ಮಾರ್ಚ್ 25ರಂದಯ ‘ಆರ್ಆರ್ಆರ್’ (RRR) ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಹೀಗಾಗಿ ಚಿತ್ರತಂಡ ಈಗಾಗಲೇ ಬೆಂಗಳೂರು (Bengaluru), ಆಂಧ್ರ, ತಮಿಳುನಾಡು, ಕೇರಳ, ಮುಂಬೈನಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಎಸ್.ಎಸ್.ರಾಜಮೌಳಿ (S.S Rajamouli) ಅಂದರೆ ಅಲ್ಲಿ ಹೊಸತನ ಇರುತ್ತೆ. ಅದು ಚಿತ್ರದಲ್ಲಿ ಆಗಲಿ, ಸಿನಿಮಾದ ಪ್ರಚಾರದಲ್ಲಿ ಆಗಲಿ, ವಿಭಿನ್ನವಾಗಿಯೇ ಪ್ರಮೋಷನ್ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಇನ್ನೂ 13 ದಿನ ಬಾಕಿ ಇರುವಾಗಲೇ ರಾಜಮೌಳಿ ಪ್ರಚಾರದ ಅಖಾಡಕ್ಕೆ ಎಂಟ್ರಿಕೊಟ್ಟಿದ್ದರು. ಜೂ.ಎನ್ಟಿಆರ್ (Jr.NTR), ರಾಮಚರಣ್ (Ramcharan), ಆಲಿಯಾ ಭಟ್ (Alia Bhatt), ಎಸ್.ಎಸ್.ರಾಜಮೌಳಿ ಪ್ರಮುಖ ರಾಜ್ಯಗಳಲ್ಲಿ ಈಗಾಗಲೇ ಪ್ರಚಾರ ನಡೆಸಿದ್ದಾರೆ.ಇದೀಗ ಮಾರ್ಚ್ 19ಕ್ಕೆ ರಾಜ್ಯದಲ್ಲಿ ಆರ್ಆರ್ಆರ್ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಕಾರ್ಯಕ್ರಮ!
ಕನ್ನಡದ ಹೆಮ್ಮೆಯ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಭಾರತದ ಬಹುನಿರೀಕ್ಷಿತ ಸಿನಿಮಾ ರಾಜಮೌಳಿ ನಿರ್ದೇಶನದ ‘ರೌದ್ರ ರಣಂ ರುಧಿರಂ’ ಸಿನಿಮಾದ ಎಲ್ಲಾ ಭಾಷೆಗಳ ಕರ್ನಾಟಕ ರಾಜ್ಯದ ವಿತರಣ ಹಕ್ಕನ್ನು ದೊಡ್ಡ ಮೊತ್ತಕ್ಕೆ ಖರೀದಿ ಮಾಡಿದೆ. ಭಾರತೀಯ ಚಿತ್ರರಂಗದ ಅತಿ ದೊಡ್ಡ ಸಿನಿಮಾವೆಂದೆ ಬಿಂಬಿತವಾರಗಿರುವ ‘ಆರ್ಆರ್ಆರ್’
ಚಿತ್ರದ ಪ್ರೀ ರಿಲೀಸ್ ಇವೆಂಟ್ ಅನ್ನು ಕೆ.ವಿ.ಎನ್ ಪ್ರೋಡಕ್ಷನ್ ದಾಖಲೆ ಮಟ್ಟಕ್ಕೆ ಆಯೋಜಿಸಿದೆ. ಭಾರತೀಯ ಚಿತ್ರರಂಗದಲ್ಲಿ ಹಿಂದೆಂದೂ ಯಾರು ಕಂಡು ಕೇಳರಿಯದ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮಾರ್ಚ್ 19ರ ಸಂಜೆ ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆಯುತ್ತಿದೆ.
ಪವರ್ ಸ್ಟಾರ್ ಪುನೀತ್ಗೆ ಈ ಕಾರ್ಯಕ್ರಮ ಅರ್ಪಣೆ!
ಇನ್ನೂ ಈ ಕಾರ್ಯಕ್ರಮವನ್ನು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ‘ಆರ್ಆರ್ಆರ್’ ಚಿತ್ರತಂಡ ಅರ್ಪಿಸುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 20 ನಿಮಿಷಕ್ಕೆ ತಲುಪವಷ್ಟು ದೂರದಲ್ಲಿ ಇವೆಂಟ್ ನಡೆಯುತ್ತಿದೆ. ಇನ್ನೂ ಇದೇ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಟ್ರಿಬ್ಯೂಟ್ ನೀಡುವ ಪರ್ಫಾಮೆನ್ಸ್ ಕೂಡ ಇದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ದಾಖಲೆ ಮಟ್ಟದ ಕಾರ್ಯಕ್ರಮದ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: 'RRR' ಪ್ರಮೋಷನ್, ಪೋಸ್ಟರ್ಗೆ ಎಷ್ಟು ಖರ್ಚಾಗಿದೆ? ಈ ಹಣದಲ್ಲಿ ಇನ್ನೊಂದು ಚಿತ್ರ ಮಾಡಬಹುದಿತ್ತು!
ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿನ ಜನ ಸೇರುವ ಸಾಧ್ಯತೆ!
ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಯಲಿದೆ. ಎಲ್ಲ ಘಟಾನುಘಟಿ ನಾಯಕರು ಒಂದೇ ವೇದಿಕೆ ಮೇಲೆ ಸೇರತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಜೂ.ಎನ್ಟಿಆರ್, ಹಾಗೂ ರಾಮಚರಣ್ಗೆ ಬೆಂಗಳೂರಿನಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇವರೆಲ್ಲ ಈ ದಾಖಲೆ ಮಟ್ಟದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಒಂದೇ ವೇದಿಕೆಯಲ್ಲಿ ಘಟಾನುಘಟಿಗಳ ಸಮಾಗಮ!
ಆತಿಥಿಗಳಾಗಿ ಮುಖ್ಯಮಂತ್ರಿ ಬೊಸವರಾಜ ಬೊಮ್ಮಾಯಿ, ರಾಕಿಂಗ್ ಸ್ಟಾರ್ ಯಶ್, ಶಿವರಾಜ್ಕುಮಾರ್, ಉಪೇಂದ್ರ ಹಾಗೂ ಧ್ರುವ ಸರ್ಜಾ ಆಗಮಿಸುತ್ತಿದ್ದಾರೆ. ಈ ಮೂಲಕ ಕಾರ್ಯಕ್ರಮದ ರಂಗನ್ನು ಇವರು ಹೆಚ್ಚಿಸಲಿದ್ದಾರೆ.ಇವರ ಜತೆಗೆ ಇಡೀ ಸಿನಿಮಾ ತಂಡ ಇರಲಿದೆ ಎನ್ನಲಾಗಿದೆ. ನಿರ್ದೇಶಕ ಎಸ್.ಎಸ್. ರಾಜಮೌಳಿ, ನಟ ಜ್ಯೂ.ಎನ್ಟಿಆರ್, ರಾಮ್ ಚರಣ್, ನಟಿ ಆಲಿಯಾ ಭಟ್ ಈ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ, ದೊಡ್ಡ ಮಟ್ಟದಲ್ಲಿಯೇ ಈ ಕಾರ್ಯಕ್ರಮ ನಡೆಯುತ್ತಿದೆ.
ಇದನ್ನೂ ಓದಿ: RRR ಮೇಲೆ KGF- 2 ಅಭಿಮಾನಿಗಳ ಕಿಡಿ: KGF ಪ್ರಚಾರದ ವಿಳಂಬಕ್ಕೆ ರಾಜಮೌಳಿ ಕಾರಣ ಎನ್ನುತ್ತಿದ್ದಾರೆ ಅಭಿಮಾನಿಗಳು
52 ಸಾವಿರ ಚದುರಡಿಯ ಬೃಹತ್ ಎಲ್ಇಡಿ ಸ್ಕ್ರೀನ್ ಹಾಗೂ 42 ಬೃಹತ್ ಲೇಸರ್ ಲೈಟ್ಗಳ ಬಹುದೊಡ್ಡ ಸ್ಟೇಜ್ ಇದಕ್ಕಾಗಿ ಸಿದ್ದವಾಗುತ್ತಿದೆ. ಇದು ಅಭಿಮಾನಿಗಳ ಕಣ್ಣಿಗೆ ಹಬ್ಬದಂತಿರುತ್ತದೆ. ಸುಮಾರು 100 ಎಕರೆ ಜಾಗದ ಬೃಹತ್ ಮೈದಾನದಲ್ಲಿ ಈ ಅದ್ದೂರಿ ಕಾರ್ಯಕ್ರಮ ಆಯೋಜನೆ ಆಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ