾರಿಯರ್ಸ್‍ಗಳ ಹಲ್ಲೆ ನಡೆಸಿದ್ದರು.


ಆಗ ಅವರು ಅವರ ಪರವಾಗಿ ನಿಂತು ಅವರನ್ನ ಸನ್ಮಾನಿಸೋ ಕೆಲಸ ಮಾಡಿದ್ದೆಲ್ಲಾ ಸ್ವಲ್ಪ ಗಂಭೀರವಾಗಿ ತೆಗೆದುಕೊಳ್ಳಬೇಕಾದ ವಿಷಯ. ಸಾರ್ವಜನಿಕ ಬದುಕಿನಲ್ಲಿ ಇರುವಂತವರು ಸೌಹಾರ್ದತೆಗೆ ಒತ್ತು ಕೊಡಬೇಕೇ ವಿನಃ, ಡಿಸ್ಟ್ರೆಕ್ಟೀವ್ ಮೆಂಟಾಲಿಟಿಗೆ ಒತ್ತು ಕೊಡುವಂತದ್ದು ಶ್ರೇಯಸ್ಸಲ್ಲ. ಅದು ತಾತ್ಕಾಲಿಕವಾಗಿ ಲಾಭ ತಂದುಕೊಡಬಹುದು. ಆದರೆ, ಖಳನಾಯಕನಾಗಿ ಉಳಿಯೋದಕ್ಕೆ ಬೆಳೆಯೋದಕ್ಕೆ ಕಾರಣವಾಗುತ್ತೆ. ಜಮೀರ್ ಏನು ಅನ್ನೋದನ್ನ ಅವರೇ ಯೋಚಿಸಬೇಕು" ಎಂದು ಜಮೀರ್ ವಿರುದ್ಧ ಸಿ.ಟಿ.ರವಿ ಅಸಮಾಧಾನ ಹೊರಹಾಕಿದ್ದಾರೆ.


ಇದೇ ವಿಚಾರವಾಗಿ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, "ಡ್ರಗ್ಸ್​​ ಮಾಫಿಯಾ ಬಗ್ಗೆ ಅಧಿವೇಶನದಲ್ಲಿ ಮಾತಾಡುತ್ತೇನೆ. ಡ್ರಗ್ಸ್ ನಮ್ಮ ಕಾಲದಲ್ಲೂ ಇತ್ತು. ಅವರ ಕಾಲದಲ್ಲೂ ಇತ್ತು, ಎಲ್ಲರ ಕಾಲದಲ್ಲೂ ಡ್ರಗ್ಸ್ ಇತ್ತು. ನಾವೂ ಕೂಡ ಅದನ್ನು ಮಟ್ಟಹಾಕಲು ಯತ್ನಿಸಿದ್ದೆವು. ಈಗ ಅವರ ಕಾಲದಲ್ಲಿ ಇದು ಬಯಲಿಗೆ ಬಂದಿದೆ. ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆ ಆಗಬೇಕು. ರಾಗಿಣಿಗೂ ಬಿಜೆಪಿಗೂ ಸಂಬಂಧ ಇಲ್ಲ ಅಂತಾರೆ. ಆದರೆ, ಆಕೆ ಬಿಜೆಪಿ ಪರ ಪ್ರಚಾರ ಮಾಡಿರೋದಕ್ಕೆ ಸಾಕ್ಷಿ ಇದೆ. ಫೋಟೋಗಳು, ವೀಡಿಯೋಗಳು ಇವೆ" ಎಂದು ಬಿಜೆಪಿ ವಿರುದ್ಧವೇ ಸಿದ್ದರಾಮಯ್ಯ ಆರೋಪಿಸಿದರು.


ಇದನ್ನೂ ಓದಿ : Drug Mafia: ‘ರಾಗಿಣಿ, ಜಮೀರ್​​ ಯಾರೇ ಆಗಲೀ ಡ್ರಗ್ಸ್ ಕೇಸಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ‘ - ಸಿದ್ದರಾಮಯ್ಯ ಆಗ್ರಹ


ರಾಜಕಾರಣಿಗಳ ಮಕ್ಕಳೇ ಇರಲೀ, ರಾಜಕಾರಣಿಗಳೇ ಇರಲಿ, ಯಾರೇ ಇರಲಿ ಡ್ರಗ್ಸ್​ ಕೇಸಲ್ಲಿ ಶಿಕ್ಷೆಯಾಗಲಿ. ನಮಗೂ ಮಾಧ್ಯಮಗಳಿಂದ ತಿಳಿಯುತ್ತಿದೆ. ಯಾರೇ ಇದ್ದರೂ ತನಿಖೆ ಆಗಲಿ. ಡ್ರಗ್ಸ್ ಮಟ್ಟ ಹಾಕೋಕೆ ನಮ್ಮ ಅವಧಿಯಲ್ಲೂ ಪ್ರಯತ್ನ ಮಾಡಿದ್ದೆವು. ಈಗ ಹೆಚ್ಚಾಗಿ ಬಯಲಿಗೆ ಬರ್ತಿದೆ. ಎನ್​​ಸಿಬಿ ಈಗ ಎಲ್ಲವನ್ನೂ ಪತ್ತೆ ಹಚ್ಚುತ್ತಿದೆ. ನಾರ್ಕೋಟಿಕ್ ಆ್ಯಕ್ಟ್ ಇದೆ, ಅದರ ಪ್ರಕಾರ ಕ್ರಮ ತೆಗೆದುಕೊಳ್ಳಲಿ.


ಪ್ರತಿಯೊಬ್ಬ ಶಾಸಕರು ಅಧಿವೇಶನದಲ್ಲಿ ಭಾಗವಹಿಸಲು ತಿಳಿಸಿದ್ದೇನೆ. ಒಟ್ಟು 1200 ಪ್ರಶ್ನೆಗಳನ್ನು ಸಿದ್ದಪಡಿಸಿದ್ದೇವೆ. ಇದೇ 16 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ಇವತ್ತು ಸಭೆಯ ಬಗ್ಗೆ ನಾನು‌ ಮಾತನಾಡಲ್ಲ. ಅವತ್ತು ಸದನದಲ್ಲಿ ಯಾರು ಏನು ಮಾತನಾಡಬೇಕು ಅದನ್ನ ಚರ್ಚೆ ಮಾಡ್ತೇವೆ. ಡ್ರಗ್ಸ್ ವಿಚಾರವನ್ನೂ ಅವತ್ತೇ ಚರ್ಚೆ ಮಾಡ್ತೇವೆ. ಮೆಡಿಕಲ್ ಕಿಟ್ ಖರೀದಿ‌ ಹಗರಣ ಇರಬಹುದು, ಸರ್ಕಾರ ತಂದಿರುವ ಕಾಯ್ದೆಗಳಿರಬಹುದು, ಕೊರೋನಾ ಭ್ರಷ್ಟಾಚಾರವಿರಬಹುದು, ಸದನದಲ್ಲಿ ಎಲ್ಲವನ್ನೂ ಪ್ರಸ್ತಾಪ ಮಾಡ್ತೇವೆ" ಎಂದು ತಿಳಿಸಿದ್ಧಾರೆ.

Published by:MAshok Kumar
First published: