ಹುಬ್ಬಳ್ಳಿ(ಆಗಸ್ಟ್. 20): ಪ್ರಯಾಣಿಕರ ಬೇಡಿಕೆಯ ಮೇರೆಗೆ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ಧಾರ್ಮಿಕ ಕ್ಷೇತ್ರಗಳಿಗೆ ಸಂಚರಿಸುವ ಬಸ್ಗಳ ಸೇವೆಯನ್ನು ಮತ್ತೆ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಉಳವಿಗೆ ಒಂದು ಬಸ್ ಹಾಗೂ ಧರ್ಮಸ್ಥಳಕ್ಕೆ ಎರಡು ಬಸ್ಗಳನ್ನು ಪ್ರಾರಂಭಿಸಲಾಗಿದೆ. ಈ ಬಸ್ಗಳು ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಉಳವಿಗೆ ಹೋಗುವ ಬಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8 ಗಂಟೆಗೆ ಹೊರಡುತ್ತದೆ. ಧಾರವಾಡ, ಹಳಿಯಾಳ, ದಾಂಡೇಲಿ, ಜೋಯಿಡಾ, ಕುಂಬಾರವಾಡ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಉಳವಿ ತಲುಪುತ್ತದೆ. ಉಳವಿಯಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ಅದೇ ಮಾರ್ಗದಲ್ಲಿ ಸಂಜೆ 6.30 ಹುಬ್ಬಳ್ಳಿಗೆ ತಲುಪುತ್ತದೆ.
ಧರ್ಮಸ್ಥಳಕ್ಕೆ ಹೋಗಲು ಒಂದು ಬಸ್ ಅಂಕೋಲಾ ಮಾರ್ಗವಾಗಿ ಮತ್ತು ರಾತ್ರಿ ಒಂದು ಬಸ್ ಶಿರಸಿ ಮಾರ್ಗವಾಗಿ ತೆರಳಲಿವೆ. ಒಟ್ಟು ಎರಡು ಬಸ್ಗಳು ಹುಬ್ಬಳ್ಳಿಯಿಂದ ಹೊರಡುತ್ತವೆ. ಹುಬ್ಬಳಿಯಿಂದ ಬೆಳಿಗ್ಗೆ 7 ಗಂಟೆಗೆ ಹೊರಡುವ ಬಸ್ ಯಲ್ಲಾಪುರ, ಅಂಕೋಲಾ, ಕುಮಟಾ ಉಡುಪಿ ಮಾರ್ಗವಾಗಿ ಸಂಜೆ 6. 30ಕ್ಕೆ ಧರ್ಮಸ್ಥಳ ತಲುಪುತ್ತದೆ. ಮರುದಿನ ಬೆಳಿಗ್ಗೆ 5 .30ಕ್ಕೆ ಧರ್ಮಸ್ಥಳದಿಂದ ಹೊರಟು ಸಂಜೆ 4 .30ಕ್ಕೆ ಹುಬ್ಬಳ್ಳಿ ತಲುಪುತ್ತದೆ.
ಸಂಜೆ 6. 15ಕ್ಕೆ ಹುಬ್ಬಳ್ಳಿಯಿಂದ ಹೊರಡುವ ಬಸ್ ಮುಂಡಗೋಡ, ಶಿರಸಿ, ಕುಮಟಾ, ಉಡುಪಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 5. 30ಕ್ಕೆ ಧರ್ಮಸ್ಥಳ ತಲುಪುತ್ತದೆ. ಧರ್ಮಸ್ಥಳದಿಂದ ಸಂಜೆ 6. 15ಕ್ಕೆ ಹೊರಟು ಮರುದಿನ ಬೆಳಿಗ್ಗೆ 5. 30ಕ್ಕೆ ಹುಬ್ಬಳ್ಳಿ ತಲುಪುತ್ತದೆ.
ಇದನ್ನೂ ಓದಿ : ಹಾವೇರಿ - ಗಣೇಶೋತ್ಸವ ಹಾಗೂ ಮೊಹರಂ ಹಬ್ಬಗಳನ್ನು ಅತ್ಯಂತ ಸರಳವಾಗಿ ಆಚರಿಸಿ : ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಸಲಹೆ
ಸಾರ್ವಜನಿಕರು ಸದರಿ ಬಸ್ಗಳ ಸದುಪಯೋಗ ಪಡೆದುಕೊಳ್ಳಲು ಕೋರಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ ದಿನಗಳಲ್ಲಿ ದೂರ ಮಾರ್ಗದ ಬಸ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ