• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಹಾಸನಾಂಬೆ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ, ಉಸ್ತುವಾರಿ ಸಚಿವ ಗೋಪಾಲಯ್ಯ

ಹಾಸನಾಂಬೆ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ, ಉಸ್ತುವಾರಿ ಸಚಿವ ಗೋಪಾಲಯ್ಯ

ಹಾಸನಾಂಬ ದೇವಿಯ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ.

ಹಾಸನಾಂಬ ದೇವಿಯ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ.

​ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿ, ಭಕ್ತರಿಗೆ ಹಾಸನಾಂಬೆ ದೇವಿ ದರ್ಶನ ಮಾಡಲು ಕೊನೆಯ ದಿವಸ ಬಿಡುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಸಭೆ ಮಾಡಿ ತೀರ್ಮಾನಿಸಲಾಗುವುದು. ಇಷ್ಟು ದಿನ ಶಾಂತ ರೀತಿಯಲ್ಲಿ ಜನತೆ ಸಹಕಾರ ಕೊಟ್ಟಿದ್ದಾರೆ. ತಾಯಿ ಕೃಪೆಯಿಂದ ಆದಷ್ಟು ಬೇಗ ಕೊರೋನಾದಿಂದ ದೂರ ಮಾಡಿ ಜನತೆ ಸುರಕ್ಷತೆಯಿಂದ ಇರಬೇಕು ಎಂದರು.

ಮುಂದೆ ಓದಿ ...
  • Share this:

ಹಾಸನ; ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಶಾಸಕ ಪ್ರೀತಂ ಜೆ. ಗೌಡ ಅವರು ಗುರುವಾರ ಸಂಜೆ ನಗರದ ಆದಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.


ಮೊದಲು ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದರ್ಭಾರ್ ಗಣಪತಿ ದೇವಸ್ಥಾನಕ್ಕೆ ತೆರಳಿದರು. ಕೊನೆಯಲ್ಲಿ ಶ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನಿಸಿ ಫಲಪುಷ್ಪ ನೀಡಿದರು.


ದರ್ಶನದ ಬಳಿಕ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಪ್ರತಿವರ್ಷ ಸಾರ್ವಜನಿಕರು ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದರು. ಆದರೆ ಈ ವರ್ಷ ಕೊರೋನಾ ಆವರಿಸಿರುವುದರಿಂದ ದೇವಿ ದರ್ಶನಕ್ಕೆ  ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಹೀಗಾಗಿ ದೇವಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರುವುದಿಲ್ಲ ಎಂದು ನೇರ ದರ್ಶನದಿಂದ ಭಕ್ತರು ವಂಚಿತರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.


ಇದನ್ನು ಓದಿ: ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ; ಶರಣಾಗುವಂತೆ ಗೃಹ ಸಚಿವರಿಂದ ಎಚ್ಚರಿಕೆ


ಆದಷ್ಟು ಬೇಗ ಕೊರೋನಾ ಜಗತ್ತಿನಿಂದ ಮುಕ್ತವಾಗಲಿ ಎಂದು ಪ್ರಾರ್ಥಿಸಲಾಗಿದೆ. ಈ ಜಗತ್ತು ತ್ರಿಗುಣಗಳಿಂದ ಕೂಡಿ ಮಾಯ ರೂಪದಿಂದ ಇರುವ ನವಬಂಧನದಲ್ಲಿ ಸಿಲುಕಿರುವ ಮನುಷ್ಯನಿಗೆ ಜ್ಞಾನದ ಮೂಲಕ ಮುಕ್ತಿ ಪಡೆಯಲು ಸಾಧ್ಯತೆ ಇದೆ. ಪಂಚ ಕೋಶಗಳಿಂದ ಕೂಡಿರುವ ದೇಹಗಳಲ್ಲಿ ಜ್ಞಾನವನ್ನು ಮಾಡಿ ಬದ್ಧನಾಗಿರುವ ಮೂಲಕ ಜೀವನ ಪಾವನ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.


​ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿ, ಭಕ್ತರಿಗೆ ಹಾಸನಾಂಬೆ ದೇವಿ ದರ್ಶನ ಮಾಡಲು ಕೊನೆಯ ದಿವಸ ಬಿಡುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಸಭೆ ಮಾಡಿ ತೀರ್ಮಾನಿಸಲಾಗುವುದು. ಇಷ್ಟು ದಿನ ಶಾಂತ ರೀತಿಯಲ್ಲಿ ಜನತೆ ಸಹಕಾರ ಕೊಟ್ಟಿದ್ದಾರೆ. ತಾಯಿ ಕೃಪೆಯಿಂದ ಆದಷ್ಟು ಬೇಗ ಕೊರೋನಾದಿಂದ ದೂರ ಮಾಡಿ ಜನತೆ ಸುರಕ್ಷತೆಯಿಂದ ಇರಬೇಕು. ಮುಖ್ಯಮಂತ್ರಿಗಳು ಹಾಸನಾಂಬೆ ದೇವಸ್ಥಾನಕ್ಕೆ ಬರುವಂತೆ ಪ್ರಾರಂಭದಲ್ಲೆ ಕೇಳಿದ್ದೆವು. ಬಾಗಿಲು ಹಾಕುವ ದಿನ ಬರುವಂತೆ ಮತ್ತೊಮ್ಮೆ ಕೇಳಲಾಗುವುದು ಎಂದು ತಿಳಿಸಿದರು.


ವರದಿ - ಡಿಎಂಜಿ ಹಳ್ಳಿ ಅಶೋಕ್

First published: