ಬೆಂಗಳೂರಿನಿಂದ ಕೇರಳದ ಕನ್ನೂರು ಜಿಲ್ಲೆಗೆ ಹೊರಟ್ಟಿದ್ದ ಸರ್ಕಾರಿ ಬಸ್ ಕರ್ನಾಟಕ-ಕೇರಳ ಗಡಿಯಲ್ಲಿ ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15 ಪ್ರಯಾಣಿಕರಿಗೆ ಗಾಯಗಳಾಗಿವೆ. ನಸುಕಿನ 4:45ರ ಸಮಯದಲ್ಲಿ ಚಾಲಕನ ನಿಯಂತ್ರ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಒಟ್ಟು 20 ಪ್ರಯಾಣಿಕರಿದ್ದರು. 15 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಅಪಘಾತಕ್ಕೆ ಬಲಿಯಾಗಿದ್ದಾರೆ. ಪೆರುಂಬೋಡಿ ಚೆಕ್ ಪೋಸ್ಟ್ ಸಮೀಪ ಅಪಘಾತ ಸಂಭವಿಸಿದೆ.
ಬಸ್ ನಿರ್ವಾಹಕ ಸೇರಿದಂತೆ 15 ಮಂದಿ ಗಾಯಾಳುಗಳನ್ನು ವೀರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವೋಲ್ವೋ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸ್ವಾಮಿ ಪ್ರಾಣ ಬಿಟ್ಟಿದ್ದಾರೆ ಎಂದು ವಿರಾಜಪೇಟೆ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ತಿಳಿಸಿದರು.
ನಸುಕಿನ ವೇಳೆ ಮಳೆ ಸುರಿಯುತ್ತಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬಸ್ನಲ್ಲಿ ಸಿಲಿಕಿದ್ದವರನ್ನು ಸ್ಥಳೀಯರು ಹೊರಕ್ಕೆ ತೆಗೆದಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಸಕಾಲಕ್ಕೆ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಬಸನ್ನು 2 ಕ್ರೇನ್ಗಳ ಮೂಲಕ ಪಕ್ಕಕ್ಕೆ ಸರಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕರ್ನಾಟಕ ಹಾಗೂ ಕೇರಳ ಅಗ್ನಿಶಾಮಕ ದಳಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.
ಇದನ್ನೂ ಓದಿ: Darshan vs Indrajit: ದರ್ಶನ್ ಬೆಂಬಲಿಗರು ಕಾಲ್ ಮಾಡಿ ಅಶ್ಲೀಲವಾಗಿ ನಿಂದಿಸುತ್ತಿದ್ದಾರೆ: ಇಂದ್ರಜಿತ್ ಆರೋಪ
2020ರ ಫೆಬ್ರವರಿಯಲ್ಲಿ ಎರ್ನಾಕುಲಂನಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್ ಅಪಘಾತಕ್ಕೀಡಾಗಿ 19 ಮಂದಿ ಪ್ರಯಾಣಿಕರು ದಾರುಣ ಅಂತ್ಯ ಕಂಡಿದ್ದರು. ಅಂದು ಸಹ ಸರ್ಕಾರಿ ವೋಲ್ವೋ ಬಸ್ಸೇ ದುರಂತಕ್ಕೀಡಾಗಿತ್ತು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ