ಚಿತ್ರದುರ್ಗ: ಕಾಂಗ್ರೆಸ್ನವರು ಪಕ್ಕದ ಮನೆಗೆ ಬೆಂಕಿ ಬಿದ್ದರೆ ಚಳಿ ಕಾಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ನನಗೆ ಗೊತ್ತಿರೋ ಪ್ರಕಾರ ಕೊರೋನಾ ತಡೆಯೋಕೆ ಲಾಕ್ ಡೌನ್ ಒಂದೇ ಪರಿಹಾರ ಆಗಿದೆ. ರಾಜ್ಯದಲ್ಲಿ ಲಾಕ್ ಡೌನ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ಎಕ್ಸ್ಫರ್ಟ್ಗಳ ಜೊತೆ ಸಭೆ ಮಾಡಿ ಸಲಹೆ ಪಡೆದು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಚಿತ್ರದುರ್ಗದಲ್ಲಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕೊರೋನಾ ಸೋಂಕಿನ ಸ್ಥಿತಿಗತಿ ಆಸ್ಪತ್ರೆಗಳ ವ್ಯವಸ್ಥೆ ಕುರಿತು ಪರಿಶೀಲಿಸಲು ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಭೆ ನಡಸಿದ ಸಚಿವ ಬಿ. ಶ್ರಿರಾಮುಲು ಮಾಧ್ಯಮಗಳ ಜೊತೆ ಮಾತನಾಡಿ ಕೊರೋನಾದಿಂದ ಸಂಕಷ್ಟದಲ್ಲಿರುವಂತದ್ದು ನೋವಿನ ಸಂಗತಿ. ಹೀಗಿರುವಾಗ ರಾಜಕಾರಣ ಮಾಡುವುದು ಬೇಡ, ಕಾಂಗ್ರೇಸ್ನವರು ಪಕ್ಕದ ಮನೆಗೆ ಬೆಂಕಿ ಬಿದ್ದರೆ ಚಳಿ ಕಾಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಮನೆಗೆ ಬೆಂಕಿ ಬಿದ್ದರೂ ಆರಿಸುವ ಕೆಲಸ ಮಾಡಬೇಕೇ ವಿನಃ ಪಕ್ಕದ ಮನೆಗೆ ಬಿದ್ದ ಬೆಂಕಿಯಿಂದ ಚಳಿ ಕಾಯಿಸಿಕೊಳ್ಳುವ ಕೆಲಸ ಆಗಬಾರದು. ದೇಶ, ರಾಜ್ಯ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರು ಸಲಹೆ ಕೊಡಬೇಕು, ಅದನ್ನ ಬಿಟ್ಟು ಪ್ರತಿಭಟನೆ ಮಾಡುತ್ತಾ ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಮಾಡುತ್ತಿರುವ ಕಾಂಗ್ರೇಸ್ ನಾಯಕರ ನಡೆ ಸರಿ ಅಲ್ಲ ಎಂದು ವಿರೋಧ ಪಕ್ಷದ ನಾಯಕರ ವಿರುದ್ದ ಕಿಡಿ ಕಾರಿದ್ದಾರೆ.
ಇನ್ನೂ ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯೋಕೆ ಲಾಕ್ ಡೌನ್ ಮಾಡಿದ್ದರಿಂದ ಈಗ ಕಂಟ್ರೋಲ್ ಗೆ ಬರುತ್ತಿದೆ. ಲಾಕ್ ಡೌನ್ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಯುತ್ತದೆ. ಅದರಲ್ಲಿ ಪರಿಣಿತರ ಅಭಿಪ್ರಾಯ ಪಡೆದು ಲಾಕ್ ಡೌನ್ ಮುಂದುವರೆಸುವುದೋ ಬೇಡವೋ ಅನ್ನೋ ನಿರ್ಧಾರವನ್ನ ಸಿಎಂ ಮಾಡುತ್ತಾರೆ. ನನಗೆ ಗೊತ್ತಿರೋ ಪ್ರಕಾರ ಕೊರೋನಾ ತಡೆಯೋಕೆ ಲಾಕ್ ಡೌನ್ ಒಂದೇ ಪರಿಹಾರ ಆಗಿದೆ. ಈ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಲಾಕ್ ಡೌನ್ ಆಗಿದ್ದರಿಂದ ಸೋಂಕು ಕಡಿಮೆ ಆಗುತ್ತಿದ್ದು, ಸಾವುಗಳು ಕೂಡಾ ಕಡಿಮೆ ಆಗುತ್ತಿವೆ ಅನ್ನೊ ಮಾಹಿತಿ ಇದೆ ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ