• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಕೊಲೆಗಡುಕರಿಗೆ ಬಿಜೆಪಿ ಸರ್ಕಾರ ನೀಡುತ್ತಿರುವ ಬೆಂಬಲವೇ ದಲಿತರ ಹತ್ಯೆಗೆ ಕಾರಣ; ಸಿದ್ದರಾಮಯ್ಯ ಆರೋಪ

ಕೊಲೆಗಡುಕರಿಗೆ ಬಿಜೆಪಿ ಸರ್ಕಾರ ನೀಡುತ್ತಿರುವ ಬೆಂಬಲವೇ ದಲಿತರ ಹತ್ಯೆಗೆ ಕಾರಣ; ಸಿದ್ದರಾಮಯ್ಯ ಆರೋಪ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಹತ್ಯೆಗೀಡಾದ ಯುವಕ ಬೂದಿಹಾಳ ಪಿ.ಹೆಚ್. ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯಲ್ಲಿ ಮೇಲೆ ತಮಗೆ ಸರಿಸಮಾನಾಗಿ ಕುಳಿತಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಮೇಲ್ಜಾತಿಯ ಸಿದ್ದು ಸುಭಾಸ ಬಿರದಾರ ಎಂಬವರು ಆಕ್ಷೇಪಿಸಿ ಜಾತಿ ನಿಂದನೆ ಮಾಡಿದ್ದರು. ಆದರೆ, ಇಷ್ಟಕ್ಕೆ ಸುಮ್ಮನಾಗದ ಅವರು ನಿನ್ನೆ ಅನಿಲನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಆಗಸ್ಟ್‌ 28); ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ಸರ್ಕಾರ ನೀಡುತ್ತಿರುವ ಬೆಂಬಲವೇ ರಾಜ್ಯದಲ್ಲಿ ದಲಿತರ ಕೊಲೆಗಳಿಗೆ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


ದೇವಸ್ಥಾನದಲ್ಲಿ ತಮಗೆ ಸರಿಸಮಾನಾಗಿ ಕುಳಿತಿದ್ದಾರೆ ಎಂಬ ಕಾರಣಕ್ಕೆ ವಿಜಯಪುರದ ಸಿಂದಗಿ ತಾಲೂಕಿನಲ್ಲಿ 28 ವರ್ಷದ ಯುವಕ ಅನಿಲ ಇಂಗಳಗಿ ಅವರನ್ನು ಮೇಲ್ಜಾತಿಗೆ ಸೇರಿದ ಕೆಲವರು ನಿನ್ನೆ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಲೆ ಮಾಡಿದ್ದರು. ದಲಿತ ಯುವಕನ ಕೊಲೆ ಇದೀ ರಾಜ್ಯದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.



ಈ ಘಟನೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ಕಾರ್ಯವೈಖರಿ ಕುರಿತು ಟ್ವೀಟ್‌ ಮೂಲಕ ಇಂದು ಕಿಡಿಕಾರಿರುವ ಸಿದ್ದರಾಮಯ್ಯ, "ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ, ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಕರ್ನಾಟಕದ ಬಿಜೆಪಿ ಸರ್ಕಾರ ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ" ಎಂದು ಕಿಡಿಕಾರಿದ್ದಾರೆ.


ಮತ್ತೊಂದು ಟ್ವೀಟ್‌ನಲ್ಲಿ, "ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು. ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ : ನೆಲ ಜಲ ಭಾಷೆ ಮತ್ತು ನಾಡಿನ ಹೆಮ್ಮೆಯ ವಿಚಾರದಲ್ಲಿ ರಾಜಿ ಸಲ್ಲದು; ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ


ಹತ್ಯೆಗೀಡಾದ ಯುವಕ ಬೂದಿಹಾಳ ಪಿ.ಹೆಚ್. ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯಲ್ಲಿ ಮೇಲೆ ತಮಗೆ ಸರಿಸಮಾನಾಗಿ ಕುಳಿತಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಮೇಲ್ಜಾತಿಯ ಸಿದ್ದು ಸುಭಾಸ ಬಿರದಾರ ಎಂಬವರು ಆಕ್ಷೇಪಿಸಿ ಜಾತಿ ನಿಂದನೆ ಮಾಡಿದ್ದರು ಎಂದು ವರದಿ ಮಾಡಲಾಗಿತ್ತು.


ಈ ಘಟನೆಯ ಕಾರಣಕ್ಕೆ ಸಿದ್ದು ಸುಭಾಸ ತನ್ನ ಸಂಬಂಧಿ ಸಂತೋಷ ಎಂಬಾತನ ಜೊತೆಗೂಡಿ ಅನಿಲ ಇಂಗಳಗಿ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಚೂರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

top videos
    First published: