• ಹೋಂ
  • »
  • ನ್ಯೂಸ್
  • »
  • ಮನರಂಜನೆ
  • »
  • D Boss Darshan: ಭಾನುವಾರದ ಲಾಕ್​ಡೌನ್ ವೇಳೆ ಕಾಡಿಗೆ ಹೆಜ್ಜೆ ಇಟ್ಟ ಗಜ; ಗಿಡ ನೆಟ್ಟು ಅರಣ್ಯ ಇಲಾಖೆಗೆ ದರ್ಶನ್​ ಪ್ರೋತ್ಸಾಹ

D Boss Darshan: ಭಾನುವಾರದ ಲಾಕ್​ಡೌನ್ ವೇಳೆ ಕಾಡಿಗೆ ಹೆಜ್ಜೆ ಇಟ್ಟ ಗಜ; ಗಿಡ ನೆಟ್ಟು ಅರಣ್ಯ ಇಲಾಖೆಗೆ ದರ್ಶನ್​ ಪ್ರೋತ್ಸಾಹ

ದರ್ಶನ್

ದರ್ಶನ್

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ವನ್ಯಧಾಮದ ಕೊಳ್ಳೇಗಾಲ ಬಫರ್ ಝೋನಿನ ಸತ್ತೇಗಾಲ ಬಳಿ ಇರುವ ದೊಡ್ಡಮಾಕಳ್ಳಿ ಕಳ್ಳಭೇಟೆ ತಡೆ ಭೇಟೆ ಶಿಬಿರಕ್ಕೆ ನಿನ್ನೆ ದಿಢೀರ್​ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ ನಟ ದರ್ಶನ್. 

  • Share this:

ಚಾಮರಾಜನಗರ (ಜುಲೈ 27): ನಟ ದರ್ಶನ್​ ಸಿನಿಮಾ ಜತೆ ಜತೆಗೆ ಅರಣ್ಯ ಹಾಗೂ ಪ್ರಾಣಿಗಳ ರಕ್ಷಣೆ ಕಾಯಕದಲ್ಲೂ ತೊಡಗುತ್ತಾರೆ.  ಈ ಮೊದಲು ಸಮಯ ಸಿಕ್ಕಾಗೆಲ್ಲ ವನ್ಯಜೀವಿ ಛಾಯಾಗ್ರಹಣಕ್ಕೆ ತೆರಳುತ್ತಿದ್ದರು. ಆದರೆ, ಕೊರೋನಾ ವೈರಸ್​ ಇರುವುದರಿಂದ ಅದ್ಯಾವುದೂ ಸಾಧ್ಯವಾಗುತ್ತಿಲ್ಲ. ಹಾಗಂತ ದರ್ಶನ್​ ಸುಖಾ ಸುಮ್ಮನೆ ಕೂತಿಲ್ಲ.  ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಲೆಮಹದೇಶ್ವರಬೆಟ್ಟದ ಕಳ್ಳಭೇಟೆ ತಡೆ ಶಿಬಿರವೊಂದಕ್ಕೆ ಭೇಟಿ ನೀಡಿ ಗಿಡ ನೆಟ್ಟು ಅರಣ್ಯ ಸಿಬ್ಬಂದಿಯಲ್ಲಿ ಹುರುಪು ತುಂಬಿದ್ದಾರೆ 


ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ವನ್ಯಧಾಮದ ಕೊಳ್ಳೇಗಾಲ ಬಫರ್ ಝೋನಿನ ಸತ್ತೇಗಾಲ ಬಳಿ ಇರುವ ದೊಡ್ಡಮಾಕಳ್ಳಿ ಕಳ್ಳಭೇಟೆ ತಡೆ ಭೇಟೆ ಶಿಬಿರಕ್ಕೆ ನಿನ್ನೆ ದಿಡೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ ನಟ ದರ್ಶನ್.  ಅರಣ್ಯ ಸಿಬ್ಬಂದಿಯೊಂದಿಗೆ ವನ್ಯಸಂಪತ್ತು ಸಂರಕ್ಷಣೆಯ ಬಗ್ಗೆ ಕೆಲ ಹೊತ್ತು ಸಂವಹನ  ನಡೆಸಿದ್ದಾರೆ. ಇದೇ ವೇಳೆ ಶಿಬಿರದ ಬಳಿ ಗಿಡ ನೆಟ್ಟು ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಭೇಟಿ ವೇಳೆ ಹಾಸ್ಯನಟ ಚಿಕ್ಕಣ್ಣ  ಕೂಡ ದರ್ಶನ್ ಗೆ ಸಾಥ್  ನೀಡಿದ್ದಾರೆ.




ರೈತರನ್ನು ಅರಣ್ಯ ಕೃಷಿಯತ್ತ ಆಕರ್ಷಿಸಲು ಅರಣ್ಯ ಇಲಾಖೆ ಪ್ರೋತ್ಸಾಹಧನ ನೀಡುವ ಯೋಜನೆ ಇದಾಗಿದೆ. ಅರಣ್ಯ ಇಲಾಖೆಯ ಯೋಜನೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ನಟ ದರ್ಶನ್ ಗೆ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯಸಂರಕ್ಷಣಾಧಿಕಾರಿ ಯೇಡುಕೊಂಡಲು ಧನ್ಯವಾದ ಹೇಳಿದ್ದಾರೆ.


ಅತ್ಯುತ್ತಮ ವನ್ಯಜೀವಿ ಫೋಟೋಗ್ರಾಫರ್ ಕೂಡ ಆಗಿರುವ ನಟ ದರ್ಶನ್ ತಾವು ತೆಗೆದ ಛಾಯಾಚಿತ್ರಗಳನ್ನು ಮಾರಾಟ ಮಾಡಿ ಅದರಿಂದ ಬರುವ ಹಣವನ್ನು ಅರಣ್ಯಸಿಬ್ಬಂದಿಯ ಕ್ಷೇಮ ನಿಧಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಬಿಡುವಿಲ್ಲದ ಶೂಟಿಂಗ್ ನಡುವೆಯು  ಆಗಾಗ್ಗೆ ಅರಣ್ಯ ಪ್ರದೇಶಗಳಿ ಭೇಟಿ   ನೀಡುವ ದರ್ಶನ್ ಅರಣ್ಯ ಸಿಬ್ಬಂದಿಯೊಂದಿಗೆ ಚರ್ಚೆ ಸಂವಾದ ನಡೆಸುತ್ತಾ   ಅವರ ಕಷ್ಟ ಸುಖ ವಿಚಾರಿಸುತ್ತಾ   ಸಹಾಯ ಹಸ್ತ ಚಾಚುತ್ತಾ     ನೈತಿಕ  ಸ್ಥೈರ್ಯ ತುಂಬುತ್ತಾ ಬಂದಿದ್ದಾರೆ.


ಇನ್ನು, ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದರ್ಶನ್​ ದತ್ತು ಪಡೆದಿದ್ದಾರೆ. ಸದ್ಯ, ಅವರ ಪ್ರಾಣಿ ಪ್ರೀತಿ ಹಾಗೂ ಅರಣ್ಯ ರಕ್ಷಣೆಗೆ ಅವರು ಪಣ ತೊಟ್ಟಿರುವ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Published by:Rajesh Duggumane
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು